ಏಪ್ರಿಲ್ 20 ರಂದು ಬಸವ ಜಯಂತಿ ಮತ್ತು ಅಕ್ಷಯ ತೃತೀಯ ಹಿನ್ನೆಲೆಯಲ್ಲಿ ಬಾಲ್ಯವಿವಾಹಗಳು ಆಗುವ ಸಾಧ್ಯತೆ ಇದ್ದು, ಬಾಲ್ಯ ವಿವಾಹಗಳನ್ನು ತಡೆಗಟ್ಟಲು ಸಾರ್ವಜನಿಕರು, ಅಧಿಕಾರಿಗಳು ಜಾಗೃತಿ ವಹಿಸಿ ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ ಅವರು ತಿಳಿಸಿದ್ದಾರೆ.
ಬಾಲ್ಯ ವಿವಾಹವೆಂದರೆ 18 ವರ್ಷದೊಳಗಿನ ಹುಡುಗಿ ಹಾಗೂ 21 ವರ್ಷದೊಳಗಿನ ಹುಡುಗನ ನಡುವೆ ನಡೆಯುವ ಮದುವೆ ಅಥವಾ ಇಬ್ಬರಲ್ಲಿ ಒಬ್ಬರು ನಿಗದಿತ ವಯಸ್ಸಿನೊಳಗಿದ್ದರು ಇಂತಹ ಮದುವೆಯನ್ನು ಬಾಲ್ಯವಿವಾಹ ಎಂದು ಪರಿಗಣಿಸಲಾಗುವುದು.
ಬಾಲ್ಯವಿವಾಹ ನಿಷೇಧ (ಕರ್ನಾಟಕ ತಿದ್ದುಪಡಿ) ಅಧಿನಿಯಮ-2016 ಪ್ರಕಾರ ಬಾಲ್ಯವಿವಾಹಗಳನ್ನು ಏರ್ಪಡಿಸುವ ಪೋಷಕರು ಅಥವಾ ಪಾಲಕರು, 18 ವರ್ಷದೊಳಗಿನ ಹುಡುಗಿಯನ್ನು ಮದುವೆಯಾಗುವ ವಯಸ್ಕ ವ್ಯಕ್ತಿ ಮತ್ತು ಮದುವೆಯಲ್ಲಿ ಭಾಗವಹಿಸುವ, ಎಲ್ಲಾ ರೀತಿಯಲ್ಲಿ ಸಹಕರಿಸಿದ ಕುಟುಂಬಸ್ಥರನ್ನು ಸಹ ತಪ್ಪಿತಸ್ಥರು ಎಂದು, ಇವರುಗಳಿಗೆ ಮೇಲೆ ತಿಳಿಸಿದ ಕಾಯ್ದೆಯ ಪ್ರಕಾರ ಒಂದು ವರ್ಷಕ್ಕೆ ಕಡಿಮೆಯಿಲ್ಲದ ಅಂದರೆ ಎರಡು ವರ್ಷಗಳ ಕಾಲ ವಿಸ್ತರಿಸಬಹುದಾದ ಕಠಿಣ ಜೈಲು ಶಿಕ್ಷೆ ಅಥವಾ ಒಂದು ಲಕ್ಷ ರೂಪಾಯಿಗಳವರೆಗೆ ವಿಸ್ತರಿಸಬಹುದಾದ ದಂಡಕ್ಕೆ ಅಥವಾ ಇವರೆಡರಿಂದಲು ಶಿಕ್ಷೆಗೆ ಒಳಪಡುತ್ತಾರೆ.
ಬಾಲ್ಯವಿವಾಹ ನಿಷೇಧ ಕಾಯ್ದೆಯಡಿ ಪ್ರತಿಯೊಬ್ಬ ಪೊಲೀಸ್ ಅಧಿಕಾರಿಯು ತನ್ನ ಅಧಿಕಾರ ವ್ಯಾಪ್ತಿಯಡಿ ಬಾಲ್ಯವಿವಾಹ ಜರುಗುತ್ತಿರುವ ಮಾಹಿತಿ ಬಂದಾಗ ಸ್ವಪ್ರೇರಿತವಾಗಿ ದೂರು ದಾಖಲು ಮಾಡಲು ಅವಕಾಶವಿರುತ್ತದೆ. ಅದೇ ರೀತಿ ಇದು ಕೇವಲ ಸರ್ಕಾರಿ ಅಧಿಕಾರಿಗಳ ಜವಾಬ್ದಾರಿಯಾಗದೇ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿರುತ್ತದೆ.
ಬಾಲ್ಯವಿವಾಹ ನಿಷೇಧಾಧಿಕಾರಿಗಳು ತಮ್ಮ ಕಾರ್ಯವ್ಯಾಪ್ತಿಗೆ ಬರುವ ಧಾರ್ಮಿಕ ಸ್ಥಳಗಳಲ್ಲಿ ಮತ್ತು ಕಲ್ಯಾಣ ಮಂಟಪಗಳಲ್ಲಿ ಸಾಮೂಹಿಕ ಅಥವಾ ವೈಯಕ್ತಿಕ ವಿವಾಹದಲ್ಲಿ ಯಾವುದೇ ಬಾಲ್ಯವಿವಾಹಗಳು ಜರುಗದಂತೆ ಕ್ರಮವಹಿಸಬೇಕು.
ಜಿಲ್ಲೆಯಲ್ಲಿ ಬಾಲ್ಯವಿವಾಹ ನಡೆಯುತ್ತಿರುವುದು ಸಾರ್ವಜನಿಕರ ಗಮನಕ್ಕೆ ಬಂದರೆ ತುರ್ತಾಗಿ ಮಕ್ಕಳ ಸಹಾಯವಾಣಿ 1098, ಪೊಲೀಸ್ ಸಹಾಯವಾಣಿ 112 ಮತ್ತು ಮಕ್ಕಳ ರಕ್ಷಣಾ ಘಟಕ 080-29560034 ಹಾಗೂ ಸಂಬಂಧಪಟ್ಟ ಹತ್ತಿರದ ಪೊಲೀಸ್ ಠಾಣೆಗೆ ದೂರು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…