ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕರ್ತವ್ಯಲೋಪಕ್ಕಾಗಿ ಡ್ರಗ್ ಕಂಟ್ರೋಲರ್ ಉಮೇಶ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ರಿಂಗರ್ ಲ್ಯಾಕ್ಟೇಟ್ ದ್ರಾವಣ ಪೂರೈಸಿರುವ ಪಶ್ಚಿಮ ಬಂಗಾಳದ ಕಂಪೆನಿಯನ್ನು ಕಪ್ಪು ಪಟ್ಟಿಗೆ ಸೇರಿಸಿ, ಕಂಪೆನಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಆದೇಶಿಸಲಾಗಿದೆ ಎಂದರು.
ಸಾವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಸರ್ಕಾರದಿಂದ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ. ಡ್ರಗ್ ಪೂರೈಸಿದ ಕಂಪೆನಿಯಿಂದಲೂ ಪರಿಹಾರವನ್ನು ವಸೂಲು ಮಾಡಿ, ಮೃತರ ಕುಟುಂಬಕ್ಕೆ ನೀಡಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಸಂಭವಿಸಿರುವ ಈ ರೀತಿಯ ಸಾವಿನ ಪ್ರಕರಣಗಳ ಬಗ್ಗೆ ತನಿಖೆ ನಡೆಸಲು ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿಯನ್ನು ರಚಿಸಲು ನಿರ್ಧಾರಿಸಲಾಗಿದೆ ಎಂದು ಹೇಳಿದರು.
ಬಾಣಂತಿಯರ ಸಾವಿನ ಕುತು ತಜ್ಞರ ಸಮಿತಿ ರಚಿಸಿ ಘಟನಾವಳಿಗಳ ಬಗ್ಗೆ ಪ್ರಾಥಮಿಕ ವರದಿ ಪಡೆಯಲಾಗಿದೆ.
ಬಾಣಂತಿಯರಿಗೆ ನೀಡಲಾಗಿರುವ ರಿಂಗರ್ ಲ್ಯಾಕ್ಟೇಟ್ ದ್ರಾವಣದ ಎಲ್ಲಾ ಬ್ಯಾಚ್ಗಳ ಬಳಕೆಯನ್ನು ಹಿಂಪಡೆಯಲಾಗಿದ್ದು, ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಳಸಲಾದ ದ್ರಾವಣ ಪರೀಕ್ಷಿಸಲು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದರು.
ತಮಿಳುನಾಡು ಮಾದರಿಯಲ್ಲಿ ಔಷಧಿಗಳ ಖರೀದಿ ಪ್ರಕ್ರಿಯೆ ಹಾಗೂ ಔಷಧ ನಿಯಂತ್ರಣ ಇಲಾಖೆಯನ್ನು ಪುನಾರಚನೆ ಮಾಡುವ ಬಗ್ಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.
ಇನ್ನು ಮುಂದೆ ಈ ರೀತಿಯ ದುರ್ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಪ್ರಯೋಗಾಲಯದ ವರದಿ ಬಂದ ಬಳಿಕ ಘಟನೆಗೆ ಜವಾಬ್ದಾರರಾದ ಪ್ರತಿಯೊಬ್ಬರನ್ನು ಗುರುತಿಸಿ ಕ್ರಮ ಕೈಗೊಳ್ಳಲಾಗುತ್ತದೆ. ಡ್ರಗ್ ಕಂಟ್ರೋಲರ್ ಮೇಲೆ ಶಿಸ್ತಿನ ಕ್ರಮ ಕೈಗೊಳ್ಳಲು ಆದೇಶ ನೀಡಲಾಗಿದೆ ಎಂದರು.
ಔಷಧ ನಿಯಂತ್ರಣ ಕಾಯ್ದೆಯನ್ನು ಇನ್ನಷ್ಟು ಬಿಗಿಗೊಳಿಸುವ ಕುರಿತು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲು ನಿರ್ಧರಿಸಲಾಗಿದೆ. ಈ ಬಗ್ಗೆ ಹಲವು ರೀತಿಯ ಗಂಭೀರ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…