ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ ಚಿಕ್ಕಬಳ್ಳಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಅಲ್ಲದೆ, ಕಳುವಾಗಿದ್ದ ಸಂಪೂರ್ಣ ಹಣ ಹಾಗೂ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ಘಟನೆ ವಿವರ
ಡಿಸೆಂಬರ್ 8ರಂದು ಶ್ರೀ ವೆಂಕಟೇಶ್ವರ್ ರಾವ್ ಬಿನ್ ಸಾಂಬಶಿವರಾವ್ ಎಂಬುವವರು ಬೆಂಗಳೂರಿನ ಅಶ್ವತ್ಥನಗರ ಮಾರತ್ ಹಳ್ಳಿಯಲ್ಲಿ ಬಿಲ್ಡಿಂಗ್ ಮಾರಾಟ ಮಾಡಿದ್ದರು. ಈ ವ್ಯವಹಾರದ ಅಗ್ರಿಮೆಂಟ್ ಮಾಡಿಕೊಂಡಿದ್ದ ಖರೀದಿದಾರರಿಂದ 55 ಲಕ್ಷ ರೂ. ನಗದು ಹಾಗೂ ಬಿಲ್ಡಿಂಗ್ ಗೆ ಸಂಬಂಧಿಸಿದ ದಾಖಲೆಗಳನ್ನು ಪಡೆದುಕೊಂಡು ಬೆಂಗಳೂರಿನಿಂದ ಹೈದರಾಬಾದ್ ಗೆ ಹೋಗಲು ಕೆಎ 57-ಎಫ್ 3911 ನೋಂದಣಿ ಸಂಖ್ಯೆಯ ಅಂಬಾರಿ ಗ್ರೀನ್ ಕ್ಲಾಸ್ ಕೆಎಸ್ಆರ್ಟಿಸಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದರು.
ಪೆರೇಸಂದ್ರ ಪೊಲೀಸ್ ಠಾಣೆ ವ್ಯಾಪ್ತಿಯ ಅರೂರು ಬಳಿ ರಾತ್ರಿ 10 ಗಂಟೆ ಸುಮಾರಿಗೆ ಬಸ್ ನಿಲ್ಲಿಸಲಾಗಿತ್ತು. ಈ ವೇಳೆ ವೆಂಕಟೇಶ್ವರ್ ರಾವ್ ಅವರು ಊಟಕ್ಕಾಗಿ ಹೋಗಿ ವಾಪಸ್ ಬಂದು ನೋಡಿದಾಗ, ಬಸ್ಸಿನಲ್ಲಿಟ್ಟಿದ್ದ 55 ಲಕ್ಷ ರೂ. ಹಣ ಮತ್ತು ದಾಖಲೆಗಳಿದ್ದ ಬ್ಯಾಗ್ ಕಳವಾಗಿತ್ತು. ಕೂಡಲೇ ರಾತ್ರಿ 11 ಗಂಟೆಗೆ ಪೆರೇಸಂದ್ರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ತನಿಖಾ ತಂಡವು ಕಳುವಾದ ಹಣವನ್ನು ಶೀಘ್ರವಾಗಿ ಪತ್ತೆಹಚ್ಚಲು ಕಾರ್ಯಪ್ರವೃತ್ತವಾಯಿತು. ಸ್ಥಳದಿಂದ ಆಂಧ್ರಪ್ರದೇಶದ ಗಡಿಭಾಗದವರೆಗೆ, ತುಮಕೂರು ಹಾಗೂ ಬೆಂಗಳೂರು ನಗರದ ವಿವಿಧೆಡೆ ಆರೋಪಿಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಯಿತು.
ಆರೋಪಿಗಳು ಮಧ್ಯಪ್ರದೇಶ ರಾಜ್ಯದ ಧಾರ್ ಜಿಲ್ಲೆಯವರು ಎಂದು ತಿಳಿದುಬಂದ ಹಿನ್ನೆಲೆಯಲ್ಲಿ, ಗುಡಿಬಂಡೆ ವೃತ್ತದ ಅಪರಾಧ ಸಿಬ್ಬಂದಿ ಹಾಗೂ ಇತರ ಸಿಬ್ಬಂದಿ ತಂಡ ಮಧ್ಯಪ್ರದೇಶಕ್ಕೆ ತೆರಳಿ ಆರೋಪಿಗಳನ್ನ ಬಂಧಿಸಿತು.
ಈ ಪ್ರಕರಣದಲ್ಲಿ ಆರೋಪಿಗಳಾದ ಎ-1 ಅಸ್ಲಂ ಖಾನ್ ಬಿನ್ ಆಲಿಖಾನ್, ಎ-2 ಮುನೀರ್ ಖಾನ್ ಬಿನ್ ಬಾಬುಖಾನ್ ಎ-3 ಅಬ್ಯಾಖಾನ್ ಬಿನ್ ಆಲಿಖಾನ್, ಎ-4 ಶೇರು ಬಿನ್ ಪಪ್ಪು ರನ್ನ ಬಂಧಿಸಲಾಗಿದೆ.
ಬಂಧಿತ ಆರೋಪಿಗಳಿಂದ ಕಳುವಾಗಿದ್ದ 55 ಲಕ್ಷ ರೂ. ನಗದು ಹಾಗೂ ಬಿಲ್ಡಿಂಗ್ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಈ ಪ್ರಕರಣವನ್ನು ಭೇದಿಸಿದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಪೊಲೀಸ್ ವರಿಷ್ಠಾಧಿಕಾರಿಗಳು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಕೋಲಾರ: ಅಮೆಜಾನ್ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…
ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್ಸ್ಪೆಕ್ಟರ್ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…
ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್…
ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…
ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್ನ ಮೆಡ್ಚಲ್ ಪ್ರದೇಶದಲ್ಲಿ…
ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…