ಬಲಿಗಾಗಿ ಕಾದಿವೆ 500ಕ್ಕೂ ಹೆಚ್ಚು ಗುಂಡಿಗಳು: ವಾಹನ ಸವಾರರೇ ಎಚ್ಚರ ರಸ್ತೆಗಿಳಿಯುವ ಮುನ್ನ..!

ನಗರದಲ್ಲಿ ವಾಹನ ಸವಾರರು ಸುಗಮವಾಗಿ ಸಂಚರಿಸಲು ಅಸಾಧ್ಯವಾಗಿದೆ. ಏಕೆಂದರೆ ರಸ್ತೆಯಲ್ಲಿ ಬಲಿಗಾಗಿ ಕಾಯುತ್ತಿರುವ ಯಮರೂಪಿ ಗುಂಡಿಗಳು.

ಹಲವು ಕಡೆ ಕಳಪೆ ರಸ್ತೆ ಡಾಂಬರೀಕರಣ ಆಗಿರುವುದರಿಂದ ಗುಂಡಿಗಳು ಬಿದ್ದಿವೆ. ಅವೈಜ್ಞಾನಿಕ ಹಂಪ್, ಕೇಬಲ್ ಅಳವಡಿಕೆಗೆ ರಸ್ತೆ ಅಗೆತ ಸೇರಿದಂತೆ ವಿವಿಧ ಅಭಿವೃದ್ದಿ ಕಾರ್ಯದ ನೆಪದಲ್ಲಿ ರಸ್ತೆ ಅಗೆದು ಟಾರ್ ಹಾಕದೇ ಬಿಡಲಾಗಿದೆ. ಇವೆಲ್ಲದರ ನಡುವೆ ಮಳೆ ಪರಿಣಾಮ ರಸ್ತೆಗಳಲ್ಲಿ ಗುಂಡಿಗಳಾಗಿವೆ. ಮಳೆ ಬಂದರೆ ಗುಂಡಿಗಳು ಕೆರೆಗಳಾಗಿ ಪರಿವರ್ತನೆಯಾಗುತ್ತವೆ. ಇದರಿಂದಾಗಿ ವಾಹನ ಸವಾರರು ಸುಗಮವಾಗಿ ಸಂಚರಿಸಲು ಆಗದೆ ಹಿಡಿಶಾಪ ಹಾಕುತ್ತಿದ್ದಾರೆ.

ಈಗಾಗಲೇ ರಸ್ತೆ ಗುಂಡಿಗಳನ್ನು ತಪ್ಪಿಸಲು ಹೋಗಿ ನಗರದಲ್ಲಿ ಹಲವಾರು ಅಪಘಾತಗಳು ನಡೆದಿವೆ. ಇನ್ನು ಮಳೆಗಾಲ ಆರಂಭವಾಗುತ್ತಿದೆ. ರಸ್ತೆ ಗುಂಡಿಗಳಲ್ಲಿ ನೀರು ತುಂಬಿಕೊಂಡು ಅಪಘಾತಕ್ಕೆ ಆಹ್ವಾನ ನೀಡುತ್ತಿವೆ.

ನಗರದ ರಸ್ತೆಗಳಲ್ಲಿ ಗುಂಡಿಗಳು ಇವೆ, ಇದರಿಂದ ವಾಹನ ಸವಾರರಿಗೆ ತೊಂದರೆ ಆಗುತ್ತಿದೆ, ಆನೇಕ‌ ಜ‌ನರು ಗಾಡಿಗಳನ್ನು ಗೊತ್ತಿಲ್ಲದೆ ಆಕಸ್ಮಿಕವಾಗಿ ಗುಂಡಿಗೆ ಇಳಿಸಿ ಕೈಕಾಲು ಮುರಿದುಕೊಂಡಿದ್ದಾರೆ. ಇಷ್ಟಾದರೂ ಸಂಬಂಧಿಸಿದ ಇಲಾಖೆ ಗುಂಡಿ ಮುಚ್ಚುವ ಕೆಲಸ‌ ಮಾಡುತ್ತಿಲ್ಲ. ಇಲಾಖೆಗಳು, ಜನಪತ್ರಿನಿಧಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರು ತುಂಬಾ ತೊಂದರೆಗೊಳಗಾಗುತ್ತಿದ್ದಾರೆ ಎಂದು ನಗರದ ನಿವಾಸಿ ಕಾರ್ತಿಕ್ ಆಕ್ರೋಶ ವ್ಯಕ್ತಪಡಿಸಿದರು.

ಗುಂಡಿಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರು ಪ್ರಯೋಜನ ಆಗಲಿಲ್ಲ, ಇದರಿಂದ ಬೇಸತ್ತು ಸಾರ್ವಜನಿಕರೇ ಕೆಲವು ಕಡೆ ಮಣ್ಣಿನಿಂದ ಗುಂಡಿ‌ ಮುಚ್ಚಿ ಓಡಾಡುತ್ತಿದ್ದಾರೆ ಎಂದರು.

ಒಟ್ಟಾರೆ ನಗರದ ರಸ್ತೆ ಗುಂಡಿಗಳಿಗೆ ಯಾವಾಗ ಮುಕ್ತಿ ಸಿಗಲಿದೆ, ಇನ್ನಾದರೂ ಗುಂಡಿ‌ ಮುಕ್ತ ನಗರ ಆಗುತ್ತಾ ಎಂದು ಕಾದು ನೋಡಬೇಕಿದೆ.

Ramesh Babu

Journalist

Recent Posts

ಖಾಯಂ ನೇಮಕಾತಿ, ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ಪರವಾನಗಿ ಭೂಮಾಪಕರ ಪ್ರತಿಭಟನೆ

ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…

8 hours ago

ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

10 hours ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…

10 hours ago

ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಹೆಚ್ಚಿದ ಕರಡಿ ಹಾವಳಿ: ಜೀವ ಭಯದಲ್ಲಿ ರೈತರು

ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…

11 hours ago

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…

15 hours ago

ಬೆಳ್ಳಂಬೆಳಗ್ಗೆ ಮಾಂಗಲ್ಯ ಸರ ಕದ್ದ ಕಳ್ಳ: ಮಹಿಳೆ ವಾಕಿಂಗ್ ಮಾಡುವ ವೇಳೆ ಘಟನೆ

ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ‌ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…

16 hours ago