ಬಾಕಿ ಬಿಲ್ ಬಿಡುಗಡೆಗೆ ಆಗ್ರಹಿಸಿ ರಾಜ್ಯ ಗುತ್ತಿಗೆದಾರರ ಸಂಘ ಪ್ರತಿಭಟನೆ: ಆದಷ್ಟು ಬೇಗ ನ್ಯಾಯಯುತ ಪರಿಹಾರ ಒದಗಿಸಲಾಗುವುದು- ಡಿಸಿಎಂ ಡಿಕೆಶಿ

“ಸಮಸ್ಯೆ ಬಗೆಹರಿಸಲು ಎಲ್ಲರೂ ಸೇರಿ ಪರಿಹಾರ ಕಂಡುಕೊಳ್ಳಬೇಕಾಗಿದ್ದು, ನಾನು ಹಾಗೂ ಸಚಿವರಾದ ಸತೀಶ್ ಜಾರಕಿಹೊಳಿ ಸೇರಿ ಈ ಅಧಿವೇಶನದ ವೇಳೆ ಮುಖ್ಯಮಂತ್ರಿಗಳ ಜತೆ ಗುತ್ತಿಗೆದಾರರ ಸಭೆ ಆಯೋಜಿಸುತ್ತೇವೆ,” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ ನೀಡಿದರು.

ಬಾಕಿ ಬಿಲ್ ಬಿಡುಗಡೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳನ್ನು ಭೇಟಿ ಮಾಡಿ, ಅವರ ಅಹವಾಲುಗಳನ್ನು ಸ್ವೀಕರಿಸಿ, ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ನಿಮ್ಮ ನೋವು ನನಗೆ ಅರ್ಥವಾಗುತ್ತದೆ.. ಗುತ್ತಿಗೆದಾರರ ಸಮಸ್ಯೆಗಳಿಗೆ ನಮ್ಮ ಸರ್ಕಾರದಿಂದ ಆದಷ್ಟು ಬೇಗ ನ್ಯಾಯಯುತ ಪರಿಹಾರ ಒದಗಿಸಲಾಗುವುದು ಎಂದು ತಿಳಿಸಿದ್ದಾರೆ.

‘ಗುತ್ತಿಗೆದಾರರಿಗೆ ಹಣ ಪಾವತಿ ಮಾಡಬಾರದು ಎಂಬುದು ನಮ್ಮ ಉದ್ದೇಶವಲ್ಲ, ವಿಧಾನ ಪರಿಷತ್ತಿನಲ್ಲಿ ಶಿಕ್ಷಕರ ಕ್ಷೇತ್ರ, ಪದವೀಧರ ಕ್ಷೇತ್ರ, ಸಿನಿಮಾ, ಕಲೆ ಸೇರಿದಂತೆ ಇತರೆ ವಲಯದವರಿಗೆ ಒಂದು ಪ್ರಾತಿನಿಧ್ಯ ನೀಡಿದಂತೆ ಗುತ್ತಿಗೆದಾರರಿಗೆ ಒಂದು ಜಾಗ ಕೊಡಿಸಬೇಕಿದೆ. ಆಗ ನಿಮ್ಮ ಸಮಸ್ಯೆ ಬಗೆಹರಿಯಬಹುದು. ಇದಕ್ಕೆ ಒಂದು ದಾರಿ ಹುಡುಕಬೇಕಿದೆ,” ಎಂದರು.

 “ನನ್ನ ಇಲಾಖೆಯಲ್ಲಿ 13 ಸಾವಿರ ಕೋಟಿ,‌‌ ಬೋಸರಾಜು ಇಲಾಖೆಯಲ್ಲಿ 3 ಸಾವಿರ ಕೋಟಿ ರೂ. ಸೇರಿದಂತೆ ಸುಮಾರು 37 ಸಾವಿರ ಕೋಟಿ ಬಿಲ್ ಬಾಕಿ ಇದೆ. ನಿಮ್ಮ ನೋವು ನಮಗೆ ಗೊತ್ತಿದೆ. ನಾನು ಚುನಾವಣೆಗೆ ಆರು ತಿಂಗಳು ಮುಂಚಿತವಾಗಿ ಹೇಳಿದ್ದೆ. ಇಲಾಖೆಗಳಲ್ಲಿ ಹಣವಿಲ್ಲದೆ ಯಾವುದೇ ಗುತ್ತಿಗೆ ಕಾಮಗಾರಿ ತೆಗೆದುಕೊಳ್ಳಬೇಡಿ ಎಂದು ಎಚ್ಚರಿಸಿದ್ದೆ. ಯಡಿಯೂರಪ್ಪ ಹಾಗೂ ಬೊಮ್ಮಾಯಿ ಅವರು ಹಣ ಇರಲಿ, ಬಿಡಲಿ, ಕಾಮಗಾರಿ ಕೊಟ್ಟಿದ್ದೇ ಕೊಟ್ಟಿದ್ದು, ನೀವು ಕೆಲಸ ತೆಗೆದುಕೊಂಡು ನಮ್ಮ ಎದೆ ಮೇಲೆ ಕೂತಿದ್ದೀರಿ. ಇದರ ಪರಿಹಾರಕ್ಕಾಗಿ ಸುಮಾರು 50 ಸಾವಿರ ಕೋಟಿಯಷ್ಟು ಬಾಂಡ್ ಅಥವಾ ಇತರೆ ಮಾರ್ಗ ಹುಡುಕಬೇಕು,” ಎಂದರು.

“ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನರಿಗೆ ನೆರವು ನೀಡಲು ನಮ್ಮ ಸರಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದು, ಇದಕ್ಕಾಗಿ ಸುಮಾರು 52 ಸಾವಿರ ಕೋಟಿ ವಾರ್ಷಿಕವಾಗಿ ವೆಚ್ಚ ಮಾಡಲಾಗುತ್ತಿದೆ. ಆದರೂ, ನಮ್ಮ ರಾಜ್ಯದಲ್ಲಿ ಉತ್ತಮ ಬಜೆಟ್ ನೀಡುತ್ತಿದ್ದೇವೆ. ಇವತ್ತು ಕೂಡ ಮುಖ್ಯಮಂತ್ರಿಗಳು ಸರಿದೂಗಿಸಿ ಬಜೆಟ್ ಮಂಡಿಸಿದ್ದಾರೆ. ಬಿಜೆಪಿಯವರು ಖಾಲಿ ಚೊಂಬು ತೆಗೆದುಕೊಂಡಿದ್ದಾರೆ. ಕೇಂದ್ರ ಬಜೆಟ್‌ನಲ್ಲಿ ನಿರ್ಮಲಾ ಸೀತಾರಾಮನ್ ಅವರು ಏನು ಕೊಟ್ಟರು? ಖಾಲಿ ಬಿಂದಿಗೆ ಕೊಟ್ಟರು. ಆಗ ಇವರು ಏನೂ ಮಾತನಾಡಲಿಲ್ಲ, ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್‌ನಲ್ಲಿ 5300 ಕೋಟಿ ಘೋಷಣೆ ಮಾಡಿ ಈಗ ಕೊಟ್ಟಿದ್ದಾರಾ?,” ಎಂದು ಪ್ರಶ್ನಿಸಿದರು.

”ಬೆಂಗಳೂರು ಅಭಿವೃದ್ಧಿಗೆ ಅವರು ಹಣ ಕೊಟ್ಟಿಲ್ಲ, ಅವರು ಮಾಡಲಿ ಬಿಡಲಿ, ನಮ್ಮ ಕರ್ತವ್ಯ ನಾವು ಮಾಡಬೇಕು. ನೀವು ನಮ್ಮನ್ನು ಬಿಡಂಗಿಲ್ಲ. ನಾವು ನಿಮ್ಮನ್ನು ಬಿಡಂಗಿಲ್ಲ, ಮಾಧ್ಯಮಗಳ ಮುಂದೆ ಹೇಳಿಕೆ ನೀಡುವುದನ್ನು ಬಿಡಿ. ನೀವು ಹೇಳಿಕೆ ನೀಡಿದರೆ ಅದು ಒಂದು ದಿನದ ಸುದ್ದಿಯಾಗಬಹುದು, ಬೇರೆ ಯಾವುದೇ ಪ್ರಯೋಜನವಿಲ್ಲ, ನೀವು ನಮ್ಮ ಬಳಿ ಬಂದು ಚರ್ಚೆ ಮಾಡಿ, ಯಾವ ರೀತಿ ಹಣ ಹೊಂದಿಸಿ ಸಮಸ್ಯೆ ಬಗೆಹರಿಸಬೇಕು. ನೋಡೋಣ.” ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಚಿವರಾದ ಸತೀಶ್ ಜಾರಕಿಹೊಳಿ, ಎನ್‌.ಎಸ್. ಬೋಸರಾಜ್, ಸಂಫದ ಅಧ್ಯಕ್ಷರಾದ ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

‘ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಲ್ಪಿಗಳು’

ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…

39 minutes ago

ಬೆಸ್ಕಾಂ ವಿರುದ್ಧ ಒಣ ಮೆಣಸಿನಕಾಯಿ ಹೊಗೆ ಹೋರಾಟಕ್ಕೆ ರೈತರ ನಿರ್ಧಾರ

ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…

2 hours ago

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

8 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

19 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

20 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

20 hours ago