ಬಾಕಿ ರೈತರ ರಾಗಿ ನೋಂದಣಿಗೆ ಅವಕಾಶ ನೀಡುವಂತೆ ಒತ್ತಾಯ: ರಾಗಿ ಖರೀದಿ ಕೇಂದ್ರದ ಮುಂದೆ ರೈತ ಸಂಘದಿಂದ ಪ್ರತಿಭಟನೆ

ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ಮಾಡುತ್ತಿರುವ ಸರ್ಕಾರ, ರೈತರಿಂದ ನೋಂದಣಿ ಪ್ರಕ್ರಿಯೆ ಮಾಡಿಸಿಕೊಂಡಿದೆ. ಆದರೆ, ತಾಲ್ಲೂಕಿನಲ್ಲಿ ಇನ್ನೂ ಒಂದೂವರೆ ಸಾವಿರ ರೈತರು ನೋಂದಣಿ ಮಾಡಿಸಿಕೊಳ್ಳಬೇಕಿದೆ. ಅಂತಹ ರೈತರಿಂದ ನೋಂದಣಿ ಮಾಡಿಸಿಕೊಳ್ಳದೆ ನೋಂದಣಿ ಪ್ರಕ್ರಿಯೆಯನ್ನ ಸ್ಥಗಿತಗೊಳಿಸಿರುವುದನ್ನ ಖಂಡಿಸಿ ರೈತ ಸಂಘದಿಂದ‌ ನಗರದ ಎಪಿಎಂಸಿ ಆವರಣದಲ್ಲಿರುವ ರಾಗಿ ಖರೀದಿ ಕೇಂದ್ರದ ಮುಂದೆ ಶುಕ್ರವಾರ ಪ್ರತಿಭಟನೆ ಮಾಡಲಾಯಿತು.

ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುತ್ತೇಗೌಡ ಮಾತನಾಡಿ, ಈ ಬಾರಿ ಮಳೆ ತಡವಾಗಿದ್ದರಿಂದ ರೈತರು ರಾಗಿ ಬೆಳೆಯಬೇಕೋ ಬೇಡವೋ ಎಂಬ ಜಿಜ್ಞಾಸೆಯಲ್ಲಿದ್ದರು. ಆದರೆ, ಅಕ್ಟೋಬರ್ ಅಂತ್ಯಕ್ಕೆ ಸುರಿದ ಉತ್ತಮ ಮಳೆಯಿಂದ ರಾಗಿ ಇಳುವರಿ ಚೆನ್ನಾಗಿ ಬಂದಿದೆ. ಆದರೆ, ತಡವಾಗಿ ಬೆಳೆ ಬಂದಿದೆ. ಇತ್ತ ಸರ್ಕಾರ ರೈತರಿಂದ ಖರೀದಿ ಮಾಡಲು ನೋಂದಣಿಗೆ ದಿನಾಂಕ ಘೋಷಣೆ ಮಾಡಿತ್ತು. ಈ ಅವಧಿಯಲ್ಲಿ ಬೆಳೆ ಸಂಪೂರ್ಣವಾಗದೆ ಹಲವು ರೈತರು ನೋಂದಣಿ ಮಾಡಿಸಿಕೊಂಡಿರಲಿಲ್ಲ. ಮಳೆಯ ಕೃಪೆಯಿಂದ ಉತ್ತಮವಾಗಿ ಬೆಳೆ ಬಂದಿದೆ. ಈಗ ರೈತರು ನೋಂದಣಿ ಮಾಡಲು ಅವಕಾಶ ಇಲ್ಲದಂತಾಗಿದೆ. ಹೀಗಾಗಿ ನೋಂದಣಿಯಾಗದ ರೈತರಿಗೆ ಮತ್ತೆ ಅವಕಾಶ ನೀಡಬೇಕೆಂದು ಒತ್ತಾಯಿಸಿದರು.

ಸ್ಥಳಕ್ಕೆ ಬಂದ ತಹಶೀಲ್ದಾರ್ ಮಲ್ಲಪ್ಪ ರೈತರ ಅಹವಾಲನ್ನು ಸ್ವೀಕರಿಸಿ ಸರ್ಕಾರದ ಈ ವರ್ಷದ ಖರೀದಿ ಪ್ರಮಾಣದ ಗುರಿಯನ್ನ ಈಗಾಗಲೇ ತಲುಪಲಾಗಿದೆ. ನೋಂದಣಿ ಪ್ರಕ್ರಿಯೆ ಮತ್ತೆ ಆರಂಭವಾಗಬೇಕಾದರೆ ಸರ್ಕಾರ ತೀರ್ಮಾನ ತೆಗೆದುಕೊಳ್ಳಬೇಕು. ಸದ್ಯಕ್ಕೆ ಯಾವ ರೈತರಿಂದ ಎಷ್ಟು ಪ್ರಮಾಣದಲ್ಲಿ ರಾಗಿ ಇದೆ ಎಂಬುದರ ಮಾಹಿತಿಯನ್ನು ನನಗೆ ನೀಡಿ ಬಳಿಕ ನಾನು ಜಿಲ್ಲಾಧಿಕಾರಿಗಳು ಮತ್ತು ಆಹಾರ ಸಚಿವರ ಗಮನಕ್ಕೆ ತಂದು ಸರ್ಕಾರಕ್ಕೆ ಇಲ್ಲಿನ ರೈತರ ಸಮಸ್ಯೆಯನ್ನು ವರದಿ ನೀಡುವ ಕೆಲಸ ಮಾಡುತ್ತೇನೆ ಎಂದರು.

ತಹಶೀಲ್ದಾರ್ ರವರ ಭರವಸೆಗೆ ಮನ್ನಣೆ ನೀಡಿದ ರೈತರು ಪ್ರತಿಭಟನೆಯನ್ನ ವಾಪಸ್ ಪಡೆದರು.

ಈ ವೇಳೆ ತಹಶೀಲ್ದಾರ್ ಮಲ್ಲಪ್ಪ, ಆಹಾರ ಇಲಾಖೆಯ ಉಪನಿರ್ದೇಶಕ ಪ್ರಕಾಶ್, ರೈತ ಸಂಘದ ಜಿಲ್ಲಾಧ್ಯಕ್ಷ ಪ್ರಸನ್ನ, ತಾಲ್ಲೂಕು ಪ್ರಧಾನಕಾರ್ಯದರ್ಶಿ ಸತೀಶ್ ಮತ್ತಿತ್ತರರು ಇದ್ದರು.

Ramesh Babu

Journalist

Recent Posts

ಕೆಪಿಟಿಸಿಎಲ್ ಥೀಮ್ ಪಾರ್ಕ್ ಕಾಮಗಾರಿ ಶೀಘ್ರದಲ್ಲೇ ಪೂರ್ಣ: ಇಂಧನ ಸಚಿವ ಕೆ.ಜೆ.ಜಾರ್ಜ್

ಬೆಂಗಳೂರು, ಫೆಬ್ರವರಿ 06, 2026*: ಕೆಪಿಟಿಸಿಎಲ್ ವತಿಯಿಂದ ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ನಿರ್ಮಾಣಗೊಳ್ಳುತ್ತಿರುವ ಥೀಮ್ ಪಾರ್ಕ್ ಕಾಮಗಾರಿಯನ್ನು ಏಪ್ರಿಲ್ ಒಳಗಾಗಿ…

9 hours ago

U19 World Cup: ಸ್ಟಾರ್ ಬ್ಯಾಟರ್ ವೈಭವ್ ಸೂರ್ಯವಂಶಿ 175 ರನ್: 6ನೇ ಬಾರಿಗೆ U19 World Cup ಗೆದ್ದು ಬೀಗಿದ ಭಾರತ

U19 World Cup: ಐಸಿಸಿ ಅಂಡರ್-19 ವಿಶ್ವಕಪ್ 2026ರ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಮಣಿಸುವ ಮೂಲಕ ಭಾರತ ದಾಖಲೆಯ…

9 hours ago

2013-18ರಲ್ಲಿ ಇದ್ದ ಸಿಎಂ ಸಿದ್ದರಾಮಯ್ಯನವರ ವರ್ಚಸ್ಸು ಕುಗ್ಗುತ್ತಿದೆ-ಶಾಸಕ ಧೀರಜ್ ಮುನಿರಾಜ್

ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ ಮೂರು ಬಜೆಟ್ ಮಂಡನೆಯಾಗಿವೆ. ರಾಜ್ಯಪಾಲರಿಂದ ಮೂರು ಭಾಷಣಗಳು ನಡೆದಿವೆ. ಮೂರು ಬಜೆಟ್ ನಲ್ಲಿ ಈ…

10 hours ago

ಸಿಎಂ ಕುರ್ಚಿ ಕದನ ವಿಚಾರ: ‘ನಾಕೊಡೆ ನಿ ಬಿಡೆ’ ಕಪ್ಪಕಾಣಿಕೆಗಾಗಿ ಹೈಕಮಾಂಡ್ ಆಟ- ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ

ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ಯತೀಂದ್ರ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ…

11 hours ago

ಕಾಂಗ್ರೆಸ್ ವೋಟ್ ಚೋರಿ ಮಾಡಿ ಸೋತಿದೆ. ಮೋದಿ ದಿಲ್ ಚೋರಿ ಮಾಡಿ ಗೆದ್ದಿದ್ದಾರೆ- ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1 ರಂದು ಕೇಂದ್ರ ಬಜೆಟ್ ಅನ್ನು ಮಂಡಿಸಿದರು. ಕೇಂದ್ರ ಸರ್ಕಾರವು…

14 hours ago

ತಾಲ್ಲೂಕಿನಲ್ಲಿ ಶುರುವಾಯ್ತು ಆಣೆ-ಪ್ರಮಾಣ ರಾಜಕೀಯ: ಶಾಸಕ ಧೀರಜ್ ವಿರುದ್ಧ ಏಕವಚನದಲ್ಲಿ ಮಾಜಿ ಶಾಸಕ ವೆಂಕಟರಮಣಯ್ಯ ವಾಗ್ದಾಳಿ

  ತಾಲ್ಲೂಕಿನ ರಾಜಕಾರಣದ ಇತಿಹಾಸದಲ್ಲಿ ಸಿದ್ದಲಿಂಗಯ್ಯ, ರಾಮೇಗೌಡ, ಆರ್.ಎಲ್ ಜಾಲಪ್ಪ, ನರಸಿಂಹಸ್ವಾಮಿ ಸೇರಿದಂತೆ ಘಟಾನುಘಟಿ ನಾಯಕರ ರಾಜಕಾರಣದಲ್ಲಿ ಈವರೆಗೆ ರಾಜಕೀಯದ…

22 hours ago