ಬಲಿಗಾಗಿ ಕಾದಿವೆ 500ಕ್ಕೂ ಹೆಚ್ಚು ಗುಂಡಿಗಳು: ವಾಹನ ಸವಾರರೇ ಎಚ್ಚರ ರಸ್ತೆಗಿಳಿಯುವ ಮುನ್ನ..!

ನಗರದಲ್ಲಿ ವಾಹನ ಸವಾರರು ಸುಗಮವಾಗಿ ಸಂಚರಿಸಲು ಅಸಾಧ್ಯವಾಗಿದೆ. ಏಕೆಂದರೆ ರಸ್ತೆಯಲ್ಲಿ ಬಲಿಗಾಗಿ ಕಾಯುತ್ತಿರುವ ಯಮರೂಪಿ ಗುಂಡಿಗಳು.

ಹಲವು ಕಡೆ ಕಳಪೆ ರಸ್ತೆ ಡಾಂಬರೀಕರಣ ಆಗಿರುವುದರಿಂದ ಗುಂಡಿಗಳು ಬಿದ್ದಿವೆ. ಅವೈಜ್ಞಾನಿಕ ಹಂಪ್, ಕೇಬಲ್ ಅಳವಡಿಕೆಗೆ ರಸ್ತೆ ಅಗೆತ ಸೇರಿದಂತೆ ವಿವಿಧ ಅಭಿವೃದ್ದಿ ಕಾರ್ಯದ ನೆಪದಲ್ಲಿ ರಸ್ತೆ ಅಗೆದು ಟಾರ್ ಹಾಕದೇ ಬಿಡಲಾಗಿದೆ. ಇವೆಲ್ಲದರ ನಡುವೆ ಮಳೆ ಪರಿಣಾಮ ರಸ್ತೆಗಳಲ್ಲಿ ಗುಂಡಿಗಳಾಗಿವೆ. ಮಳೆ ಬಂದರೆ ಗುಂಡಿಗಳು ಕೆರೆಗಳಾಗಿ ಪರಿವರ್ತನೆಯಾಗುತ್ತವೆ. ಇದರಿಂದಾಗಿ ವಾಹನ ಸವಾರರು ಸುಗಮವಾಗಿ ಸಂಚರಿಸಲು ಆಗದೆ ಹಿಡಿಶಾಪ ಹಾಕುತ್ತಿದ್ದಾರೆ.

ಈಗಾಗಲೇ ರಸ್ತೆ ಗುಂಡಿಗಳನ್ನು ತಪ್ಪಿಸಲು ಹೋಗಿ ನಗರದಲ್ಲಿ ಹಲವಾರು ಅಪಘಾತಗಳು ನಡೆದಿವೆ. ಇನ್ನು ಮಳೆಗಾಲ ಆರಂಭವಾಗುತ್ತಿದೆ. ರಸ್ತೆ ಗುಂಡಿಗಳಲ್ಲಿ ನೀರು ತುಂಬಿಕೊಂಡು ಅಪಘಾತಕ್ಕೆ ಆಹ್ವಾನ ನೀಡುತ್ತಿವೆ.

ನಗರದ ರಸ್ತೆಗಳಲ್ಲಿ ಗುಂಡಿಗಳು ಇವೆ, ಇದರಿಂದ ವಾಹನ ಸವಾರರಿಗೆ ತೊಂದರೆ ಆಗುತ್ತಿದೆ, ಆನೇಕ‌ ಜ‌ನರು ಗಾಡಿಗಳನ್ನು ಗೊತ್ತಿಲ್ಲದೆ ಆಕಸ್ಮಿಕವಾಗಿ ಗುಂಡಿಗೆ ಇಳಿಸಿ ಕೈಕಾಲು ಮುರಿದುಕೊಂಡಿದ್ದಾರೆ. ಇಷ್ಟಾದರೂ ಸಂಬಂಧಿಸಿದ ಇಲಾಖೆ ಗುಂಡಿ ಮುಚ್ಚುವ ಕೆಲಸ‌ ಮಾಡುತ್ತಿಲ್ಲ. ಇಲಾಖೆಗಳು, ಜನಪತ್ರಿನಿಧಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರು ತುಂಬಾ ತೊಂದರೆಗೊಳಗಾಗುತ್ತಿದ್ದಾರೆ ಎಂದು ನಗರದ ನಿವಾಸಿ ಕಾರ್ತಿಕ್ ಆಕ್ರೋಶ ವ್ಯಕ್ತಪಡಿಸಿದರು.

ಗುಂಡಿಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರು ಪ್ರಯೋಜನ ಆಗಲಿಲ್ಲ, ಇದರಿಂದ ಬೇಸತ್ತು ಸಾರ್ವಜನಿಕರೇ ಕೆಲವು ಕಡೆ ಮಣ್ಣಿನಿಂದ ಗುಂಡಿ‌ ಮುಚ್ಚಿ ಓಡಾಡುತ್ತಿದ್ದಾರೆ ಎಂದರು.

ಒಟ್ಟಾರೆ ನಗರದ ರಸ್ತೆ ಗುಂಡಿಗಳಿಗೆ ಯಾವಾಗ ಮುಕ್ತಿ ಸಿಗಲಿದೆ, ಇನ್ನಾದರೂ ಗುಂಡಿ‌ ಮುಕ್ತ ನಗರ ಆಗುತ್ತಾ ಎಂದು ಕಾದು ನೋಡಬೇಕಿದೆ.

Ramesh Babu

Journalist

Recent Posts

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

5 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

24 hours ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

2 days ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

3 days ago