ಬಾಕಿ ಬಿಲ್ ಬಿಡುಗಡೆಗೆ ಆಗ್ರಹಿಸಿ ರಾಜ್ಯ ಗುತ್ತಿಗೆದಾರರ ಸಂಘ ಪ್ರತಿಭಟನೆ: ಆದಷ್ಟು ಬೇಗ ನ್ಯಾಯಯುತ ಪರಿಹಾರ ಒದಗಿಸಲಾಗುವುದು- ಡಿಸಿಎಂ ಡಿಕೆಶಿ

“ಸಮಸ್ಯೆ ಬಗೆಹರಿಸಲು ಎಲ್ಲರೂ ಸೇರಿ ಪರಿಹಾರ ಕಂಡುಕೊಳ್ಳಬೇಕಾಗಿದ್ದು, ನಾನು ಹಾಗೂ ಸಚಿವರಾದ ಸತೀಶ್ ಜಾರಕಿಹೊಳಿ ಸೇರಿ ಈ ಅಧಿವೇಶನದ ವೇಳೆ ಮುಖ್ಯಮಂತ್ರಿಗಳ ಜತೆ ಗುತ್ತಿಗೆದಾರರ ಸಭೆ ಆಯೋಜಿಸುತ್ತೇವೆ,” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ ನೀಡಿದರು.

ಬಾಕಿ ಬಿಲ್ ಬಿಡುಗಡೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳನ್ನು ಭೇಟಿ ಮಾಡಿ, ಅವರ ಅಹವಾಲುಗಳನ್ನು ಸ್ವೀಕರಿಸಿ, ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ನಿಮ್ಮ ನೋವು ನನಗೆ ಅರ್ಥವಾಗುತ್ತದೆ.. ಗುತ್ತಿಗೆದಾರರ ಸಮಸ್ಯೆಗಳಿಗೆ ನಮ್ಮ ಸರ್ಕಾರದಿಂದ ಆದಷ್ಟು ಬೇಗ ನ್ಯಾಯಯುತ ಪರಿಹಾರ ಒದಗಿಸಲಾಗುವುದು ಎಂದು ತಿಳಿಸಿದ್ದಾರೆ.

‘ಗುತ್ತಿಗೆದಾರರಿಗೆ ಹಣ ಪಾವತಿ ಮಾಡಬಾರದು ಎಂಬುದು ನಮ್ಮ ಉದ್ದೇಶವಲ್ಲ, ವಿಧಾನ ಪರಿಷತ್ತಿನಲ್ಲಿ ಶಿಕ್ಷಕರ ಕ್ಷೇತ್ರ, ಪದವೀಧರ ಕ್ಷೇತ್ರ, ಸಿನಿಮಾ, ಕಲೆ ಸೇರಿದಂತೆ ಇತರೆ ವಲಯದವರಿಗೆ ಒಂದು ಪ್ರಾತಿನಿಧ್ಯ ನೀಡಿದಂತೆ ಗುತ್ತಿಗೆದಾರರಿಗೆ ಒಂದು ಜಾಗ ಕೊಡಿಸಬೇಕಿದೆ. ಆಗ ನಿಮ್ಮ ಸಮಸ್ಯೆ ಬಗೆಹರಿಯಬಹುದು. ಇದಕ್ಕೆ ಒಂದು ದಾರಿ ಹುಡುಕಬೇಕಿದೆ,” ಎಂದರು.

 “ನನ್ನ ಇಲಾಖೆಯಲ್ಲಿ 13 ಸಾವಿರ ಕೋಟಿ,‌‌ ಬೋಸರಾಜು ಇಲಾಖೆಯಲ್ಲಿ 3 ಸಾವಿರ ಕೋಟಿ ರೂ. ಸೇರಿದಂತೆ ಸುಮಾರು 37 ಸಾವಿರ ಕೋಟಿ ಬಿಲ್ ಬಾಕಿ ಇದೆ. ನಿಮ್ಮ ನೋವು ನಮಗೆ ಗೊತ್ತಿದೆ. ನಾನು ಚುನಾವಣೆಗೆ ಆರು ತಿಂಗಳು ಮುಂಚಿತವಾಗಿ ಹೇಳಿದ್ದೆ. ಇಲಾಖೆಗಳಲ್ಲಿ ಹಣವಿಲ್ಲದೆ ಯಾವುದೇ ಗುತ್ತಿಗೆ ಕಾಮಗಾರಿ ತೆಗೆದುಕೊಳ್ಳಬೇಡಿ ಎಂದು ಎಚ್ಚರಿಸಿದ್ದೆ. ಯಡಿಯೂರಪ್ಪ ಹಾಗೂ ಬೊಮ್ಮಾಯಿ ಅವರು ಹಣ ಇರಲಿ, ಬಿಡಲಿ, ಕಾಮಗಾರಿ ಕೊಟ್ಟಿದ್ದೇ ಕೊಟ್ಟಿದ್ದು, ನೀವು ಕೆಲಸ ತೆಗೆದುಕೊಂಡು ನಮ್ಮ ಎದೆ ಮೇಲೆ ಕೂತಿದ್ದೀರಿ. ಇದರ ಪರಿಹಾರಕ್ಕಾಗಿ ಸುಮಾರು 50 ಸಾವಿರ ಕೋಟಿಯಷ್ಟು ಬಾಂಡ್ ಅಥವಾ ಇತರೆ ಮಾರ್ಗ ಹುಡುಕಬೇಕು,” ಎಂದರು.

“ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನರಿಗೆ ನೆರವು ನೀಡಲು ನಮ್ಮ ಸರಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದು, ಇದಕ್ಕಾಗಿ ಸುಮಾರು 52 ಸಾವಿರ ಕೋಟಿ ವಾರ್ಷಿಕವಾಗಿ ವೆಚ್ಚ ಮಾಡಲಾಗುತ್ತಿದೆ. ಆದರೂ, ನಮ್ಮ ರಾಜ್ಯದಲ್ಲಿ ಉತ್ತಮ ಬಜೆಟ್ ನೀಡುತ್ತಿದ್ದೇವೆ. ಇವತ್ತು ಕೂಡ ಮುಖ್ಯಮಂತ್ರಿಗಳು ಸರಿದೂಗಿಸಿ ಬಜೆಟ್ ಮಂಡಿಸಿದ್ದಾರೆ. ಬಿಜೆಪಿಯವರು ಖಾಲಿ ಚೊಂಬು ತೆಗೆದುಕೊಂಡಿದ್ದಾರೆ. ಕೇಂದ್ರ ಬಜೆಟ್‌ನಲ್ಲಿ ನಿರ್ಮಲಾ ಸೀತಾರಾಮನ್ ಅವರು ಏನು ಕೊಟ್ಟರು? ಖಾಲಿ ಬಿಂದಿಗೆ ಕೊಟ್ಟರು. ಆಗ ಇವರು ಏನೂ ಮಾತನಾಡಲಿಲ್ಲ, ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್‌ನಲ್ಲಿ 5300 ಕೋಟಿ ಘೋಷಣೆ ಮಾಡಿ ಈಗ ಕೊಟ್ಟಿದ್ದಾರಾ?,” ಎಂದು ಪ್ರಶ್ನಿಸಿದರು.

”ಬೆಂಗಳೂರು ಅಭಿವೃದ್ಧಿಗೆ ಅವರು ಹಣ ಕೊಟ್ಟಿಲ್ಲ, ಅವರು ಮಾಡಲಿ ಬಿಡಲಿ, ನಮ್ಮ ಕರ್ತವ್ಯ ನಾವು ಮಾಡಬೇಕು. ನೀವು ನಮ್ಮನ್ನು ಬಿಡಂಗಿಲ್ಲ. ನಾವು ನಿಮ್ಮನ್ನು ಬಿಡಂಗಿಲ್ಲ, ಮಾಧ್ಯಮಗಳ ಮುಂದೆ ಹೇಳಿಕೆ ನೀಡುವುದನ್ನು ಬಿಡಿ. ನೀವು ಹೇಳಿಕೆ ನೀಡಿದರೆ ಅದು ಒಂದು ದಿನದ ಸುದ್ದಿಯಾಗಬಹುದು, ಬೇರೆ ಯಾವುದೇ ಪ್ರಯೋಜನವಿಲ್ಲ, ನೀವು ನಮ್ಮ ಬಳಿ ಬಂದು ಚರ್ಚೆ ಮಾಡಿ, ಯಾವ ರೀತಿ ಹಣ ಹೊಂದಿಸಿ ಸಮಸ್ಯೆ ಬಗೆಹರಿಸಬೇಕು. ನೋಡೋಣ.” ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಚಿವರಾದ ಸತೀಶ್ ಜಾರಕಿಹೊಳಿ, ಎನ್‌.ಎಸ್. ಬೋಸರಾಜ್, ಸಂಫದ ಅಧ್ಯಕ್ಷರಾದ ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

1 hour ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

22 hours ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

1 day ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

2 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

2 days ago