ಬಹುತ್ವ ಕರ್ನಾಟಕವನ್ನು ಸಮಾನತೆ ಮತ್ತು ಪ್ರಜಾಸತ್ತಾತ್ಮಕ ಪ್ರಜ್ಞೆಯ ಮೂಲಕ ಕಟ್ಟಬೇಕಾಗಿದೆ- ಸಂಸ್ಕೃತಿ ಚಿಂತಕ ಡಾ.ರಹಮತ್ ತರೀಕೆರೆ

ಬಹುತ್ವ ಕರ್ನಾಟಕವನ್ನು ಸಮಾನತೆ ಮತ್ತು ಪ್ರಜಾಸತ್ತಾತ್ಮಕ ಪ್ರಜ್ಞೆಯ ಮೂಲಕ ಕಟ್ಟಬೇಕಾಗಿದೆ. ಏಕರೂಪೀಕರಣದ ಆತಂಕದ ಪ್ರಸ್ತುತ ಈ ಕಾಲಘಟ್ಟದಲ್ಲಿ ಬಹುತ್ವದ ಅಗತ್ಯವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಮತ್ತು ಸಂಸ್ಕೃತಿ ಚಿಂತಕ ಡಾ.ರಹಮತ್ ತರೀಕೆರೆ ತಿಳಿಸಿದರು.

ದೊಡ್ಡಬಳ್ಳಾಪುರ ನಗರದ ಆರ್.ಡಿ.ಕನ್ವೆನ್ಷನ್ ಹಾಲ್ ನಲ್ಲಿ ದೊಡ್ಡಬಳ್ಳಾಪುರ ಡಾ.ಡಿ.ಆರ್.ನಾಗರಾಜ್ ಬಳಗ ಮತ್ತು ಬೆಂಗಳೂರಿನ ಆಕೃತಿ ಪುಸ್ತಕ ಇವರ ಸಹಯೋಗದಲ್ಲಿ ಬಹುತ್ವ ಕರ್ನಾಟಕ ಲೇಖಕರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ನಮ್ಮ ಸಂಸ್ಕೃತಿ, ಪರಂಪರೆ ದೊರೆಯುವ ಬಹುತ್ವದ ಅರಿವನ್ನು ಶೋಧಿಸಬೇಕಾಗಿದೆ. ಬಹುತ್ವಕ್ಕಾಗಿ ನಾಗರಿಕ ಪ್ರಜ್ಞೆಯನ್ನು ಹೆಚ್ಚಿಸಬೇಕು. ಭಾರತದ ಸಂವಿಧಾನದಲ್ಲಿ ಅಂಬೇಡ್ಕರ್ ಅವರು ಹೇಳುವ ಸ್ವಾತಂತ್ರ್ಯ, ಸಮಾನತೆ ಮತ್ತು ಬಂಧುತ್ವ ಇವುಗಳನ್ನು ಬಹುತ್ವದ ಮೌಲ್ಯವಾಗಿ ರೂಪಿಸಬೇಕು. ಶಾಲಾ ಕಾಲೇಜುಗಳು ಬಹುತ್ವ ಕಲಿಸುವ ತಾಣಗಳಾಗಬೇಕಾಗಿದೆ ಎಂದರು.

ಭಾರತವು ವೈವಿಧ್ಯಮಯತೆಯಿಂದ ಕೂಡಿದೆ. ವೈವಿಧ್ಯತೆಯೇ ಬಹುತ್ವವಲ್ಲ, ಸಮಾನ ಅವಕಾಶಗಳೇ ಬಹುತ್ವ. ಬಹುತ್ವದ ಮೇಲೆ ಏಕಸಂಸ್ಕೃತಿಯನ್ನು ಹೇರುವ ಸಾಂಸ್ಕೃತಿಕ ರಾಜಕಾರಣ ಪ್ರಜ್ಞಾಪೂರ್ವಕವಾಗಿ ನಡೆಯುತ್ತಿದೆ. ಒಂದೇ ಸಂಸ್ಕೃತಿ, ನಾಯಕತ್ವ, ಧರ್ಮವನ್ನು ಹೇರುವುದು ಬಿಕ್ಕಟ್ಟಿಗೆ ಕಾರಣವಾಗುತ್ತದೆ. ಇಂತಹ ಸಂದರ್ಭಗಳಲ್ಲಿ ಪ್ರಜಾಪ್ರಭುತ್ವವಿರುವ ರಾಷ್ಟ್ರಗಳಲ್ಲಿ ಸಾಮಾಜಿಕ ಪ್ರಜಾಭುತ್ವ ನಾಶವಾಗುತ್ತದೆ. ಭಾರತದ ಆರ್ಥಿಕ ಹಿಡಿತ ಶೇ.10 ಜನರಲ್ಲಿದೆ ಎಂಬುದು ಅಸಮಾನತೆಯನ್ನು ತೋರಿಸುತ್ತದೆ. ಹಲವು ಭಾಷೆ, ಸಂಸ್ಕೃತಿ, ಧರ್ಮ, ಪ್ರಾದೇಶಿಕತೆ ಹೊಂದಿರುವ ಭಾರತಕ್ಕೆ ಬಹುತ್ವ ಅಗತ್ಯ ಮತ್ತು ಅನಿವಾರ್ಯವಾಗಿದೆ ಎಂದರು.

ಸಾಹಿತಿ ಡಾ.ನೆಲ್ಲುಕುಂಟೆ ವೆಂಕಟೇಶಯ್ಯ ಮಾತನಾಡಿ, ಬಹುತ್ವದಲ್ಲಿ ವೈಜ್ಞಾನಿಕ ಸತ್ಯವು ಅಡಗಿದೆ. ಮನುಷ್ಯಪರವಾದ ಬಹುತ್ವ ಉಳಿದರೆ ಮನುಷ್ಯ ಉಳಿಯುತ್ತಾನೆ. ಕೋಮುವಾದ ಮತ್ತು ಮತೀಯವಾದದ ಸಂಘರ್ಷಕ್ಕೆ ಅನುಮಾನ ಕಾರಣವಾಗುತ್ತದೆ. ಅನುಮಾನ ದ್ವೇಷವಾಗಿ, ಹಿಂಸೆ ರೂಪತಾಳಿ ವಿನಾಶದ ಕಡೆಗೆ ದೂಡುತ್ತದೆ. ಕೋಮು ಸೌಹಾರ್ದತೆಗೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಬಹುತ್ವದ ಅಗತ್ಯವಿದೆ ಎಂದರು.

ವಿಮರ್ಶಕ ಡಾ.ಕಂಟನುಕುಂಟೆ ರಂಗನಾಥ ಮಾತನಾಡಿ, ಪ್ರಭುತ್ವ ಮತ್ತು ಜನತೆ ಎರಡು ಕಡೆಯಿಂದಲೂ ಬಹುತ್ವ ಸಾಧಿಸಬೇಕಾಗಿದೆ. ಪ್ರಜಾಪ್ರಭುತ್ವ ಆಶಯದೊಂದಿಗೆ ಬಹುತ್ವ ಒಂದಾಗಬೇಕು. ಬಹುತ್ವವನ್ನು ಜೀವನ ಕ್ರಮದ ಪ್ರಕ್ರಿಯೆ ಆಗಬೇಕು. ಬಹುತ್ವಕ್ಕಿರುವ ಅಪಾಯಗಳನ್ನು ಅರಿಯಬೇಕೆಂದರು.

ವಿಮರ್ಶಕ ಡಾ.ರವಿಕುಮಾರ್ ನೀಹ ಮಾತನಾಡಿ, ಯಾವುದೇ ಧರ್ಮದಲ್ಲಿ ಏಕರೂಪತೆ ತರಲು ಸಾಧ್ಯವಿಲ್ಲ. ಒಂದೇ ರೀತಿಯ ಊಟ, ಸಿದ್ಧಾಂತವನ್ನು ಹೇರುವುದು ಅಪಾಯಕಾರಿ. ಬಹುತ್ವದ ಮೇಲೆ ಏಕಸಂಸ್ಕೃತಿಯನ್ನು ಹೇರುವುದು ಸರಿಯಲ್ಲ ಎಂದರು.

ಬಹುತ್ವ ಕರ್ನಾಟಕ ಪುಸ್ತಕದ ಲೇಖಕರಾದ ಡಾ.ರಹಮತ್ ತರೀಕೆರೆ ಅವರೊಂದಿಗೆ ನಡೆದ ಸಂವಾದದಲ್ಲಿ ದೊಡ್ಡಬಳ್ಳಾಪುರ ಡಾ.ಡಿ.ಆರ್.ನಾಗರಾಜ್ ಬಳಗದ ಡಾ.ಪ್ರಕಾಶ್ ಮಂಟೆದ, ಹೇಮಂತ್ ಲಿಂಗಪ್ಪ, ಉಪನ್ಯಾಸಕರುಗಳಾದ ವನಿತಾ, ಪ್ರಸನ್ನ ಲಕ್ಷ್ಮೀಪುರ, ಎಚ್.ಎನ್.ರೇಣುಕಾರಾಧ್ಯ, ಚಂದ್ರಶೇಖರ್ ದೊಡ್ಡಬಳ್ಳಾಪುರದ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

Ramesh Babu

Journalist

Recent Posts

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

7 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

2 days ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

4 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 days ago