ಬಸವಣ್ಣ ಚಿಂತನೆ ಎಲ್ಲಾ ಕಾಲಕ್ಕೂ ಮಾದರಿ – ಕನ್ನಡಪರ ಹೋರಾಟಗಾರ ಗುರುರಾಜಪ್ಪ

ಸಾಮಾಜಿಕ ನ್ಯಾಯದ ಹರಿಕಾರರಾಗಿದ್ದ ಬಸವಣ್ಣನವರು ಅನುಭವ ಮಂಟಪದಲ್ಲಿ ಸರ್ವ ಸಮುದಾಯವರಿಗೂ ಸಮಾನ ಅವಕಾಶ ನೀಡಿದರು ಎಂದು ಕನ್ನಡಪರ ಹಿರಿಯ ಹೋರಾಟಗಾರ ಗುರುರಾಜಪ್ಪ ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಡಾ.ರಾಜ್ ಕುಮಾರ್ ಕಲಾಮಂದಿರದಲ್ಲಿ  ನಡೆದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಸಾಮಾಜಿಕ ವ್ಯವಸ್ಥೆಯಲ್ಲಿನ ತಾರತಮ್ಯವನ್ನು ನಿವಾರಿಸುವ ಕಡೆಗೆ ಬಸವಣ್ಣನವರು ಮೊದಲ ಆದ್ಯತೆಯನ್ನು ನೀಡಿದರು. ಜಾತಿ ವ್ಯವಸ್ಥೆ ತೊಡೆದು ಹಾಕಿ ಸಮ ಸಮಾಜ ಕಟ್ಟುವ ಬಸವಣ್ಣನವರ ಚಿಂತನೆಗಳು ಎಲ್ಲಾ ಕಾಲಕ್ಕೂ ಮಾದರಿಯಾಗಿವೆ. ಬಸವಾದಿಶರಣರ ಚಿಂತನೆಗಳು ಭಾರತದ ಸಂವಿಧಾನದ ಆಶಯಗಳಿಗೆ ಪ್ರೇರಣೆಯಾಗಿವೆ ಎಂದರು.

ಜ್ಞಾನಗಂಗಾ ಪ್ರೌಢಶಾಲೆಯ ಶಿಕ್ಷಕ ಕೋದಂಡರಾಮ್ ಮಾತನಾಡಿ, ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಂಪರೆಗೆ ಬಸವಣ್ಣನವರ ಕೊಡುಗೆ ಅಪಾರವಾಗಿದೆ. ವಿಶ್ವ ಸಾಹಿತ್ಯಕ್ಕೆ ಕನ್ನಡ ಸಾಹಿತ್ಯದ ಕೊಡುಗೆ ವಚನ ಸಾಹಿತ್ಯವಾಗಿದೆ. ಬಸವಣ್ಣ ಅವರ ನೇತೃತ್ವದಲ್ಲಿ ವಚನಕಾರರು ತಮ್ಮ‌ ವಚನಗಳಲ್ಲಿ ಸಾಮಾಜಿಕ ಹಾಗೂ ತಾತ್ವಿಕ ಮೌಲ್ಯಗಳನ್ನು ಪ್ರತಿಪಾದಿಸಿದರು ಎಂದರು.

ವಿಶ್ವ ಮಾನವತೆ ಮತ್ತು ವಿಶ್ವ ಶ್ರೇಷ್ಠ ಮೌಲ್ಯಗಳನ್ನು ಪ್ರತಿಪಾದಿಸಿದ ಬಸವಣ್ಣ ಕರ್ನಾಟಕದ ಸಾಂಸ್ಕೃತಿಕ ನಾಯಕರಾಗಿದ್ದಾರೆ ಎಂದರು.

ನಿವೃತ್ತ ಮುಖ್ಯ ಶಿಕ್ಷಕ ಕೆ.ವಿ.ವೆಂಕಟೇಶರೆಡ್ಡಿ ಮಾತನಾಡಿ, ಬಸವಣ್ಣನವರು ವಚನಗಳ ಮೂಲಕ ಸಾಮಾಜಿಕ ಅರಿವು ನೀಡಿದರು. ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದ ಬಸವಣ್ಣನವರಿಗೆ ಸಮ ಸಮಾಜವನ್ನು ಕಟ್ಟುವ ಮುಖ್ಯ ಗುರಿ ಹೊಂದಿದ್ದರು. ಬಸವಣ್ಣನವರು ಕಟ್ಟಿದ ಜಾತ್ಯತೀತವಾದ ಸರ್ವಸಮಾನತೆಯ ವ್ಯವಸ್ಥೆಯನ್ನು ಮುಂದುವರಿಸಲು ಸಾಧ್ಯವಾಗಲಿಲ್ಲ ಎಂಬುದು ವಿಷಾದೀಯ ಸಂಗತಿಯಾಗಿದೆ. ಬಸವಣ್ಣನವರ ಆದರ್ಶಗಳನ್ನು, ಅವರ ವಚನಗಳ ವಿಚಾರಧಾರೆಯನ್ನು ಜನರು ಅರ್ಥ ಮಾಡಿಕೊಂಡು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಸಮಾಜದಲ್ಲಿ ಬದಲಾವಣೆ ಉಂಟು ಮಾಡಲು ಸಾಧ್ಯವೆಂದರು.

ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್, ಗೌರವ ಕಾರ್ಯದರ್ಶಿ ಎ.ಜಯರಾಮ್, ಸಂಘಟನಾ ಕಾರ್ಯದರ್ಶಿ ಆರ್.ಗೋವಿಂದರಾಜು, ಕಸಬಾ ಹೋಬಳಿ ಘಟಕದ ಅಧ್ಯಕ್ಷ ದಾದಾಪೀರ್, ಕೋಶಾಧ್ಯಕ್ಷ ಜಿ.ಸುರೇಶ್, ಪ್ರತಿನಿಧಿ ಷಫೀರ್, ಸೂರ್ಯ ಪದವಿಪೂರ್ವ ಕಾಲೇಜು ಪ್ರಾಚಾರ್ಯ  ಎಂ.ಸಿ.ಮಂಜುನಾಥ್, ಡಾ.ಬಿ.ಆರ್.ಅಂಬೇಡ್ಕರ್  ವಿದ್ಯಾರ್ಥಿನಿಲಯದ ಮೇಲ್ವಿಚಾರಕ ಅಣ್ಣಯ್ಯ, ಪ್ರತಿನಿಧಿ ಷಫೀರ್, ಕಲಾವಿದರುಗಳಾದ ಬಾಶೆಟ್ಟಿಹಳ್ಳಿ ಮಂಜುನಾಥ್, ದರ್ಗಾಜೋಗಿಹಳ್ಳಿ ಮಲ್ಲೇಶ್ ಮುಂತಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

6 hours ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

16 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

17 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

22 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

1 day ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

1 day ago