ಬಸವೇಶ್ವರನಗರ ವಾರ್ಡ್ ನಲ್ಲಿ ಬೀಟ್ ಸಭೆ: ಕಾನೂನು ಬಾಹಿರ ಚಟುವಟಿಕೆಗಳಲ್ಲಿ‌ ತೊಡಗಿಸಿಕೊಳ್ಳದಂತೆ ಎಚ್ಚರಿಕೆ‌ ಕೊಟ್ಟ ಇನ್ಸ್ ಪೆಕ್ಟರ್ ಅಮರೇಶ್ ಗೌಡ

ನಗರದ ಬಸವೇಶ್ವರನಗರ ವಾರ್ಡಿನ ಅಶ್ವತ್ ಕಟ್ಟೆ ಬಳಿ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮರೇಶ್ ಗೌಡ ಅವರ ನೇತೃತ್ವದಲ್ಲಿಂದು ಬೀಟ್ ಸಭೆ ಏರ್ಪಡಿಸಲಾಗಿತ್ತು.

ಸಾರ್ವಜನಿಕರಿಗೆ ಸರಗಳ್ಳತನ, ಮನೆಗಳ್ಳತನ, ಸೈಬರ್ ಕ್ರೈಂ, ಸಂಚಾರಿ ನಿಯಮಗಳು, ಅಕ್ರಮ ಮದ್ಯ ಮಾರಾಟ, ಕ್ರಿಕೆಟ್ ಬೆಟ್ಟಿಂಗ್, ಗಾಂಜಾ ಸೇವನೆ ಮತ್ತು ಮಾರಾಟ, ಮೀಟರ್ ಬಡ್ಡಿ, ವೇಶ್ಯಾವಾಟಿಕೆ ಸೇರಿಂದತೆ ಇತರೆ ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ, ಎಚ್ಚರಿಕೆ ಹಾಗೂ ಸಲಹೆ ಸೂಚನೆಗಳನ್ನು ನೀಡಲಾಯಿತು.

ಕಾನೂನು ಬಾಹಿರ ವಿಷಯಗಳ ಬಗ್ಗೆ ವಾರ್ಡಿನಲ್ಲಿ ಯಾವುದೇ ಮಾಹಿತಿ ಕಂಡುಬಂದರೂ ಕೂಡಲೇ ಪೊಲೀಸ್ ಠಾಣೆಗೆ ತಿಳಿಸುವಂತೆ ಸೂಚಿಸಲಾಯಿತು.

ನಂತರ ಸಭೆಯಲ್ಲಿ ಹಾಜರಿದ್ದ ಸಾರ್ವಜನಿಕರು ಕೆಲವು ಸಲಹೆ ಸೂಚನೆಗಳು ಹಾಗೂ ಕುಂದುಕೊರತೆಗಳನ್ನು ಪೊಲೀಸ್ ಇನ್ಸ್ ಪೆಕ್ಟರ್ ಅವರ ಗಮನಕ್ಕೆ ತರಲಾಯಿತು. ಸಾರ್ವಜನಿಕರು ನೀಡಿರುವ ಸಲಹೆ ಸೂಚನೆಗಳನ್ನು ಪಾಲಿಸುವದಾಗಿ ಪೊಲೀಸ್ ಇನ್ಸ್ಪೆಕ್ಟರ್ ತಿಳಿಸಿದ್ದಾರೆ.

ಸಭೆಯಲ್ಲಿ ನಗರಸಭಾ ಸದಸ್ಯ ಪದ್ಮನಾಭ, ವಾರ್ಡಿನ ಹಿರಿಯ ಮುಖಂಡ ಕೃಷ್ಣಪ್ಪ, ಮಂಜುಳಾ, ಜೈರಾಮ್,   ಸಬ್ ಇನ್ಸ್ಪೆಕ್ಟರ್ ಕೃಷ್ಣಮೂರ್ತಿ, ಮತ್ತು ಬೀಟ್ ಸಿಬ್ಬಂದಿ ಶಿವಾನಂದ ಹಾಗೂ ಸಿದ್ದಲಿಂಗ ಪೂಜಾರಿ ಸೇರಿದಂತೆ ಸಾರ್ವಜನಿಕರು ಹಾಜರಿದ್ದರು.

Ramesh Babu

Journalist

Recent Posts

ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ ಜಿಲ್ಲಾಧಿಕಾರಿ ಎಬಿ ಬಸವರಾಜು ಆದೇಶ

ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…

4 minutes ago

ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯ ಹತ್ಯೆ

ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…

7 hours ago

ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು..! ಕುಟುಂಬದ ಹುಡುಗಿಯೊಬ್ಬಳ ಮಿಸ್ಸಿಂಗ್ ವಿಚಾರಕ್ಕೆ ಹಲ್ಲೆ.!

ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ... ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ…

7 hours ago

” ಮೊಬೈಲ್ ಬಿಡಿ – ಪುಸ್ತಕ ಹಿಡಿ “……..

" ಮೊಬೈಲ್ ಬಿಡಿ - ಪುಸ್ತಕ ಹಿಡಿ "........ ಕರ್ನಾಟಕ ಸರ್ಕಾರದ ಶಿಕ್ಷಣ ಇಲಾಖೆ ಹೀಗೊಂದು ಅಭಿಯಾನ ಶುರು ಮಾಡಿದೆ.…

10 hours ago

ಬೈಕ್-ಟಿಪ್ಪರ್ ನಡುವೆ ಅಪಘಾತ: ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವನಿಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

ಬೈಕ್-ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ…

21 hours ago

ರೈತರು ಇ-ಕೆವೈಸಿ ಮಾಡಿಸಲು ಕೃಷಿ ಇಲಾಖೆ ಸೂಚನೆ

ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿಯಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ…

24 hours ago