ಬಾಗಲಕೋಟೆಯಲ್ಲಿ ಕಲ್ಲುತೂರಾಟ ಪ್ರಕರಣ: ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

ಬಾಗಲಕೋಟೆಯಲ್ಲಿ ನಡೆದ ಕಲ್ಲುತೂರಾಟ ಘಟನೆಯು ಸಮಾಜದ ಶಾಂತಿ, ಸೌಹಾರ್ದತೆಗೆ ಮಾರಕ. ಇದನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ. ಘಟನೆಯ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳ ಬಳಿ ಚರ್ಚಿಸಿದ್ದು, ನಿಷ್ಪಕ್ಷಪಾತ ತನಿಖೆ ನಡೆಸಿ, ದುಷ್ಕೃತ್ಯ ಎಸಗಿದ ಪುಂಡರಿಗೆ ಕಾನೂನಿನ ಮೂಲಕ ತಕ್ಕ ಉತ್ತರ ನೀಡುವಂತೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಈಗಾಗಲೇ ಪ್ರಕರಣದ ಸಂಬಂಧ ಕೆಲವು ಆರೋಪಿಗಳನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಲಾಗುತ್ತಿದ್ದು, ಘಟನೆಗೆ ಕಾರಣರಾದ ಪ್ರತಿಯೊಬ್ಬರಿಗೂ ಶಿಕ್ಷೆ ನಿಶ್ಚಿತ ಎಂದು ಹೇಳಿದ್ದಾರೆ.

ನಾಡಿನ ಜನರಿಗೆ ಭಯಮುಕ್ತ ನೆಮ್ಮದಿಯ ಬದುಕು ನೀಡುವುದು ನಮ್ಮ‌ ಮೊದಲ ಆದ್ಯತೆ. ಜನರ ಶಾಂತಿ – ನೆಮ್ಮದಿಗೆ ಭಂಗ ತರುವ ಯಾವುದೇ ವ್ಯಕ್ತಿ – ಶಕ್ತಿಗಳನ್ನು ನಾವು ಸಹಿಸುವುದಿಲ್ಲ ಎಂದು ತಿಳಿಸಿದ್ದಾರೆ.

ಸಾರ್ವಜನಿಕರು ಯಾವುದೇ ಪ್ರಚೋದನೆಗಳಿಗೂ ಕಿವಿಗೊಡದೆ, ಸಂಯಮದಿಂದ ವರ್ತಿಸಿ. ಪೊಲೀಸ್ ಇಲಾಖೆ ತನ್ನ ಕರ್ತವ್ಯವನ್ನು ನಿಷ್ಪಕ್ಷಪಾತವಾಗಿ ಮಾಡಲಿದೆ ಎಂದಿದ್ದಾರೆ.

Ramesh Babu

Journalist

Recent Posts

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

4 hours ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

10 hours ago

80ರ ಹೊಸ್ತಿಲಲ್ಲಿ ಭಾರತ…..

ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…

16 hours ago

ಆಹಾರ ಭದ್ರತೆಯಲ್ಲಿ ಯಾವುದೇ ಲೋಪವಾಗದಿರಲಿ- ಆಹಾರ ಆಯೋಗ ಅಧ್ಯಕ್ಷ ಡಾ.ಹೆಚ್ ಕೃಷ್ಣ

ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…

17 hours ago

ನಾಳೆ(ಆ.14) ತೂಬಗೆರೆ ಸೊಸೈಟಿಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…

1 day ago

“ನನಗೆ ನೀರು ಬೇಕು, ಮಾತಾಡಲ್ಲ” — ಬಾಯಿಗೆ ಪ್ಲಾಸ್ಟರ್ ಹಾಕಿದ ವಾಟಾಳ್ ನಾಗರಾಜ್

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…

2 days ago