ಸಾಯಲು ಎಲ್ಲಿಯಾದರೇನು? ನಿರ್ಧಾರ ಮಾಡಿದ ವ್ಯಕ್ತಿಯನ್ನು ತಡೆ ಹಿಡಿಯಲು ಸಾಧ್ಯವಿಲ್ಲ ಎಂಬುದಕ್ಕೆ ಸಾಕ್ಷಿ ಕುಶಾಲನಗರದಲ್ಲಿ ನಡೆದ ಘಟನೆಯಾಗಿದೆ.
ಕೆ.ಎಸ್.ಆರ್.ಟಿ. ಸಿ. ಬಸ್ ಚಕ್ರಕ್ಕೆ ತಲೆಕೊಟ್ಟು ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ
ನಿನ್ನೆ ರಾತ್ರಿ ಕುಶಾಲನಗರದಲ್ಲಿ ನಡೆದಿದೆ.
ಸೋಮವಾರಪೇಟೆ ಶಾಂತಳ್ಳಿ ಗ್ರಾಮದ ಸೋಮಶೇಖರ್ (45), ಎಂದು ಗುರುತಿಸಲಾಗಿದೆ.
ಈತ ಸೋಮವಾರಪೇಟೆ ಬಾರ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಅವಿವಾಹಿತನಾಗಿದ್ದ ಎಂದು ಹೇಳಲಾಗಿದೆ.
ಕಳೆದ ಒಂದು ವಾರದಿಂದ ಕುಶಾಲನಗರದ ಸಾರಿಗೆ ಬಸ್ ನಿಲ್ದಾಣದಲ್ಲಿ ಈತ ತಂಗುತ್ತಿದ್ದನಂತೆ….
ಗುರುವಾರ ಸಂಜೆ ನಿಲ್ದಾಣಕ್ಕೆ ಬರುತ್ತಿದ್ದ ಬಸ್ ಮುಂದೆ ಬೀಳಲು ಪ್ರಯತ್ನ ನಡೆಸಿ ವಿಫಲಗೊಂಡಿದ್ದ.
ಇಂದಿರಾ ಕ್ಯಾಂಟಿನ್ ಮುಂಭಾಗ ರಾತ್ರಿ 8 ಗಂಟೆಗೆ ಮತ್ತೆ ಈತ ಬಸ್ ಕೆಳಗೆ ಹಾರಿ ಜೀವ ಕಳೆದುಕೊಂಡಿದ್ದಾನೆ….