ಬಸವೇಶ್ವರನಗರ ವಾರ್ಡ್ ನಲ್ಲಿ ಬೀಟ್ ಸಭೆ: ಕಾನೂನು ಬಾಹಿರ ಚಟುವಟಿಕೆಗಳಲ್ಲಿ‌ ತೊಡಗಿಸಿಕೊಳ್ಳದಂತೆ ಎಚ್ಚರಿಕೆ‌ ಕೊಟ್ಟ ಇನ್ಸ್ ಪೆಕ್ಟರ್ ಅಮರೇಶ್ ಗೌಡ

ನಗರದ ಬಸವೇಶ್ವರನಗರ ವಾರ್ಡಿನ ಅಶ್ವತ್ ಕಟ್ಟೆ ಬಳಿ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮರೇಶ್ ಗೌಡ ಅವರ ನೇತೃತ್ವದಲ್ಲಿಂದು ಬೀಟ್ ಸಭೆ ಏರ್ಪಡಿಸಲಾಗಿತ್ತು.

ಸಾರ್ವಜನಿಕರಿಗೆ ಸರಗಳ್ಳತನ, ಮನೆಗಳ್ಳತನ, ಸೈಬರ್ ಕ್ರೈಂ, ಸಂಚಾರಿ ನಿಯಮಗಳು, ಅಕ್ರಮ ಮದ್ಯ ಮಾರಾಟ, ಕ್ರಿಕೆಟ್ ಬೆಟ್ಟಿಂಗ್, ಗಾಂಜಾ ಸೇವನೆ ಮತ್ತು ಮಾರಾಟ, ಮೀಟರ್ ಬಡ್ಡಿ, ವೇಶ್ಯಾವಾಟಿಕೆ ಸೇರಿಂದತೆ ಇತರೆ ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ, ಎಚ್ಚರಿಕೆ ಹಾಗೂ ಸಲಹೆ ಸೂಚನೆಗಳನ್ನು ನೀಡಲಾಯಿತು.

ಕಾನೂನು ಬಾಹಿರ ವಿಷಯಗಳ ಬಗ್ಗೆ ವಾರ್ಡಿನಲ್ಲಿ ಯಾವುದೇ ಮಾಹಿತಿ ಕಂಡುಬಂದರೂ ಕೂಡಲೇ ಪೊಲೀಸ್ ಠಾಣೆಗೆ ತಿಳಿಸುವಂತೆ ಸೂಚಿಸಲಾಯಿತು.

ನಂತರ ಸಭೆಯಲ್ಲಿ ಹಾಜರಿದ್ದ ಸಾರ್ವಜನಿಕರು ಕೆಲವು ಸಲಹೆ ಸೂಚನೆಗಳು ಹಾಗೂ ಕುಂದುಕೊರತೆಗಳನ್ನು ಪೊಲೀಸ್ ಇನ್ಸ್ ಪೆಕ್ಟರ್ ಅವರ ಗಮನಕ್ಕೆ ತರಲಾಯಿತು. ಸಾರ್ವಜನಿಕರು ನೀಡಿರುವ ಸಲಹೆ ಸೂಚನೆಗಳನ್ನು ಪಾಲಿಸುವದಾಗಿ ಪೊಲೀಸ್ ಇನ್ಸ್ಪೆಕ್ಟರ್ ತಿಳಿಸಿದ್ದಾರೆ.

ಸಭೆಯಲ್ಲಿ ನಗರಸಭಾ ಸದಸ್ಯ ಪದ್ಮನಾಭ, ವಾರ್ಡಿನ ಹಿರಿಯ ಮುಖಂಡ ಕೃಷ್ಣಪ್ಪ, ಮಂಜುಳಾ, ಜೈರಾಮ್,   ಸಬ್ ಇನ್ಸ್ಪೆಕ್ಟರ್ ಕೃಷ್ಣಮೂರ್ತಿ, ಮತ್ತು ಬೀಟ್ ಸಿಬ್ಬಂದಿ ಶಿವಾನಂದ ಹಾಗೂ ಸಿದ್ದಲಿಂಗ ಪೂಜಾರಿ ಸೇರಿದಂತೆ ಸಾರ್ವಜನಿಕರು ಹಾಜರಿದ್ದರು.

Ramesh Babu

Journalist

Recent Posts

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

7 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

8 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

17 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

2 days ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

3 days ago