ಬಸ್ ಪ್ರಯಾಣಿಕರೊಂದಿಗೆ ಮಂಗಳಮುಖಿ ಕಿರಿಕ್: ಪ್ರಶ್ನೆ ಮಾಡಿದಕ್ಕೆ ಬಟ್ಟೆಬಿಚ್ಚಿ ದುರ್ವತನೆ

ಚಿಕ್ಕಬಳ್ಳಾಪುರ: ಬಸ್ ಪ್ರಯಾಣಿಕರಿಗೆ ಕಿರುಕುಳ ನೀಡದಂತೆ ಬುದ್ಧಿವಾದ ಹೇಳಿದ್ದಕ್ಕೆ ಆಕ್ರೋಶಗೊಂಡ ಮಂಗಳಮುಖಿಯೊಬ್ಬರು ನಡುರಸ್ತೆಯಲ್ಲೇ ಅರೆನಗ್ನವಾಗಿ ಕಿರಿಕ್ ಮಾಡಿದ ಘಟನೆ ನಗರದ ಶಿಡ್ಲಘಟ್ಟ ವೃತ್ತದಲ್ಲಿ ನಡೆದಿದೆ.

ತಮಿಳುನಾಡು ಮೂಲದ ಮಂಗಳಮುಖಿ ಬಟ್ಟೆ ಬಿಚ್ಚಿ ಕಂಡಕ್ಟರ್ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಸ್ ಪ್ರಯಾಣಿಕರೊಂದಿಗೆ ಕಿರಿಕ್ ಮಾಡುತ್ತಿದ್ದ ಮಂಗಳಮುಖಿ ಕುರಿತು ಕಂಡಕ್ಟರ್ ಗೆ ದೂರು ನೀಡಿದ್ದರು. ನಿರ್ವಾಹಕರು ಗಲಾಟೆ‌ ಮಾಡದಂತೆ ಎಚ್ಚರಿಕೆ ನೀಡಿದ್ದರು.

ಅಷ್ಟಕ್ಕೇ ಕೋಪಗೊಂಡ‌ ಮಂಗಳಮುಖಿ, ಕಂಡಕ್ಟರ್ ಗೆ ಕಪಾಳಮೋಕ್ಷ ಮಾಡಿದ್ದಾರೆ. ಆಗ ಎಲ್ಲ‌ ಪ್ರಯಾಣಿಕರು ಮಂಗಳಮುಖಿಯನ್ನು ತರಾಟೆಗೆ ತೆಗೆದುಕೊಂಡು, ಶಿಡ್ಲಘಟ್ಟ ವೃತ್ತದಲ್ಲಿ ಕೆಳಗಿಳಿಸಿದ್ದಾರೆ.

ಉದ್ರಿಕ್ತಗೊಂಡ ಮಂಗಳಮುಖಿ ಪೊಲೀಸರ ಎದುರೇ ಅರೆನಗ್ನವಾಗಿ ಕೂಗಾಡಿದ್ದಾರೆ. ಅರ್ಧ ನಗ್ನದೇಹ ಪ್ರದರ್ಶಿಸಿದ ಮಂಗಳಮುಖಿಗೆ ಬಟ್ಟೆ ಧರಿಸುವಂತೆ ಪೊಲೀಸರು ಮನವಿ ಮಾಡಿದ ಬಳಿಕ ಬಟ್ಟೆ ಧರಿಸಿದರು.

Ramesh Babu

Journalist

Recent Posts

ಬಹಿರ್ದೆಸೆಗೆ ಹೋದ ಬಾಲಕನ ಜೀವ ಕಸಿದ ವೇಗದ ಆಟೋ

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…

40 minutes ago

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

20 hours ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

1 day ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

1 day ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

1 day ago

ಉಪೇಂದ್ರ ಮತ್ತು ಪ್ರಜಾಕೀಯ……..

ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…

2 days ago