ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ಪ್ರಕರಣ: ಕರ್ತವ್ಯಲೋಪವೆಸಗಿದ ಡ್ರಗ್ ಕಂಟ್ರೋಲರ್ ಉಮೇಶ್ ಸಸ್ಪೆಂಡ್-ರಿಂಗರ್‌ ಲ್ಯಾಕ್ಟೇಟ್‌ ದ್ರಾವಣ ಪೂರೈಸಿದ ಪಶ್ಚಿಮ ಬಂಗಾಳದ ಕಂಪೆನಿಯನ್ನು ಕಪ್ಪು ಪಟ್ಟಿಗೆ ಸೇರಿಸಿ, ಕಂಪೆನಿ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲು ಆದೇಶ- ಸಿಎಂ ಸಿದ್ದರಾಮಯ್ಯ

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕರ್ತವ್ಯಲೋಪಕ್ಕಾಗಿ ಡ್ರಗ್ ಕಂಟ್ರೋಲರ್ ಉಮೇಶ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ರಿಂಗರ್‌ ಲ್ಯಾಕ್ಟೇಟ್‌ ದ್ರಾವಣ ಪೂರೈಸಿರುವ ಪಶ್ಚಿಮ ಬಂಗಾಳದ ಕಂಪೆನಿಯನ್ನು ಕಪ್ಪು ಪಟ್ಟಿಗೆ ಸೇರಿಸಿ, ಕಂಪೆನಿ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲು ಆದೇಶಿಸಲಾಗಿದೆ ಎಂದರು.

ಸಾವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಸರ್ಕಾರದಿಂದ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ. ಡ್ರಗ್ ಪೂರೈಸಿದ ಕಂಪೆನಿಯಿಂದಲೂ ಪರಿಹಾರವನ್ನು ವಸೂಲು ಮಾಡಿ, ಮೃತರ ಕುಟುಂಬಕ್ಕೆ ನೀಡಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಸಂಭವಿಸಿರುವ ಈ ರೀತಿಯ ಸಾವಿನ ಪ್ರಕರಣಗಳ ಬಗ್ಗೆ ತನಿಖೆ ನಡೆಸಲು ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿಯನ್ನು ರಚಿಸಲು ನಿರ್ಧಾರಿಸಲಾಗಿದೆ ಎಂದು ಹೇಳಿದರು.

ಬಾಣಂತಿಯರ ಸಾವಿನ ಕುತು ತಜ್ಞರ ಸಮಿತಿ ರಚಿಸಿ ಘಟನಾವಳಿಗಳ ಬಗ್ಗೆ ಪ್ರಾಥಮಿಕ ವರದಿ ಪಡೆಯಲಾಗಿದೆ.
ಬಾಣಂತಿಯರಿಗೆ ನೀಡಲಾಗಿರುವ ರಿಂಗರ್‌ ಲ್ಯಾಕ್ಟೇಟ್‌ ದ್ರಾವಣದ ಎಲ್ಲಾ ಬ್ಯಾಚ್‌ಗಳ ಬಳಕೆಯನ್ನು ಹಿಂಪಡೆಯಲಾಗಿದ್ದು, ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಳಸಲಾದ ದ್ರಾವಣ ಪರೀಕ್ಷಿಸಲು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದರು.

ತಮಿಳುನಾಡು ಮಾದರಿಯಲ್ಲಿ ಔಷಧಿಗಳ ಖರೀದಿ ಪ್ರಕ್ರಿಯೆ ಹಾಗೂ ಔಷಧ ನಿಯಂತ್ರಣ ಇಲಾಖೆಯನ್ನು ಪುನಾರಚನೆ ಮಾಡುವ ಬಗ್ಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.

ಇನ್ನು ಮುಂದೆ ಈ ರೀತಿಯ ದುರ್ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಪ್ರಯೋಗಾಲಯದ ವರದಿ ಬಂದ ಬಳಿಕ ಘಟನೆಗೆ ಜವಾಬ್ದಾರರಾದ ಪ್ರತಿಯೊಬ್ಬರನ್ನು ಗುರುತಿಸಿ ಕ್ರಮ ಕೈಗೊಳ್ಳಲಾಗುತ್ತದೆ. ಡ್ರಗ್‌ ಕಂಟ್ರೋಲರ್‌ ಮೇಲೆ ಶಿಸ್ತಿನ ಕ್ರಮ ಕೈಗೊಳ್ಳಲು ಆದೇಶ ನೀಡಲಾಗಿದೆ ಎಂದರು.

ಔಷಧ ನಿಯಂತ್ರಣ ಕಾಯ್ದೆಯನ್ನು ಇನ್ನಷ್ಟು ಬಿಗಿಗೊಳಿಸುವ ಕುರಿತು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲು ನಿರ್ಧರಿಸಲಾಗಿದೆ. ಈ ಬಗ್ಗೆ ಹಲವು ರೀತಿಯ ಗಂಭೀರ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ಹೇಳಿದರು.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

9 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

13 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

13 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

16 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

2 days ago