ಬಸ್ ಫುಲ್ ರಶ್: ಹೆಚ್ಚುವರಿ ಬಸ್ ಗಾಗಿ ಆಗ್ರಹಿಸಿ ಪಾಲ್ ಪಾಲ್ ದಿನ್ನೆ ಗ್ರಾಮದಲ್ಲಿ ಬಸ್ ತಡೆದು ವಿದ್ಯಾರ್ಥಿಗಳ ಪ್ರತಿಭಟನೆ

ಮೇಲಿನಜೂಗಾನಹಳ್ಳಿ- ದೊಡ್ಡಬಳ್ಳಾಪುರ ಮಾರ್ಗದಲ್ಲಿ ಬೆಳಗ್ಗೆ 8ಗೆ ಸಂಚರಿಸುವ ಕೆಎಸ್ಆರ್ ಟಿಸಿ ಬಸ್ ಪ್ರತಿದಿನ ಫುಲ್ ರಶ್ ಆಗಿ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆ ಉಂಟಾಗುತ್ತಿದ್ದು, ಹಲವು ಬಾರಿ ಹೆಚ್ಚುವರಿ ಬಸ್ ಬಿಡುವಂತೆ ಕೆಎಸ್ಆರ್ ಟಿಸಿ ಘಟಕದ ವ್ಯವಸ್ಥಾಪಕರಿಗೆ ಮನವಿ‌ ಮಾಡಿದರು ಉಪಯೋಗವಾಗದ ಹಿನ್ನೆಲೆ ಇಂದು ಪಾಲ್ ಪಾಲ್ ದಿನ್ನೆ ಗ್ರಾಮದಲ್ಲಿ ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ ನಡೆಸಿದರು.

ಮೇಲಿನಜೂಗಾನಹಳ್ಳಿಯಿಂದ ಪಾಲ್ ಪಾಲ್ ದಿನ್ನೆ ಗ್ರಾಮಕ್ಕೆ ಬರುವಷ್ಟರಲ್ಲಿ ಬಸ್ ಫುಲ್ ರಶ್ ಆಗಿರುತ್ತದೆ. ಈ ಗ್ರಾಮದ ಶಾಲಾ-ಕಾಲೇಜು ವಿದ್ಯಾರ್ಥಿಗಳು ಬಸ್ ಹತ್ತಲು ಜಾಗ ಇರೋದಿಲ್ಲ. ಇಲ್ಲಿನ ವಿದ್ಯಾರ್ಥಿಗಳು ಅವಧಿಯೊಳಗೆ ಶಾಲಾ-ಕಾಲೇಜುಗಳಿಗೆ ತರೆಳಲು ಆಗದೆ ಪ್ರತಿದಿನ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಹೇಳಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು. ಹೆಚ್ಚುವರಿ ಬಸ್ ಬಿಡಲು ಒತ್ತಾಯಿಸಿ ಹಲವು ಬಾರಿ ಮನವಿ ಸಲ್ಲಿಸಿದರೂ ಸಾರಿಗೆ ಇಲಾಖೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ ಹಿನ್ನೆಲೆಯಲ್ಲಿ ಸೋಮವಾರ ಬೆಳಗ್ಗೆ ವಿದ್ಯಾರ್ಥಿಗಳು ಸಾರ್ವಜನಿಕರೊಂದಿಗೆ ಬಸ್ ತಡೆದು ಪ್ರತಿಭಟನೆ ಕೈಗೊಂಡಿದ್ದಾರೆ. ಸ್ಥಳಕ್ಕೆ ಸಾರಿಗೆ ಇಲಾಖಾ ಅಧಿಕಾರಿಗಳು ಬಂದು ಹೆಚ್ಚುವರಿ ಬಸ್ ಬಿಡುತ್ತೇವೆ ಎಂದು ಹೇಳುವವರೆಗೂ‌ ಮೇಲೆ ಎದ್ದೇಳುವುದಿಲ್ಲ ಎಂದು ಪಟ್ಟು‌ಹಿಡಿದು ಧರಣಿ ನಡೆಸುತ್ತಿದ್ದಾರೆ.

Ramesh Babu

Journalist

Recent Posts

ರೋಗಿಗಳೊಂದಿಗೆ ದುರ್ವರ್ತನೆ ಆರೋಪ: ಕೊನಘಟ್ಟ ಸರ್ಕಾರಿ ಆಸ್ಪತ್ರೆ ವೈದ್ಯೆ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…

3 hours ago

ಬಹಿರ್ದೆಸೆಗೆ ಹೋದ ಬಾಲಕನ ಜೀವ ಕಸಿದ ವೇಗದ ಆಟೋ

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…

5 hours ago

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

1 day ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

1 day ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

1 day ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

2 days ago