ಬಸ್ಸಿನಲ್ಲಿ 55 ಲಕ್ಷ ಹಣ ಮತ್ತು ಬಿಲ್ಡಿಂಗ್ ಗೆ ಸಂಬಂಧಿಸಿದ ದಾಖಲಾತಿಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರ ಬಂಧನ

ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ ಚಿಕ್ಕಬಳ್ಳಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಅಲ್ಲದೆ, ಕಳುವಾಗಿದ್ದ ಸಂಪೂರ್ಣ ಹಣ ಹಾಗೂ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.

ಘಟನೆ ವಿವರ

ಡಿಸೆಂಬರ್ 8ರಂದು ಶ್ರೀ ವೆಂಕಟೇಶ್ವರ್ ರಾವ್ ಬಿನ್ ಸಾಂಬಶಿವರಾವ್ ಎಂಬುವವರು ಬೆಂಗಳೂರಿನ ಅಶ್ವತ್ಥನಗರ ಮಾರತ್ ಹಳ್ಳಿಯಲ್ಲಿ ಬಿಲ್ಡಿಂಗ್ ಮಾರಾಟ ಮಾಡಿದ್ದರು. ಈ ವ್ಯವಹಾರದ ಅಗ್ರಿಮೆಂಟ್ ಮಾಡಿಕೊಂಡಿದ್ದ ಖರೀದಿದಾರರಿಂದ 55 ಲಕ್ಷ ರೂ. ನಗದು ಹಾಗೂ ಬಿಲ್ಡಿಂಗ್ ಗೆ ಸಂಬಂಧಿಸಿದ ದಾಖಲೆಗಳನ್ನು ಪಡೆದುಕೊಂಡು ಬೆಂಗಳೂರಿನಿಂದ ಹೈದರಾಬಾದ್ ಗೆ ಹೋಗಲು ಕೆಎ 57-ಎಫ್ 3911 ನೋಂದಣಿ ಸಂಖ್ಯೆಯ ಅಂಬಾರಿ ಗ್ರೀನ್ ಕ್ಲಾಸ್ ಕೆಎಸ್‌ಆರ್‌ಟಿಸಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದರು.

ಪೆರೇಸಂದ್ರ ಪೊಲೀಸ್ ಠಾಣೆ ವ್ಯಾಪ್ತಿಯ ಅರೂರು ಬಳಿ ರಾತ್ರಿ 10 ಗಂಟೆ ಸುಮಾರಿಗೆ ಬಸ್ ನಿಲ್ಲಿಸಲಾಗಿತ್ತು. ಈ ವೇಳೆ ವೆಂಕಟೇಶ್ವರ್ ರಾವ್ ಅವರು ಊಟಕ್ಕಾಗಿ ಹೋಗಿ ವಾಪಸ್ ಬಂದು ನೋಡಿದಾಗ, ಬಸ್ಸಿನಲ್ಲಿಟ್ಟಿದ್ದ 55 ಲಕ್ಷ ರೂ. ಹಣ ಮತ್ತು ದಾಖಲೆಗಳಿದ್ದ ಬ್ಯಾಗ್ ಕಳವಾಗಿತ್ತು. ಕೂಡಲೇ ರಾತ್ರಿ 11 ಗಂಟೆಗೆ ಪೆರೇಸಂದ್ರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ತನಿಖಾ ತಂಡವು ಕಳುವಾದ ಹಣವನ್ನು ಶೀಘ್ರವಾಗಿ ಪತ್ತೆಹಚ್ಚಲು ಕಾರ್ಯಪ್ರವೃತ್ತವಾಯಿತು. ಸ್ಥಳದಿಂದ ಆಂಧ್ರಪ್ರದೇಶದ ಗಡಿಭಾಗದವರೆಗೆ, ತುಮಕೂರು ಹಾಗೂ ಬೆಂಗಳೂರು ನಗರದ ವಿವಿಧೆಡೆ ಆರೋಪಿಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಯಿತು.

ಆರೋಪಿಗಳು ಮಧ್ಯಪ್ರದೇಶ ರಾಜ್ಯದ ಧಾರ್ ಜಿಲ್ಲೆಯವರು ಎಂದು ತಿಳಿದುಬಂದ ಹಿನ್ನೆಲೆಯಲ್ಲಿ, ಗುಡಿಬಂಡೆ ವೃತ್ತದ ಅಪರಾಧ ಸಿಬ್ಬಂದಿ ಹಾಗೂ ಇತರ ಸಿಬ್ಬಂದಿ ತಂಡ ಮಧ್ಯಪ್ರದೇಶಕ್ಕೆ ತೆರಳಿ ಆರೋಪಿಗಳನ್ನ ಬಂಧಿಸಿತು.

ಈ ಪ್ರಕರಣದಲ್ಲಿ ಆರೋಪಿಗಳಾದ ಎ-1 ಅಸ್ಲಂ ಖಾನ್ ಬಿನ್ ಆಲಿಖಾನ್, ಎ-2 ಮುನೀರ್ ಖಾನ್ ಬಿನ್ ಬಾಬುಖಾನ್ ಎ-3 ಅಬ್ಯಾಖಾನ್ ಬಿನ್ ಆಲಿಖಾನ್, ಎ-4 ಶೇರು ಬಿನ್ ಪಪ್ಪು ರನ್ನ ಬಂಧಿಸಲಾಗಿದೆ.

ಬಂಧಿತ ಆರೋಪಿಗಳಿಂದ ಕಳುವಾಗಿದ್ದ 55 ಲಕ್ಷ ರೂ. ನಗದು ಹಾಗೂ ಬಿಲ್ಡಿಂಗ್ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಈ ಪ್ರಕರಣವನ್ನು ಭೇದಿಸಿದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಪೊಲೀಸ್ ವರಿಷ್ಠಾಧಿಕಾರಿಗಳು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

Ramesh Babu

Journalist

Recent Posts

ಕೋಳಿ ವಿಚಾರದ ಜಗಳಕ್ಕೆ ಹೊಸ ಟ್ವಿಸ್ಟ್: ಎರಡೂ ಕಡೆಯಿಂದ ಹಲ್ಲೆ ಆರೋಪ, ಆಸ್ಪತ್ರೆಯಲ್ಲೂ ಗಲಾಟೆ

ಗೌರಿಬಿದನೂರು: ಕೋಳಿ ವಿಚಾರವಾಗಿ ಆರಂಭವಾದ ನೆರೆಹೊರೆಯವರ ನಡುವಿನ ಜಗಳ ಗಂಭೀರ ಸ್ವರೂಪ ಪಡೆದು, ಸಾರ್ವಜನಿಕ ಆಸ್ಪತ್ರೆಯೊಳಗೂ ಗಲಾಟೆ ನಡೆದ ಘಟನೆ…

2 minutes ago

” ಕ್ಷಮೆ” ಎಂಬ ಭಾವದ ಸುತ್ತ……

ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…

8 hours ago

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

18 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

19 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

1 day ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

2 days ago