ಬಸವ ಜಯಂತಿ ಮತ್ತು ಅಕ್ಷಯ ತೃತೀಯ ಹಿನ್ನೆಲೆ: ಬಾಲ್ಯವಿವಾಹ ತಡೆಗೆ ಜಾಗೃತಿ ಅಗತ್ಯ- ಡಿಸಿ ಡಾ. ಕೆ.ಎನ್ ಅನುರಾಧ

ಏಪ್ರಿಲ್ 20 ರಂದು ಬಸವ ಜಯಂತಿ ಮತ್ತು ಅಕ್ಷಯ ತೃತೀಯ ಹಿನ್ನೆಲೆಯಲ್ಲಿ ಬಾಲ್ಯವಿವಾಹಗಳು ಆಗುವ ಸಾಧ್ಯತೆ ಇದ್ದು, ಬಾಲ್ಯ ವಿವಾಹಗಳನ್ನು ತಡೆಗಟ್ಟಲು ಸಾರ್ವಜನಿಕರು, ಅಧಿಕಾರಿಗಳು ಜಾಗೃತಿ ವಹಿಸಿ ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ ಅವರು ತಿಳಿಸಿದ್ದಾರೆ.

ಬಾಲ್ಯ ವಿವಾಹವೆಂದರೆ 18 ವರ್ಷದೊಳಗಿನ ಹುಡುಗಿ ಹಾಗೂ 21 ವರ್ಷದೊಳಗಿನ ಹುಡುಗನ ನಡುವೆ ನಡೆಯುವ ಮದುವೆ ಅಥವಾ ಇಬ್ಬರಲ್ಲಿ ಒಬ್ಬರು ನಿಗದಿತ ವಯಸ್ಸಿನೊಳಗಿದ್ದರು ಇಂತಹ ಮದುವೆಯನ್ನು ಬಾಲ್ಯವಿವಾಹ ಎಂದು ಪರಿಗಣಿಸಲಾಗುವುದು.

ಬಾಲ್ಯವಿವಾಹ ನಿಷೇಧ (ಕರ್ನಾಟಕ ತಿದ್ದುಪಡಿ) ಅಧಿನಿಯಮ-2016 ಪ್ರಕಾರ ಬಾಲ್ಯವಿವಾಹಗಳನ್ನು ಏರ್ಪಡಿಸುವ ಪೋಷಕರು ಅಥವಾ ಪಾಲಕರು, 18 ವರ್ಷದೊಳಗಿನ ಹುಡುಗಿಯನ್ನು ಮದುವೆಯಾಗುವ ವಯಸ್ಕ ವ್ಯಕ್ತಿ ಮತ್ತು ಮದುವೆಯಲ್ಲಿ ಭಾಗವಹಿಸುವ, ಎಲ್ಲಾ ರೀತಿಯಲ್ಲಿ ಸಹಕರಿಸಿದ ಕುಟುಂಬಸ್ಥರನ್ನು ಸಹ ತಪ್ಪಿತಸ್ಥರು ಎಂದು, ಇವರುಗಳಿಗೆ ಮೇಲೆ ತಿಳಿಸಿದ ಕಾಯ್ದೆಯ ಪ್ರಕಾರ ಒಂದು ವರ್ಷಕ್ಕೆ ಕಡಿಮೆಯಿಲ್ಲದ ಅಂದರೆ ಎರಡು ವರ್ಷಗಳ ಕಾಲ ವಿಸ್ತರಿಸಬಹುದಾದ ಕಠಿಣ ಜೈಲು ಶಿಕ್ಷೆ ಅಥವಾ ಒಂದು ಲಕ್ಷ ರೂಪಾಯಿಗಳವರೆಗೆ ವಿಸ್ತರಿಸಬಹುದಾದ ದಂಡಕ್ಕೆ ಅಥವಾ ಇವರೆಡರಿಂದಲು ಶಿಕ್ಷೆಗೆ ಒಳಪಡುತ್ತಾರೆ.

ಬಾಲ್ಯವಿವಾಹ ನಿಷೇಧ ಕಾಯ್ದೆಯಡಿ ಪ್ರತಿಯೊಬ್ಬ ಪೊಲೀಸ್ ಅಧಿಕಾರಿಯು ತನ್ನ ಅಧಿಕಾರ ವ್ಯಾಪ್ತಿಯಡಿ ಬಾಲ್ಯವಿವಾಹ ಜರುಗುತ್ತಿರುವ ಮಾಹಿತಿ ಬಂದಾಗ ಸ್ವಪ್ರೇರಿತವಾಗಿ ದೂರು ದಾಖಲು ಮಾಡಲು ಅವಕಾಶವಿರುತ್ತದೆ. ಅದೇ ರೀತಿ ಇದು ಕೇವಲ ಸರ್ಕಾರಿ ಅಧಿಕಾರಿಗಳ ಜವಾಬ್ದಾರಿಯಾಗದೇ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿರುತ್ತದೆ.

ಬಾಲ್ಯವಿವಾಹ ನಿಷೇಧಾಧಿಕಾರಿಗಳು ತಮ್ಮ ಕಾರ್ಯವ್ಯಾಪ್ತಿಗೆ ಬರುವ ಧಾರ್ಮಿಕ ಸ್ಥಳಗಳಲ್ಲಿ ಮತ್ತು ಕಲ್ಯಾಣ ಮಂಟಪಗಳಲ್ಲಿ ಸಾಮೂಹಿಕ ಅಥವಾ ವೈಯಕ್ತಿಕ ವಿವಾಹದಲ್ಲಿ ಯಾವುದೇ ಬಾಲ್ಯವಿವಾಹಗಳು ಜರುಗದಂತೆ ಕ್ರಮವಹಿಸಬೇಕು.

ಜಿಲ್ಲೆಯಲ್ಲಿ ಬಾಲ್ಯವಿವಾಹ ನಡೆಯುತ್ತಿರುವುದು ಸಾರ್ವಜನಿಕರ ಗಮನಕ್ಕೆ ಬಂದರೆ ತುರ್ತಾಗಿ ಮಕ್ಕಳ ಸಹಾಯವಾಣಿ 1098, ಪೊಲೀಸ್ ಸಹಾಯವಾಣಿ 112 ಮತ್ತು ಮಕ್ಕಳ ರಕ್ಷಣಾ ಘಟಕ 080-29560034 ಹಾಗೂ ಸಂಬಂಧಪಟ್ಟ ಹತ್ತಿರದ ಪೊಲೀಸ್ ಠಾಣೆಗೆ ದೂರು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌, ಬಿಜೆಪಿ ಪರವಾಗಿರುವವರಿಂದಲೇ ಲೂಟಿ: ಮಲ್ಲಿಕಾರ್ಜುನ ಖರ್ಗೆ ಆರೋಪ

ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…

9 hours ago

ಇದು ಡಿ.ಕೆ. ಶಿವಕುಮಾರ್ ಸರ್ಕಾರವಲ್ಲ, ಜನರ ಸರ್ಕಾರ, ಸಂವಿಧಾನದ ಆಶಯಗಳಿಗೆ ಬದ್ಧವಾಗಿರುವ ಸರ್ಕಾರ- ಸಿಎಂ ಡಿಕೆಶಿ

ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…

9 hours ago

ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

12 hours ago

ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

1 day ago

“ವಿಬಿ-ಜಿ ರಾಮ್ ಜಿ” ಯೋಜನೆಗೆ ಚಾಲನೆ

"ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025" ಗ್ರಾಮೀಣ ಭಾರತದ ಸಮಗ್ರ…

1 day ago

ಕಳುವಾಗಿದ್ದ ಚಿನ್ನಾಭರಣ, ನಗದು ದೂರುದಾರರಿಗೆ ಹಸ್ತಾಂತರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಲಾಗಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು…

2 days ago