ಬಸವೇಶ್ವರನಗರ ವಾರ್ಡ್ ನಲ್ಲಿ ಬೀಟ್ ಸಭೆ: ಕಾನೂನು ಬಾಹಿರ ಚಟುವಟಿಕೆಗಳಲ್ಲಿ‌ ತೊಡಗಿಸಿಕೊಳ್ಳದಂತೆ ಎಚ್ಚರಿಕೆ‌ ಕೊಟ್ಟ ಇನ್ಸ್ ಪೆಕ್ಟರ್ ಅಮರೇಶ್ ಗೌಡ

ನಗರದ ಬಸವೇಶ್ವರನಗರ ವಾರ್ಡಿನ ಅಶ್ವತ್ ಕಟ್ಟೆ ಬಳಿ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮರೇಶ್ ಗೌಡ ಅವರ ನೇತೃತ್ವದಲ್ಲಿಂದು ಬೀಟ್ ಸಭೆ ಏರ್ಪಡಿಸಲಾಗಿತ್ತು.

ಸಾರ್ವಜನಿಕರಿಗೆ ಸರಗಳ್ಳತನ, ಮನೆಗಳ್ಳತನ, ಸೈಬರ್ ಕ್ರೈಂ, ಸಂಚಾರಿ ನಿಯಮಗಳು, ಅಕ್ರಮ ಮದ್ಯ ಮಾರಾಟ, ಕ್ರಿಕೆಟ್ ಬೆಟ್ಟಿಂಗ್, ಗಾಂಜಾ ಸೇವನೆ ಮತ್ತು ಮಾರಾಟ, ಮೀಟರ್ ಬಡ್ಡಿ, ವೇಶ್ಯಾವಾಟಿಕೆ ಸೇರಿಂದತೆ ಇತರೆ ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ, ಎಚ್ಚರಿಕೆ ಹಾಗೂ ಸಲಹೆ ಸೂಚನೆಗಳನ್ನು ನೀಡಲಾಯಿತು.

ಕಾನೂನು ಬಾಹಿರ ವಿಷಯಗಳ ಬಗ್ಗೆ ವಾರ್ಡಿನಲ್ಲಿ ಯಾವುದೇ ಮಾಹಿತಿ ಕಂಡುಬಂದರೂ ಕೂಡಲೇ ಪೊಲೀಸ್ ಠಾಣೆಗೆ ತಿಳಿಸುವಂತೆ ಸೂಚಿಸಲಾಯಿತು.

ನಂತರ ಸಭೆಯಲ್ಲಿ ಹಾಜರಿದ್ದ ಸಾರ್ವಜನಿಕರು ಕೆಲವು ಸಲಹೆ ಸೂಚನೆಗಳು ಹಾಗೂ ಕುಂದುಕೊರತೆಗಳನ್ನು ಪೊಲೀಸ್ ಇನ್ಸ್ ಪೆಕ್ಟರ್ ಅವರ ಗಮನಕ್ಕೆ ತರಲಾಯಿತು. ಸಾರ್ವಜನಿಕರು ನೀಡಿರುವ ಸಲಹೆ ಸೂಚನೆಗಳನ್ನು ಪಾಲಿಸುವದಾಗಿ ಪೊಲೀಸ್ ಇನ್ಸ್ಪೆಕ್ಟರ್ ತಿಳಿಸಿದ್ದಾರೆ.

ಸಭೆಯಲ್ಲಿ ನಗರಸಭಾ ಸದಸ್ಯ ಪದ್ಮನಾಭ, ವಾರ್ಡಿನ ಹಿರಿಯ ಮುಖಂಡ ಕೃಷ್ಣಪ್ಪ, ಮಂಜುಳಾ, ಜೈರಾಮ್,   ಸಬ್ ಇನ್ಸ್ಪೆಕ್ಟರ್ ಕೃಷ್ಣಮೂರ್ತಿ, ಮತ್ತು ಬೀಟ್ ಸಿಬ್ಬಂದಿ ಶಿವಾನಂದ ಹಾಗೂ ಸಿದ್ದಲಿಂಗ ಪೂಜಾರಿ ಸೇರಿದಂತೆ ಸಾರ್ವಜನಿಕರು ಹಾಜರಿದ್ದರು.

Ramesh Babu

Journalist

Recent Posts

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

1 day ago

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

2 days ago

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಬಲಿ

ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್‌ಸ್ಪೆಕ್ಟರ್…

2 days ago

ರಕ್ಷಾ ಬಂಧನ ಮತ್ತು ಮದರ್ ತೆರೇಸಾ

ಮದರ್‌ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…

2 days ago

ರೈತಪರ ಯೋಜನೆ : ವಿಬಿ-ಜಿ ರಾಮ್ ಜಿ ಯೋಜನೆ

ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…

2 days ago

ಮೂರು ತಾಲೂಕು ಬರದ ಪಟ್ಟಿಗೆ; ದೊಡ್ಡಬಳ್ಳಾಪುರಕ್ಕೆ ವಿನಾಯಿತಿ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

3 days ago