ಬಸವಣ್ಣ ಅವರ ಚಿಂತನೆಗಳು ಮತ್ತು ವಿಚಾರಧಾರೆ ಇಂದಿಗೂ ಪ್ರಸ್ತುತ ಎನಿಸಿವೆ. ಸಮಸಮಾಜದ ನಿರ್ಮಾಣ ಬಸವಣ್ಣನವರ ಉದ್ದೇಶವಾಗಿತ್ತು ಎಂದು ನವೋದಯ ವಿದ್ಯಾಲಯದ ನಿವೃತ್ತ ಅಧ್ಯಾಪಕ ವಿ.ಎಸ್.ಹೆಗಡೆ ತಿಳಿಸಿದರು.
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಡಾ.ರಾಜ್ ಕುಮಾರ್ ಕಲಾಮಂದಿರದಲ್ಲಿ ನಡೆದ ಬಸವಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಬಸವಣ್ಣನವರು ತಮ್ಮ ಸಮಕಾಲೀನ ವಚನಕಾರರ ಮೇಲೆ ಬೀರಿದ ಪ್ರಭಾವದಿಂದಾಗಿ ವಚನ ಸಾಹಿತ್ಯ ಸಮೃದ್ದವಾಗಿ ಬೆಳೆಯಿತು. ವಚನಕಾರರ ಸಾಮಾಜಿಕ, ಧಾರ್ಮಿಕ, ಆರ್ಥಿಕ ಚಿಂತನೆಗಳಿಗೆ ಬಸವಣ್ಣನವರು ಪ್ರೇರಕ ಶಕ್ತಿಯಾಗಿದ್ದರು. ಬಸವಣ್ಣನವರು ಸೇರಿದಂತೆ ಎಲ್ಲಾ ವಚನಕಾರರು ತಮ್ಮ ಸಾಹಿತ್ಯವನ್ನು ಕನ್ನಡ ಭಾಷೆಯ ಮೂಲಕ ಜನಸಾಮಾನ್ಯರಿಗೂ ತಲುಪುವಂತೆ ಮಾಡಿದರು. ಸಮಾನತೆ, ಕಾಯಕ ತತ್ವಗಳನ್ನು ಪಾಲಿಸುವವರು ಶಿವಶರಣರಾಗಬಹುದು ಎಂದವರು ಬಸವಣ್ಣನವರು ಎಂದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್ ಮಾತನಾಡಿ, ಪ್ರಜಾಪ್ರಭುತ್ವದ ಆಶಯಗಳನ್ನು ಒಳಗೊಂಡ ಮೊದಲ ಸಂಸತ್ ಎಂಬ ಕೀರ್ತಿಯನ್ನು ಹೊಂದಿರುವ ಅನುಭಾವ ಮಂಟಪವು ಬಸವಣ್ಣ ವಿಚಾರಧಾರೆಗೆ ಸಾಕ್ಷಿಯಾಗಿದೆ. ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ವಚನಗಳ ಮೂಲಕ ಅಪೂರ್ವವಾದ ಕೊಡುಗೆ ನೀ ಡಿದ ಬಸವಣ್ಣನವರು ಮಹಿಳೆಯರು ಸೇರಿದಂತೆ ಎಲ್ಲಾ ವರ್ಗದವರಿಗೂ ಸಾಹಿತ್ಯ ರಚನೆಗೆ ಅವಕಾಶ ಮಾಡಿಕೊಟ್ಟರು. ಬಸವಣ್ಣನವರು ಪ್ರತಿಪಾದಿಸಿದ ತತ್ತ್ವ ,ಸಿದ್ಧಾಂತಗಳು ಇಂದಿಗೂ ವಿಶ್ವದಲ್ಲಿ ಆದರ್ಶಪ್ರಾಯಗಿವೆ ಎಂದರು.
ಕನ್ನಡ ಸಾಹಿತ್ಯ ಪರಿಷತ್ತು ಕಸಬಾ ಹೋಬಳಿ ಘಟಕ ಕೋಶಾಧ್ಯಕ್ಷ ಜಿ.ಸುರೇಶ್ ಮಾತನಾಡಿ, ಬಸವಣ್ಣನವರ ಸಾಮಾಜಿಕ ಕ್ರಾಂತಿ, ಕಾಯಕ ತತ್ವ ಜಗತ್ತಿನಾದ್ಯಂತ ಪ್ರಸಿದ್ದಿ ಹೊಂದಿದೆ. ಸಮಾನತೆಯಿಂದ ಬದುಕಲು ಅವಕಾಶ ಎಲ್ಲರಿಗೂ ಇದೆ. ಜಾತಿಯತೆ ಮತ್ತು ಅಸಮಾನತೆಯ ವಿರುದ್ದ ಧ್ವನಿ ಎತ್ತಿದವರು ಬಸವಣ್ಣ. ಕರ್ನಾಟಕದಲ್ಲಿ ವೈಚಾರಿಕ ಜಾಗೃತಿಯನ್ನು ಮೂಡಿಸಿದವರು ಬಸವಣ್ಣನವರು ಎಂದರು.
ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಕೋಶಾಧ್ಯಕ್ಷ ಸಾ.ಲ.ಕಮಲನಾಥ್, ಹೊಸಕೋಟೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಮುನಿರಾಜು, ಭಾರತ ಸ್ಕೌಟ್ ಮತ್ತು ಗೈಡ್ ಜಿಲ್ಲಾ ಸಹಾಯಕ ಆಯುಕ್ತ ವೆಂಕಟರಾಜು, ಕಲಾವಿದ ದರ್ಗಾಜೋಗಿಹಳ್ಳಿ ಮಲ್ಲೇಶ್, ಕಸಾಪ ಪ್ರತಿನಿಧಿ ಷಫೀರ್ ಮುಂತಾದವರು ಭಾಗವಹಿಸಿದ್ದರು.
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…