ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ ಚಿಕ್ಕಬಳ್ಳಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಅಲ್ಲದೆ, ಕಳುವಾಗಿದ್ದ ಸಂಪೂರ್ಣ ಹಣ ಹಾಗೂ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ಘಟನೆ ವಿವರ
ಡಿಸೆಂಬರ್ 8ರಂದು ಶ್ರೀ ವೆಂಕಟೇಶ್ವರ್ ರಾವ್ ಬಿನ್ ಸಾಂಬಶಿವರಾವ್ ಎಂಬುವವರು ಬೆಂಗಳೂರಿನ ಅಶ್ವತ್ಥನಗರ ಮಾರತ್ ಹಳ್ಳಿಯಲ್ಲಿ ಬಿಲ್ಡಿಂಗ್ ಮಾರಾಟ ಮಾಡಿದ್ದರು. ಈ ವ್ಯವಹಾರದ ಅಗ್ರಿಮೆಂಟ್ ಮಾಡಿಕೊಂಡಿದ್ದ ಖರೀದಿದಾರರಿಂದ 55 ಲಕ್ಷ ರೂ. ನಗದು ಹಾಗೂ ಬಿಲ್ಡಿಂಗ್ ಗೆ ಸಂಬಂಧಿಸಿದ ದಾಖಲೆಗಳನ್ನು ಪಡೆದುಕೊಂಡು ಬೆಂಗಳೂರಿನಿಂದ ಹೈದರಾಬಾದ್ ಗೆ ಹೋಗಲು ಕೆಎ 57-ಎಫ್ 3911 ನೋಂದಣಿ ಸಂಖ್ಯೆಯ ಅಂಬಾರಿ ಗ್ರೀನ್ ಕ್ಲಾಸ್ ಕೆಎಸ್ಆರ್ಟಿಸಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದರು.
ಪೆರೇಸಂದ್ರ ಪೊಲೀಸ್ ಠಾಣೆ ವ್ಯಾಪ್ತಿಯ ಅರೂರು ಬಳಿ ರಾತ್ರಿ 10 ಗಂಟೆ ಸುಮಾರಿಗೆ ಬಸ್ ನಿಲ್ಲಿಸಲಾಗಿತ್ತು. ಈ ವೇಳೆ ವೆಂಕಟೇಶ್ವರ್ ರಾವ್ ಅವರು ಊಟಕ್ಕಾಗಿ ಹೋಗಿ ವಾಪಸ್ ಬಂದು ನೋಡಿದಾಗ, ಬಸ್ಸಿನಲ್ಲಿಟ್ಟಿದ್ದ 55 ಲಕ್ಷ ರೂ. ಹಣ ಮತ್ತು ದಾಖಲೆಗಳಿದ್ದ ಬ್ಯಾಗ್ ಕಳವಾಗಿತ್ತು. ಕೂಡಲೇ ರಾತ್ರಿ 11 ಗಂಟೆಗೆ ಪೆರೇಸಂದ್ರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ತನಿಖಾ ತಂಡವು ಕಳುವಾದ ಹಣವನ್ನು ಶೀಘ್ರವಾಗಿ ಪತ್ತೆಹಚ್ಚಲು ಕಾರ್ಯಪ್ರವೃತ್ತವಾಯಿತು. ಸ್ಥಳದಿಂದ ಆಂಧ್ರಪ್ರದೇಶದ ಗಡಿಭಾಗದವರೆಗೆ, ತುಮಕೂರು ಹಾಗೂ ಬೆಂಗಳೂರು ನಗರದ ವಿವಿಧೆಡೆ ಆರೋಪಿಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಯಿತು.
ಆರೋಪಿಗಳು ಮಧ್ಯಪ್ರದೇಶ ರಾಜ್ಯದ ಧಾರ್ ಜಿಲ್ಲೆಯವರು ಎಂದು ತಿಳಿದುಬಂದ ಹಿನ್ನೆಲೆಯಲ್ಲಿ, ಗುಡಿಬಂಡೆ ವೃತ್ತದ ಅಪರಾಧ ಸಿಬ್ಬಂದಿ ಹಾಗೂ ಇತರ ಸಿಬ್ಬಂದಿ ತಂಡ ಮಧ್ಯಪ್ರದೇಶಕ್ಕೆ ತೆರಳಿ ಆರೋಪಿಗಳನ್ನ ಬಂಧಿಸಿತು.
ಈ ಪ್ರಕರಣದಲ್ಲಿ ಆರೋಪಿಗಳಾದ ಎ-1 ಅಸ್ಲಂ ಖಾನ್ ಬಿನ್ ಆಲಿಖಾನ್, ಎ-2 ಮುನೀರ್ ಖಾನ್ ಬಿನ್ ಬಾಬುಖಾನ್ ಎ-3 ಅಬ್ಯಾಖಾನ್ ಬಿನ್ ಆಲಿಖಾನ್, ಎ-4 ಶೇರು ಬಿನ್ ಪಪ್ಪು ರನ್ನ ಬಂಧಿಸಲಾಗಿದೆ.
ಬಂಧಿತ ಆರೋಪಿಗಳಿಂದ ಕಳುವಾಗಿದ್ದ 55 ಲಕ್ಷ ರೂ. ನಗದು ಹಾಗೂ ಬಿಲ್ಡಿಂಗ್ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಈ ಪ್ರಕರಣವನ್ನು ಭೇದಿಸಿದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಪೊಲೀಸ್ ವರಿಷ್ಠಾಧಿಕಾರಿಗಳು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಗ್ರಾಮದಲ್ಲಿ ತಡರಾತ್ರಿ ರೌಡಿ ಶೀಟರ್ನನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಬರ್ಬರವಾಗಿ ಹತ್ಯೆ…
ಕಾಕ್ರೋಚ್ ಜನತಾ ಪಾರ್ಟಿ...... ಸಾಮಾಜಿಕ ಜಾಲತಾಣದ ಹೊಸ ರಾಜಕೀಯ ಚಳುವಳಿ ಎಂದು ಕಳೆದ ಐದಾರು ವಾರಗಳಿಂದ ಇಡೀ ದೇಶದಾದ್ಯಂತ ಬಹುದೊಡ್ಡ…
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…