Categories: ತುಮಕೂರು

ಬಸ್ಸಿನಲ್ಲಿ ಪಿಕ್ ಪಾಕೆಟ್ ಮಾಡುತ್ತಿದ್ದ ಕಳ್ಳಿಯರ ಬಂಧನ: 10.05 ಲಕ್ಷ ಬೆಲೆ ಬಾಳುವ ಚಿನ್ನದ ಒಡವೆಗಳ ವಶ

ಜ.9ರಂದು ಬೆಳಗ್ಗೆ ತಿಪಟೂರು ತಾಲ್ಲೂಕು, ಹೊನ್ನವಳ್ಳಿ ಹೋಬಳಿ, ಗೌಡನಕಟ್ಟೆ ಗ್ರಾಮದ ರಾಜೇಶ್ವರಿ ಎಂಬಾಕೆ ಸಂಬಂಧಿಕರ ಮಗಳ ನಾಮಕರಣಕ್ಕೆ ಹೊಸದುರ್ಗದ ಮಾಳಪ್ಪನಹಳ್ಳಿಗೆ ಹೋಗಲು ತಿಪಟೂರಿನಿಂದ ಹುಳಿಯಾರಿಗೆ ಬಂದು ಹುಳಿಯಾರಿನಿಂದ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಮಾಳಪ್ಪನಹಳ್ಳಿಗೆ ಹೋಗಲು ಹುಳಿಯಾರು ಬಸ್ ಸ್ಟಾಪ್ ನಲ್ಲಿ ಬೆಳಗ್ಗೆ 10.45 ರ ಸಮಯದಲ್ಲಿ ಬಸ್ ಗೆ ಹತ್ತುವ ಸಮಯದಲ್ಲಿ ತಾನು ಬಗಲಿನಲ್ಲಿ ನೇತು ಹಾಕಿಕೊಂಡಿದ್ದ ಬ್ಯಾಗ್ ನಲ್ಲಿದ್ದ ಪರ್ಸನ್ನು ಅದರಲ್ಲಿದ್ದ ಚಿನ್ನದ ಒಡವೆಗಳ ಸಮೇತ ಯಾರೋ ಕಳ್ಳರು ಪಿಕ್ ಪಾಕೆಟ್ ಮಾಡಿ ಕದ್ದಿರುತ್ತಾರೆ, ಈ ಕುರಿತು ಹುಳಿಯಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಈ ಕೇಸಿನ ಆರೋಪಿತರನ್ನು ಪತ್ತೆ ಮಾಡಲು ತುಮಕೂರು ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರವರುಗಳಾದ ವಿ.ಮರಿಯಪ್ಪ ಹಾಗೂ ಬಿ.ಎಸ್. ಅಬ್ದುಲ್ ಖಾದರ್ ರವರ ನೇತೃತ್ವದಲ್ಲಿ, ತಿಪಟೂರು ಉಪವಿಭಾಗದ ಡಿ.ಎಸ್.ಪಿ. ವಿನಾಯಕ ಎನ್ ಶೆಟಗೇರಿ ರವರ ಮಾರ್ಗ ಸೂಚನೆ ಮೇರೆಗೆ ತಂಡ ರಚಿಸಿದ್ದು, ಫೆ.27ರಂದು‌ ಅಲುವೇಲಮ್ಮ ಹಾಗೂ ಇತರ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಹುಳಿಯಾರು ಪೊಲೀಸ್ ಠಾಣಾ ವ್ಯಾಪ್ತಿಯ 01 ಪ್ರಕರಣ ಹಾಗೂ ಕಿಬ್ಬನಹಳ್ಳಿ ಕ್ರಾಸ್ ಠಾಣಾ ವ್ಯಾಪ್ತಿಯ 01 ಪ್ರಕರಣಗಳಲ್ಲಿ ವರದಿಯಾಗಿದ್ದ ಕಳ್ಳತನಗಳಲ್ಲಿ ಭಾಗಿಯಾಗಿರುವುದಾಗಿ ತಿಳಿದು ಬಂದಿರುತ್ತದೆ.

ಆರೋಪಿತರಿಂದ ಒಟ್ಟು 10,05 ಲಕ್ಷ ಬೆಲೆ ಬಾಳುವ 134 ಗ್ರಾಂ ಚಿನ್ನದ ಒಡವೆಗಳನ್ನು ವಶಪಡಿಸಿಕೊಂಡು ಕಾನೂನು ರಿತ್ಯಾ ಕ್ರಮ ಕೈಗೊಳ್ಳಲಾಗಿದೆ.

Ramesh Babu

Journalist

Recent Posts

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

9 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

10 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

19 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

2 days ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

3 days ago