ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಸೋಗಿನಲ್ಲಿ ಬರುತ್ತಿದ್ದ ಸುಂದರ ಯುವತಿಯರು: ಪ್ರಯಾಣಿಕರ ಗಮನ ಬೇರೆಡೆ ಸೆಳೆದು ಚಿನ್ನಾಭರಣಗಳ ಕಳವು

ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಸೋಗಿನಲ್ಲಿ ಬರುತ್ತಿದ್ದ ಸುಂದರ ಯುವತಿಯರು, ಪ್ರಯಾಣಿಕರ ಗಮನ ಬೇರೆಡೆ ಸೆಳೆದು ಬ್ಯಾಗ್ ನಲ್ಲಿದ್ದ ಚಿನ್ನಾಭರಣಗಳನ್ನ ಕ್ಷಣ ಮಾತ್ರದಲ್ಲಿ ಎಗರಿಸುತ್ತಿದ್ದರು. ಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ನಗರ ಪೊಲೀಸರು ಮೂವರು ಯುವತಿಯರನ್ನ ಬಂಧಿಸಿದ್ದಾರೆ.

ಜುಲೈ 27 ರಂದು ಮಧ್ಯಾಹ್ನ ಚಿಕ್ಕಬಳ್ಳಾಪುರ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಘಟನೆ ನಡೆದಿದ್ದು, ಘಟನೆ ಸಂಬಂಧ ಚಿನ್ನಾಭರಣ ಕಳೆದುಕೊಂಡಿದ್ದ ಚಿಕ್ಕಬಳ್ಳಾಪುರ ನಿವಾಸಿ ರಿಹಾನಾ ಖಾನಂ ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು, ದೂರು ದಾಖಲಿಸಿಕೊಂಡ ನಗರ ಠಾಣೆ ಪೊಲೀಸರು ಚಿನ್ನಾಭರಣ ಕಳವು ಮಾಡಿದ್ದ ಮೂವರು ಯುವತಿಯರನ್ನ ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನ 22 ವರ್ಷದ ತುಳಸಿ, 21 ವರ್ಷದ ಪ್ರೇಮ, ಹಾಗೂ 25 ವರ್ಷದ ಸೋನಿಯಾ ಎಂದು ಗುರುತಿಸಲಾಗಿದ್ದು, ಬಂಧಿತರಿಂದ 70 ಗ್ರಾಂ ತೂಕದ 7 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನ ವಶಪಡಿಸಿಕೊಂಡಿದ್ದು, ಮೂವರು ಕಳ್ಳಿಯರನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಪ್ರಕರಣ ಸಂಬಂಧ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ, ಜುಲೈ 27 ರಂದು ರಿಹಾನ ಖಾನಂ ಚಿನ್ನಾಭರಣ ಕಳವು ಸಂಬಂಧ ಚಿಕ್ಕಬಳ್ಳಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದರು, ಆರೋಪಿಗಳ ಪತ್ತೆಗೆ ಮುಂದಾದ ಪೊಲೀಸರು, ಬಸ್ ನಿಲ್ದಾಣದ ಸಿಸಿ ಕ್ಯಾಮಾರ ಪರಿಶೀಲನೆ ಮಾಡಿದ್ದು, ಅನುಮಾನಸ್ಪದ ವ್ಯಕ್ತಿಗಳ ಬಗ್ಗೆ ಗಮನ ಹರಿಸಿದ್ದಾರೆ, ಈ ವೇಳೆ ಬಸ್ ನಿಲ್ದಾಣದಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಮೂವರು ಯುವತಿಯರು ಪತ್ತೆಯಾಗಿದ್ದಾರೆ, ಇವರನ್ನ ಬಂಧಿಸಿ ವಿಚಾರಣೆ ನಡೆಸಿದಾಗ ಚಿನ್ನಾಭರಣಗಳನ್ನ ಕದ್ದಿರೋದಾಗಿ ಅಸಲಿ ಸತ್ಯ ಬಾಯಿಬಿಟ್ಟಿದ್ದಾರೆ.

ಬಂಧಿತ ಆರೋಪಿಗಳು ಕಲಬುರ್ಗಿ ಮೂಲದ ಸೇಡಂ ನವರು, 22 ವರ್ಷದಿಂದ 25 ವರ್ಷದೊಳಗಿನ ಯುವತಿಯರು, ಬುರ್ಖಾ ಧರಿಸಿ ಬಸ್ ನಿಲ್ದಾಣದಲ್ಲಿ ಓಡಾಡುತ್ತಾರೆ, ಪ್ರಯಾಣಿಕರ ಗಮನ ಸೆಳೆದು ಚಿನ್ನಾಭರಣ ಕಳವು ಮಾಡುತ್ತಾರೆ, ಇವರ ಮೇಲೆ ವಿವಿಧ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿದೆ ಎಂದರು.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

3 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

13 hours ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

14 hours ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

1 day ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

1 day ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

1 day ago