ಬಾಗಲಕೋಟೆಯಲ್ಲಿ ಕಲ್ಲುತೂರಾಟ ಪ್ರಕರಣ: ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

ಬಾಗಲಕೋಟೆಯಲ್ಲಿ ನಡೆದ ಕಲ್ಲುತೂರಾಟ ಘಟನೆಯು ಸಮಾಜದ ಶಾಂತಿ, ಸೌಹಾರ್ದತೆಗೆ ಮಾರಕ. ಇದನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ. ಘಟನೆಯ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳ ಬಳಿ ಚರ್ಚಿಸಿದ್ದು, ನಿಷ್ಪಕ್ಷಪಾತ ತನಿಖೆ ನಡೆಸಿ, ದುಷ್ಕೃತ್ಯ ಎಸಗಿದ ಪುಂಡರಿಗೆ ಕಾನೂನಿನ ಮೂಲಕ ತಕ್ಕ ಉತ್ತರ ನೀಡುವಂತೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಈಗಾಗಲೇ ಪ್ರಕರಣದ ಸಂಬಂಧ ಕೆಲವು ಆರೋಪಿಗಳನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಲಾಗುತ್ತಿದ್ದು, ಘಟನೆಗೆ ಕಾರಣರಾದ ಪ್ರತಿಯೊಬ್ಬರಿಗೂ ಶಿಕ್ಷೆ ನಿಶ್ಚಿತ ಎಂದು ಹೇಳಿದ್ದಾರೆ.

ನಾಡಿನ ಜನರಿಗೆ ಭಯಮುಕ್ತ ನೆಮ್ಮದಿಯ ಬದುಕು ನೀಡುವುದು ನಮ್ಮ‌ ಮೊದಲ ಆದ್ಯತೆ. ಜನರ ಶಾಂತಿ – ನೆಮ್ಮದಿಗೆ ಭಂಗ ತರುವ ಯಾವುದೇ ವ್ಯಕ್ತಿ – ಶಕ್ತಿಗಳನ್ನು ನಾವು ಸಹಿಸುವುದಿಲ್ಲ ಎಂದು ತಿಳಿಸಿದ್ದಾರೆ.

ಸಾರ್ವಜನಿಕರು ಯಾವುದೇ ಪ್ರಚೋದನೆಗಳಿಗೂ ಕಿವಿಗೊಡದೆ, ಸಂಯಮದಿಂದ ವರ್ತಿಸಿ. ಪೊಲೀಸ್ ಇಲಾಖೆ ತನ್ನ ಕರ್ತವ್ಯವನ್ನು ನಿಷ್ಪಕ್ಷಪಾತವಾಗಿ ಮಾಡಲಿದೆ ಎಂದಿದ್ದಾರೆ.

Ramesh Babu

Journalist

Recent Posts

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ: ಹೆಲ್ಮೆಟ್ ಧರಿಸದ ಕಾರಣ ಬೈಕ್ ಸವಾರ ದುರ್ಮರಣ

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಇಂದು ಬೆಳಗ್ಗೆ…

6 hours ago

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರ ಸಾವು ಪ್ರಕರಣ: ಕತ್ತಲಲ್ಲಿ ಪ್ರಯಾಣಿಸುತ್ತಿದ್ದವರ ಬದುಕಲ್ಲಿ ಶಾಶ್ವತ ಕತ್ತಲು ಮೂಡಿಸಿದ ಜವರಾಯ: ಎಚ್ಚೆತ್ತ ನಗರಸಭೆ ಬೀದಿ ದೀಪ ಅಳವಡಿಕೆ

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದರು. ರಸ್ತೆ ಇಕ್ಕೆಲಗಳಲ್ಲಿ ಬೀದಿ ದೀಪಗಳು ಬೆಳಗದ…

8 hours ago

ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ…….

ದೇಶಭಕ್ತಿ ಮತ್ತು ದೇಶದ್ರೋಹ...... ಇದು ಬ್ರಿಟಿಷರ ಕಾಲದ್ದೇ ಅಥವಾ ಈ ಕಾಲಕ್ಕೂ ಅನ್ವಯಿಸುತ್ತದೆಯೇ..... ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ....... ರಾಷ್ಟ್ರ…

12 hours ago

ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು

ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…

1 day ago

ಕೆಯುಡಬ್ಲ್ಯೂಜೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…

1 day ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆ ವಿದ್ಯಾರ್ಥಿನಿಗೆ 625ಕ್ಕೆ 622 ಅಂಕ: ನಮ್ಮ ತಪಸ್ಸಿಗೆ ಸಿಕ್ಕ ಯಶಸ್ಸು- ಶಾಲಾ ಸಂಸ್ಥಾಪಕ ಶ್ರೀನಿವಾಸ್ ಮೂರ್ತಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…

2 days ago