Categories: ತುಮಕೂರು

ಬಸ್ಸಿನಲ್ಲಿ ಪಿಕ್ ಪಾಕೆಟ್ ಮಾಡುತ್ತಿದ್ದ ಕಳ್ಳಿಯರ ಬಂಧನ: 10.05 ಲಕ್ಷ ಬೆಲೆ ಬಾಳುವ ಚಿನ್ನದ ಒಡವೆಗಳ ವಶ

ಜ.9ರಂದು ಬೆಳಗ್ಗೆ ತಿಪಟೂರು ತಾಲ್ಲೂಕು, ಹೊನ್ನವಳ್ಳಿ ಹೋಬಳಿ, ಗೌಡನಕಟ್ಟೆ ಗ್ರಾಮದ ರಾಜೇಶ್ವರಿ ಎಂಬಾಕೆ ಸಂಬಂಧಿಕರ ಮಗಳ ನಾಮಕರಣಕ್ಕೆ ಹೊಸದುರ್ಗದ ಮಾಳಪ್ಪನಹಳ್ಳಿಗೆ ಹೋಗಲು ತಿಪಟೂರಿನಿಂದ ಹುಳಿಯಾರಿಗೆ ಬಂದು ಹುಳಿಯಾರಿನಿಂದ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಮಾಳಪ್ಪನಹಳ್ಳಿಗೆ ಹೋಗಲು ಹುಳಿಯಾರು ಬಸ್ ಸ್ಟಾಪ್ ನಲ್ಲಿ ಬೆಳಗ್ಗೆ 10.45 ರ ಸಮಯದಲ್ಲಿ ಬಸ್ ಗೆ ಹತ್ತುವ ಸಮಯದಲ್ಲಿ ತಾನು ಬಗಲಿನಲ್ಲಿ ನೇತು ಹಾಕಿಕೊಂಡಿದ್ದ ಬ್ಯಾಗ್ ನಲ್ಲಿದ್ದ ಪರ್ಸನ್ನು ಅದರಲ್ಲಿದ್ದ ಚಿನ್ನದ ಒಡವೆಗಳ ಸಮೇತ ಯಾರೋ ಕಳ್ಳರು ಪಿಕ್ ಪಾಕೆಟ್ ಮಾಡಿ ಕದ್ದಿರುತ್ತಾರೆ, ಈ ಕುರಿತು ಹುಳಿಯಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಈ ಕೇಸಿನ ಆರೋಪಿತರನ್ನು ಪತ್ತೆ ಮಾಡಲು ತುಮಕೂರು ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರವರುಗಳಾದ ವಿ.ಮರಿಯಪ್ಪ ಹಾಗೂ ಬಿ.ಎಸ್. ಅಬ್ದುಲ್ ಖಾದರ್ ರವರ ನೇತೃತ್ವದಲ್ಲಿ, ತಿಪಟೂರು ಉಪವಿಭಾಗದ ಡಿ.ಎಸ್.ಪಿ. ವಿನಾಯಕ ಎನ್ ಶೆಟಗೇರಿ ರವರ ಮಾರ್ಗ ಸೂಚನೆ ಮೇರೆಗೆ ತಂಡ ರಚಿಸಿದ್ದು, ಫೆ.27ರಂದು‌ ಅಲುವೇಲಮ್ಮ ಹಾಗೂ ಇತರ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಹುಳಿಯಾರು ಪೊಲೀಸ್ ಠಾಣಾ ವ್ಯಾಪ್ತಿಯ 01 ಪ್ರಕರಣ ಹಾಗೂ ಕಿಬ್ಬನಹಳ್ಳಿ ಕ್ರಾಸ್ ಠಾಣಾ ವ್ಯಾಪ್ತಿಯ 01 ಪ್ರಕರಣಗಳಲ್ಲಿ ವರದಿಯಾಗಿದ್ದ ಕಳ್ಳತನಗಳಲ್ಲಿ ಭಾಗಿಯಾಗಿರುವುದಾಗಿ ತಿಳಿದು ಬಂದಿರುತ್ತದೆ.

ಆರೋಪಿತರಿಂದ ಒಟ್ಟು 10,05 ಲಕ್ಷ ಬೆಲೆ ಬಾಳುವ 134 ಗ್ರಾಂ ಚಿನ್ನದ ಒಡವೆಗಳನ್ನು ವಶಪಡಿಸಿಕೊಂಡು ಕಾನೂನು ರಿತ್ಯಾ ಕ್ರಮ ಕೈಗೊಳ್ಳಲಾಗಿದೆ.

Ramesh Babu

Journalist

Recent Posts

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

3 hours ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

3 hours ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

4 hours ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

5 hours ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

7 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

14 hours ago