ಬಲಿಗಾಗಿ ಕಾದಿವೆ 500ಕ್ಕೂ ಹೆಚ್ಚು ಗುಂಡಿಗಳು: ವಾಹನ ಸವಾರರೇ ಎಚ್ಚರ ರಸ್ತೆಗಿಳಿಯುವ ಮುನ್ನ..!

ನಗರದಲ್ಲಿ ವಾಹನ ಸವಾರರು ಸುಗಮವಾಗಿ ಸಂಚರಿಸಲು ಅಸಾಧ್ಯವಾಗಿದೆ. ಏಕೆಂದರೆ ರಸ್ತೆಯಲ್ಲಿ ಬಲಿಗಾಗಿ ಕಾಯುತ್ತಿರುವ ಯಮರೂಪಿ ಗುಂಡಿಗಳು.

ಹಲವು ಕಡೆ ಕಳಪೆ ರಸ್ತೆ ಡಾಂಬರೀಕರಣ ಆಗಿರುವುದರಿಂದ ಗುಂಡಿಗಳು ಬಿದ್ದಿವೆ. ಅವೈಜ್ಞಾನಿಕ ಹಂಪ್, ಕೇಬಲ್ ಅಳವಡಿಕೆಗೆ ರಸ್ತೆ ಅಗೆತ ಸೇರಿದಂತೆ ವಿವಿಧ ಅಭಿವೃದ್ದಿ ಕಾರ್ಯದ ನೆಪದಲ್ಲಿ ರಸ್ತೆ ಅಗೆದು ಟಾರ್ ಹಾಕದೇ ಬಿಡಲಾಗಿದೆ. ಇವೆಲ್ಲದರ ನಡುವೆ ಮಳೆ ಪರಿಣಾಮ ರಸ್ತೆಗಳಲ್ಲಿ ಗುಂಡಿಗಳಾಗಿವೆ. ಮಳೆ ಬಂದರೆ ಗುಂಡಿಗಳು ಕೆರೆಗಳಾಗಿ ಪರಿವರ್ತನೆಯಾಗುತ್ತವೆ. ಇದರಿಂದಾಗಿ ವಾಹನ ಸವಾರರು ಸುಗಮವಾಗಿ ಸಂಚರಿಸಲು ಆಗದೆ ಹಿಡಿಶಾಪ ಹಾಕುತ್ತಿದ್ದಾರೆ.

ಈಗಾಗಲೇ ರಸ್ತೆ ಗುಂಡಿಗಳನ್ನು ತಪ್ಪಿಸಲು ಹೋಗಿ ನಗರದಲ್ಲಿ ಹಲವಾರು ಅಪಘಾತಗಳು ನಡೆದಿವೆ. ಇನ್ನು ಮಳೆಗಾಲ ಆರಂಭವಾಗುತ್ತಿದೆ. ರಸ್ತೆ ಗುಂಡಿಗಳಲ್ಲಿ ನೀರು ತುಂಬಿಕೊಂಡು ಅಪಘಾತಕ್ಕೆ ಆಹ್ವಾನ ನೀಡುತ್ತಿವೆ.

ನಗರದ ರಸ್ತೆಗಳಲ್ಲಿ ಗುಂಡಿಗಳು ಇವೆ, ಇದರಿಂದ ವಾಹನ ಸವಾರರಿಗೆ ತೊಂದರೆ ಆಗುತ್ತಿದೆ, ಆನೇಕ‌ ಜ‌ನರು ಗಾಡಿಗಳನ್ನು ಗೊತ್ತಿಲ್ಲದೆ ಆಕಸ್ಮಿಕವಾಗಿ ಗುಂಡಿಗೆ ಇಳಿಸಿ ಕೈಕಾಲು ಮುರಿದುಕೊಂಡಿದ್ದಾರೆ. ಇಷ್ಟಾದರೂ ಸಂಬಂಧಿಸಿದ ಇಲಾಖೆ ಗುಂಡಿ ಮುಚ್ಚುವ ಕೆಲಸ‌ ಮಾಡುತ್ತಿಲ್ಲ. ಇಲಾಖೆಗಳು, ಜನಪತ್ರಿನಿಧಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರು ತುಂಬಾ ತೊಂದರೆಗೊಳಗಾಗುತ್ತಿದ್ದಾರೆ ಎಂದು ನಗರದ ನಿವಾಸಿ ಕಾರ್ತಿಕ್ ಆಕ್ರೋಶ ವ್ಯಕ್ತಪಡಿಸಿದರು.

ಗುಂಡಿಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರು ಪ್ರಯೋಜನ ಆಗಲಿಲ್ಲ, ಇದರಿಂದ ಬೇಸತ್ತು ಸಾರ್ವಜನಿಕರೇ ಕೆಲವು ಕಡೆ ಮಣ್ಣಿನಿಂದ ಗುಂಡಿ‌ ಮುಚ್ಚಿ ಓಡಾಡುತ್ತಿದ್ದಾರೆ ಎಂದರು.

ಒಟ್ಟಾರೆ ನಗರದ ರಸ್ತೆ ಗುಂಡಿಗಳಿಗೆ ಯಾವಾಗ ಮುಕ್ತಿ ಸಿಗಲಿದೆ, ಇನ್ನಾದರೂ ಗುಂಡಿ‌ ಮುಕ್ತ ನಗರ ಆಗುತ್ತಾ ಎಂದು ಕಾದು ನೋಡಬೇಕಿದೆ.

Ramesh Babu

Journalist

Recent Posts

‘ಫೊರೆನ್ಸಿಕ್ ತನಿಖೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮುಂಚೂಣಿ ಸ್ಥಾನ’-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…

3 hours ago

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

7 hours ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

8 hours ago

ದೊಡ್ಡಬೆಲವಂಗಲ ಠಾಣೆ ಇನ್ಸ್‌ಪೆಕ್ಟರ್ ಕಲ್ಲಪ್ಪ ಎಸ್. ಖರತ್‌ಗೆ ಡಿಜಿ-ಐಜಿಪಿ ಪ್ರಶಂಸನಾ ಪದಕ

ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…

10 hours ago

ಕೆಐಎಎಲ್ ನಲ್ಲಿ ಸರಣಿ ಕಳ್ಳಸಾಗಣೆ ಪ್ರಕರಣಗಳು ಪತ್ತೆ: ₹4.33 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತು, ಚಿನ್ನ ವಶ

ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…

10 hours ago

ಯುವತಿಯ ಕುರಿತು ಅಪಪ್ರಚಾರದ ದ್ವೇಷ: ರೌಡಿ ಶೀಟರ್ ಖಲೀಮ್‌ನ ಬರ್ಬರ ಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಕುಟುಂಬದ ಬಗ್ಗೆ ಅವಹೇಳನ ಆರೋಪ: 7 ಮಂದಿಯ ತಂಡದ ಸಂಚು, 5 ಆರೋಪಿಗಳ ಬಂಧನ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…

14 hours ago