ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ಮಾಡುತ್ತಿರುವ ಸರ್ಕಾರ, ರೈತರಿಂದ ನೋಂದಣಿ ಪ್ರಕ್ರಿಯೆ ಮಾಡಿಸಿಕೊಂಡಿದೆ. ಆದರೆ, ತಾಲ್ಲೂಕಿನಲ್ಲಿ ಇನ್ನೂ ಒಂದೂವರೆ ಸಾವಿರ ರೈತರು ನೋಂದಣಿ ಮಾಡಿಸಿಕೊಳ್ಳಬೇಕಿದೆ. ಅಂತಹ ರೈತರಿಂದ ನೋಂದಣಿ ಮಾಡಿಸಿಕೊಳ್ಳದೆ ನೋಂದಣಿ ಪ್ರಕ್ರಿಯೆಯನ್ನ ಸ್ಥಗಿತಗೊಳಿಸಿರುವುದನ್ನ ಖಂಡಿಸಿ ರೈತ ಸಂಘದಿಂದ ನಗರದ ಎಪಿಎಂಸಿ ಆವರಣದಲ್ಲಿರುವ ರಾಗಿ ಖರೀದಿ ಕೇಂದ್ರದ ಮುಂದೆ ಶುಕ್ರವಾರ ಪ್ರತಿಭಟನೆ ಮಾಡಲಾಯಿತು.
ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುತ್ತೇಗೌಡ ಮಾತನಾಡಿ, ಈ ಬಾರಿ ಮಳೆ ತಡವಾಗಿದ್ದರಿಂದ ರೈತರು ರಾಗಿ ಬೆಳೆಯಬೇಕೋ ಬೇಡವೋ ಎಂಬ ಜಿಜ್ಞಾಸೆಯಲ್ಲಿದ್ದರು. ಆದರೆ, ಅಕ್ಟೋಬರ್ ಅಂತ್ಯಕ್ಕೆ ಸುರಿದ ಉತ್ತಮ ಮಳೆಯಿಂದ ರಾಗಿ ಇಳುವರಿ ಚೆನ್ನಾಗಿ ಬಂದಿದೆ. ಆದರೆ, ತಡವಾಗಿ ಬೆಳೆ ಬಂದಿದೆ. ಇತ್ತ ಸರ್ಕಾರ ರೈತರಿಂದ ಖರೀದಿ ಮಾಡಲು ನೋಂದಣಿಗೆ ದಿನಾಂಕ ಘೋಷಣೆ ಮಾಡಿತ್ತು. ಈ ಅವಧಿಯಲ್ಲಿ ಬೆಳೆ ಸಂಪೂರ್ಣವಾಗದೆ ಹಲವು ರೈತರು ನೋಂದಣಿ ಮಾಡಿಸಿಕೊಂಡಿರಲಿಲ್ಲ. ಮಳೆಯ ಕೃಪೆಯಿಂದ ಉತ್ತಮವಾಗಿ ಬೆಳೆ ಬಂದಿದೆ. ಈಗ ರೈತರು ನೋಂದಣಿ ಮಾಡಲು ಅವಕಾಶ ಇಲ್ಲದಂತಾಗಿದೆ. ಹೀಗಾಗಿ ನೋಂದಣಿಯಾಗದ ರೈತರಿಗೆ ಮತ್ತೆ ಅವಕಾಶ ನೀಡಬೇಕೆಂದು ಒತ್ತಾಯಿಸಿದರು.
ಸ್ಥಳಕ್ಕೆ ಬಂದ ತಹಶೀಲ್ದಾರ್ ಮಲ್ಲಪ್ಪ ರೈತರ ಅಹವಾಲನ್ನು ಸ್ವೀಕರಿಸಿ ಸರ್ಕಾರದ ಈ ವರ್ಷದ ಖರೀದಿ ಪ್ರಮಾಣದ ಗುರಿಯನ್ನ ಈಗಾಗಲೇ ತಲುಪಲಾಗಿದೆ. ನೋಂದಣಿ ಪ್ರಕ್ರಿಯೆ ಮತ್ತೆ ಆರಂಭವಾಗಬೇಕಾದರೆ ಸರ್ಕಾರ ತೀರ್ಮಾನ ತೆಗೆದುಕೊಳ್ಳಬೇಕು. ಸದ್ಯಕ್ಕೆ ಯಾವ ರೈತರಿಂದ ಎಷ್ಟು ಪ್ರಮಾಣದಲ್ಲಿ ರಾಗಿ ಇದೆ ಎಂಬುದರ ಮಾಹಿತಿಯನ್ನು ನನಗೆ ನೀಡಿ ಬಳಿಕ ನಾನು ಜಿಲ್ಲಾಧಿಕಾರಿಗಳು ಮತ್ತು ಆಹಾರ ಸಚಿವರ ಗಮನಕ್ಕೆ ತಂದು ಸರ್ಕಾರಕ್ಕೆ ಇಲ್ಲಿನ ರೈತರ ಸಮಸ್ಯೆಯನ್ನು ವರದಿ ನೀಡುವ ಕೆಲಸ ಮಾಡುತ್ತೇನೆ ಎಂದರು.
ತಹಶೀಲ್ದಾರ್ ರವರ ಭರವಸೆಗೆ ಮನ್ನಣೆ ನೀಡಿದ ರೈತರು ಪ್ರತಿಭಟನೆಯನ್ನ ವಾಪಸ್ ಪಡೆದರು.
ಈ ವೇಳೆ ತಹಶೀಲ್ದಾರ್ ಮಲ್ಲಪ್ಪ, ಆಹಾರ ಇಲಾಖೆಯ ಉಪನಿರ್ದೇಶಕ ಪ್ರಕಾಶ್, ರೈತ ಸಂಘದ ಜಿಲ್ಲಾಧ್ಯಕ್ಷ ಪ್ರಸನ್ನ, ತಾಲ್ಲೂಕು ಪ್ರಧಾನಕಾರ್ಯದರ್ಶಿ ಸತೀಶ್ ಮತ್ತಿತ್ತರರು ಇದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…