ಬಸವಣ್ಣ ಚಿಂತನೆ ಎಲ್ಲಾ ಕಾಲಕ್ಕೂ ಮಾದರಿ – ಕನ್ನಡಪರ ಹೋರಾಟಗಾರ ಗುರುರಾಜಪ್ಪ

ಸಾಮಾಜಿಕ ನ್ಯಾಯದ ಹರಿಕಾರರಾಗಿದ್ದ ಬಸವಣ್ಣನವರು ಅನುಭವ ಮಂಟಪದಲ್ಲಿ ಸರ್ವ ಸಮುದಾಯವರಿಗೂ ಸಮಾನ ಅವಕಾಶ ನೀಡಿದರು ಎಂದು ಕನ್ನಡಪರ ಹಿರಿಯ ಹೋರಾಟಗಾರ ಗುರುರಾಜಪ್ಪ ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಡಾ.ರಾಜ್ ಕುಮಾರ್ ಕಲಾಮಂದಿರದಲ್ಲಿ  ನಡೆದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಸಾಮಾಜಿಕ ವ್ಯವಸ್ಥೆಯಲ್ಲಿನ ತಾರತಮ್ಯವನ್ನು ನಿವಾರಿಸುವ ಕಡೆಗೆ ಬಸವಣ್ಣನವರು ಮೊದಲ ಆದ್ಯತೆಯನ್ನು ನೀಡಿದರು. ಜಾತಿ ವ್ಯವಸ್ಥೆ ತೊಡೆದು ಹಾಕಿ ಸಮ ಸಮಾಜ ಕಟ್ಟುವ ಬಸವಣ್ಣನವರ ಚಿಂತನೆಗಳು ಎಲ್ಲಾ ಕಾಲಕ್ಕೂ ಮಾದರಿಯಾಗಿವೆ. ಬಸವಾದಿಶರಣರ ಚಿಂತನೆಗಳು ಭಾರತದ ಸಂವಿಧಾನದ ಆಶಯಗಳಿಗೆ ಪ್ರೇರಣೆಯಾಗಿವೆ ಎಂದರು.

ಜ್ಞಾನಗಂಗಾ ಪ್ರೌಢಶಾಲೆಯ ಶಿಕ್ಷಕ ಕೋದಂಡರಾಮ್ ಮಾತನಾಡಿ, ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಂಪರೆಗೆ ಬಸವಣ್ಣನವರ ಕೊಡುಗೆ ಅಪಾರವಾಗಿದೆ. ವಿಶ್ವ ಸಾಹಿತ್ಯಕ್ಕೆ ಕನ್ನಡ ಸಾಹಿತ್ಯದ ಕೊಡುಗೆ ವಚನ ಸಾಹಿತ್ಯವಾಗಿದೆ. ಬಸವಣ್ಣ ಅವರ ನೇತೃತ್ವದಲ್ಲಿ ವಚನಕಾರರು ತಮ್ಮ‌ ವಚನಗಳಲ್ಲಿ ಸಾಮಾಜಿಕ ಹಾಗೂ ತಾತ್ವಿಕ ಮೌಲ್ಯಗಳನ್ನು ಪ್ರತಿಪಾದಿಸಿದರು ಎಂದರು.

ವಿಶ್ವ ಮಾನವತೆ ಮತ್ತು ವಿಶ್ವ ಶ್ರೇಷ್ಠ ಮೌಲ್ಯಗಳನ್ನು ಪ್ರತಿಪಾದಿಸಿದ ಬಸವಣ್ಣ ಕರ್ನಾಟಕದ ಸಾಂಸ್ಕೃತಿಕ ನಾಯಕರಾಗಿದ್ದಾರೆ ಎಂದರು.

ನಿವೃತ್ತ ಮುಖ್ಯ ಶಿಕ್ಷಕ ಕೆ.ವಿ.ವೆಂಕಟೇಶರೆಡ್ಡಿ ಮಾತನಾಡಿ, ಬಸವಣ್ಣನವರು ವಚನಗಳ ಮೂಲಕ ಸಾಮಾಜಿಕ ಅರಿವು ನೀಡಿದರು. ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದ ಬಸವಣ್ಣನವರಿಗೆ ಸಮ ಸಮಾಜವನ್ನು ಕಟ್ಟುವ ಮುಖ್ಯ ಗುರಿ ಹೊಂದಿದ್ದರು. ಬಸವಣ್ಣನವರು ಕಟ್ಟಿದ ಜಾತ್ಯತೀತವಾದ ಸರ್ವಸಮಾನತೆಯ ವ್ಯವಸ್ಥೆಯನ್ನು ಮುಂದುವರಿಸಲು ಸಾಧ್ಯವಾಗಲಿಲ್ಲ ಎಂಬುದು ವಿಷಾದೀಯ ಸಂಗತಿಯಾಗಿದೆ. ಬಸವಣ್ಣನವರ ಆದರ್ಶಗಳನ್ನು, ಅವರ ವಚನಗಳ ವಿಚಾರಧಾರೆಯನ್ನು ಜನರು ಅರ್ಥ ಮಾಡಿಕೊಂಡು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಸಮಾಜದಲ್ಲಿ ಬದಲಾವಣೆ ಉಂಟು ಮಾಡಲು ಸಾಧ್ಯವೆಂದರು.

ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್, ಗೌರವ ಕಾರ್ಯದರ್ಶಿ ಎ.ಜಯರಾಮ್, ಸಂಘಟನಾ ಕಾರ್ಯದರ್ಶಿ ಆರ್.ಗೋವಿಂದರಾಜು, ಕಸಬಾ ಹೋಬಳಿ ಘಟಕದ ಅಧ್ಯಕ್ಷ ದಾದಾಪೀರ್, ಕೋಶಾಧ್ಯಕ್ಷ ಜಿ.ಸುರೇಶ್, ಪ್ರತಿನಿಧಿ ಷಫೀರ್, ಸೂರ್ಯ ಪದವಿಪೂರ್ವ ಕಾಲೇಜು ಪ್ರಾಚಾರ್ಯ  ಎಂ.ಸಿ.ಮಂಜುನಾಥ್, ಡಾ.ಬಿ.ಆರ್.ಅಂಬೇಡ್ಕರ್  ವಿದ್ಯಾರ್ಥಿನಿಲಯದ ಮೇಲ್ವಿಚಾರಕ ಅಣ್ಣಯ್ಯ, ಪ್ರತಿನಿಧಿ ಷಫೀರ್, ಕಲಾವಿದರುಗಳಾದ ಬಾಶೆಟ್ಟಿಹಳ್ಳಿ ಮಂಜುನಾಥ್, ದರ್ಗಾಜೋಗಿಹಳ್ಳಿ ಮಲ್ಲೇಶ್ ಮುಂತಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

2 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

2 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

5 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

6 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

10 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

14 hours ago