ಬಲಿಗಾಗಿ ಕಾದಿವೆ 500ಕ್ಕೂ ಹೆಚ್ಚು ಗುಂಡಿಗಳು: ವಾಹನ ಸವಾರರೇ ಎಚ್ಚರ ರಸ್ತೆಗಿಳಿಯುವ ಮುನ್ನ..!

ನಗರದಲ್ಲಿ ವಾಹನ ಸವಾರರು ಸುಗಮವಾಗಿ ಸಂಚರಿಸಲು ಅಸಾಧ್ಯವಾಗಿದೆ. ಏಕೆಂದರೆ ರಸ್ತೆಯಲ್ಲಿ ಬಲಿಗಾಗಿ ಕಾಯುತ್ತಿರುವ ಯಮರೂಪಿ ಗುಂಡಿಗಳು.

ಹಲವು ಕಡೆ ಕಳಪೆ ರಸ್ತೆ ಡಾಂಬರೀಕರಣ ಆಗಿರುವುದರಿಂದ ಗುಂಡಿಗಳು ಬಿದ್ದಿವೆ. ಅವೈಜ್ಞಾನಿಕ ಹಂಪ್, ಕೇಬಲ್ ಅಳವಡಿಕೆಗೆ ರಸ್ತೆ ಅಗೆತ ಸೇರಿದಂತೆ ವಿವಿಧ ಅಭಿವೃದ್ದಿ ಕಾರ್ಯದ ನೆಪದಲ್ಲಿ ರಸ್ತೆ ಅಗೆದು ಟಾರ್ ಹಾಕದೇ ಬಿಡಲಾಗಿದೆ. ಇವೆಲ್ಲದರ ನಡುವೆ ಮಳೆ ಪರಿಣಾಮ ರಸ್ತೆಗಳಲ್ಲಿ ಗುಂಡಿಗಳಾಗಿವೆ. ಮಳೆ ಬಂದರೆ ಗುಂಡಿಗಳು ಕೆರೆಗಳಾಗಿ ಪರಿವರ್ತನೆಯಾಗುತ್ತವೆ. ಇದರಿಂದಾಗಿ ವಾಹನ ಸವಾರರು ಸುಗಮವಾಗಿ ಸಂಚರಿಸಲು ಆಗದೆ ಹಿಡಿಶಾಪ ಹಾಕುತ್ತಿದ್ದಾರೆ.

ಈಗಾಗಲೇ ರಸ್ತೆ ಗುಂಡಿಗಳನ್ನು ತಪ್ಪಿಸಲು ಹೋಗಿ ನಗರದಲ್ಲಿ ಹಲವಾರು ಅಪಘಾತಗಳು ನಡೆದಿವೆ. ಇನ್ನು ಮಳೆಗಾಲ ಆರಂಭವಾಗುತ್ತಿದೆ. ರಸ್ತೆ ಗುಂಡಿಗಳಲ್ಲಿ ನೀರು ತುಂಬಿಕೊಂಡು ಅಪಘಾತಕ್ಕೆ ಆಹ್ವಾನ ನೀಡುತ್ತಿವೆ.

ನಗರದ ರಸ್ತೆಗಳಲ್ಲಿ ಗುಂಡಿಗಳು ಇವೆ, ಇದರಿಂದ ವಾಹನ ಸವಾರರಿಗೆ ತೊಂದರೆ ಆಗುತ್ತಿದೆ, ಆನೇಕ‌ ಜ‌ನರು ಗಾಡಿಗಳನ್ನು ಗೊತ್ತಿಲ್ಲದೆ ಆಕಸ್ಮಿಕವಾಗಿ ಗುಂಡಿಗೆ ಇಳಿಸಿ ಕೈಕಾಲು ಮುರಿದುಕೊಂಡಿದ್ದಾರೆ. ಇಷ್ಟಾದರೂ ಸಂಬಂಧಿಸಿದ ಇಲಾಖೆ ಗುಂಡಿ ಮುಚ್ಚುವ ಕೆಲಸ‌ ಮಾಡುತ್ತಿಲ್ಲ. ಇಲಾಖೆಗಳು, ಜನಪತ್ರಿನಿಧಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರು ತುಂಬಾ ತೊಂದರೆಗೊಳಗಾಗುತ್ತಿದ್ದಾರೆ ಎಂದು ನಗರದ ನಿವಾಸಿ ಕಾರ್ತಿಕ್ ಆಕ್ರೋಶ ವ್ಯಕ್ತಪಡಿಸಿದರು.

ಗುಂಡಿಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರು ಪ್ರಯೋಜನ ಆಗಲಿಲ್ಲ, ಇದರಿಂದ ಬೇಸತ್ತು ಸಾರ್ವಜನಿಕರೇ ಕೆಲವು ಕಡೆ ಮಣ್ಣಿನಿಂದ ಗುಂಡಿ‌ ಮುಚ್ಚಿ ಓಡಾಡುತ್ತಿದ್ದಾರೆ ಎಂದರು.

ಒಟ್ಟಾರೆ ನಗರದ ರಸ್ತೆ ಗುಂಡಿಗಳಿಗೆ ಯಾವಾಗ ಮುಕ್ತಿ ಸಿಗಲಿದೆ, ಇನ್ನಾದರೂ ಗುಂಡಿ‌ ಮುಕ್ತ ನಗರ ಆಗುತ್ತಾ ಎಂದು ಕಾದು ನೋಡಬೇಕಿದೆ.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

7 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

8 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

9 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

9 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

13 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

15 hours ago