ಬಾಡ೯ರ್ – ಗವಾಸ್ಕರ್ ಟ್ರೋಫಿ; ಮೂರನೇ ಪಂದ್ಯದಲ್ಲಿ ಮುಗ್ಗರಿಸಿದ ಭಾರತ

ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ ನಡೆಯುತ್ತಿರುವ ಬಾಡ೯ರ್ – ಗವಾಸ್ಕರ್ ಟ್ರೋಫಿಯ ಮೊದಲೆರಡು ಪಂದ್ಯಗಳಲ್ಲಿ ಜಯಗಳಿಸಿ ಆತ್ಮವಿಶ್ವಾಸದಲ್ಲಿದ್ದ ಭಾರತ ತಂಡಕ್ಕೆ ಪ್ರವಾಸಿ ಆಸ್ಟ್ರೇಲಿಯ ಮೂರನೇ ಪಂದ್ಯದಲ್ಲಿ ತಿರುಗೇಟು ನೀಡುವ ಮೂಲಕ ಒಂಬತ್ತು ವಿಕೆಟ್‌ಗಳ ಗೆಲುವು ಸಾಧಿಸಿದೆ, ಆ ಮೂಲಕ ಸರಣಿಯನ್ನು 2-1 ಅಂತರದಲ್ಲಿ ಜೀವಂತವಾಗಿರಿಸಿಕೊಂಡಿದೆ.

ಮೊದಲೆರಡು ಪಂದ್ಯಗಳಲ್ಲಿ ಟಾಸ್ ಸೋತಿದ್ದ ನಾಯಕ ರೋಹಿತ್ ಶರ್ಮಾ ಮದ್ಯಪ್ರದೇಶದ ಇಂದೋರ್ ನಲ್ಲಿ ನಡೆದ ಮೂರನೇ ಪಂದ್ಯದಲ್ಲಿ ಟಾಸ್ ಗೆದ್ದರೂ ಸಹ ಮ್ಯಾಚ್ ಗೆಲ್ಲುವಲ್ಲಿ ವಿಫಲರಾದರು.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಭಾರತ ತಂಡ ಮೊದಲ ಇನಿಂಗ್ಸ್ ನಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಕೇವಲ 109 ರನ್ ಗಳಿಸಿತು, ಆರಂಭಿಕ ಆಟಗಾರರು ಸೇರಿದಂತೆ ಯಾವೊಬ್ಬ ಆಟಗಾರರು ನಿಂತು ಆಟವಾಡದೇ ಆಸೀಸ್ ಬೌಲರ್‌ಗಳಿಗೆ ವಿಕೆಟ್ ಒಪ್ಪಿಸಿದರು.

ಭಾರತದ ಪರವಾಗಿ ವಿರಾಟ್ ಕೊಹ್ಲಿ ಅವರ 22 ರನ್ ಬ್ಯಾಟ್ಸ್‌ಮನ್ ಒಬ್ಬರ ಗರಿಷ್ಠ ಮೊತ್ತವಾಗಿತ್ತು, ಆಸ್ಟ್ರೇಲಿಯಾ ಸ್ಪಿನ್ನರ್ ಕುಹೆಮನ್ 5 ವಿಕೆಟ್ ಹಾಗೂ ನಾಥನ್ ಲಯಾನ್ 3 ವಿಕೆಟ್ ಪಡೆದರು, ಮೊದಲ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯ ತಂಡ ಆರಂಭಿಕ ಬ್ಯಾಟ್ಸ್‌ಮನ್ ಉಸ್ಮಾನ್ ಕ್ವಾಜಾ (60), ಬ್ಯಾಟ್ಸ್‌ಮನ್ ಲಬುಷನ್ಗೆ (31), ನಾಯಕ ಸ್ಟೀವನ್ ಸ್ಮಿತ್ (26) ಅವರ ಸಂಘಟಿತ ಹೋರಾಟದ ಫಲವಾಗಿ 197 ರನ್ ಪೇರಿಸುವ ಮೂಲಕ 87 ರನ್ ಗಳ ಮುನ್ನಡೆ ಸಾಧಿಸಿದರು.

ಭಾರತದ ಪರವಾಗಿ ಆಲ್ ರೌಂಡರ್ ರವೀಂದ್ರ ಜಡೇಜಾ 4 ವಿಕೆಟ್, ಆಪ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ 3 ವಿಕೆಟ್ ಹಾಗೂ ಉಮೇಶ್ ಯಾದವ್ 3 ವಿಕೆಟ್ ಕಬಳಿಸಿದರು, ಎರಡನೇ ಇನಿಂಗ್ಸ್ ಆರಂಭಿಸಿದ ಭಾರತ ಆತ್ಮವಿಶ್ವಾಸದಿಂದ ಹೆಜ್ಜೆ ಹಾಕಿದರೂ ಪ್ರಯೋಜನವಾಗಲಿಲ್ಲ.

ಅನುಭವಿ ಆಟಗಾರ ಚತೇಶ್ವರ ಪೂಜಾರ (61), ಮದ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಶ್ರೇಯಸ್ ಅಯ್ಯರ್ (26) ಸ್ವಲ್ಪ ಪ್ರತಿರೋಧ ತೋರಿದರೂ ಸಹ ಪ್ರವಾಸಿ ಬೌಲಿಂಗ್ ವಿಭಾಗದ ಉತ್ತಮ ಪ್ರದರ್ಶನದ ಎದುರು ಭಾರತೀಯ ಬ್ಯಾಟಿಂಗ್ ಪಡೆ ಉತ್ತರ ನೀಡುವಲ್ಲಿ ವಿಫಲರಾದರು.

ಎರಡನೇ ಇನ್ನಿಂಗ್ಸ್ ನಲ್ಲಿ ಸ್ಪಿನ್ನರ್ ನಾಥನ್ ಲಯಾನ್ 8 ವಿಕೆಟ್ ಪಡೆದು ಮಿಂಚಿದರು, 75 ರನ್‌ಗಳ ಗುರಿ ಬೆನ್ನಟ್ಟಿದ ಪ್ರವಾಸಿ ಆಸ್ಟ್ರೇಲಿಯ ತಂಡ ಒಂದು ವಿಕೆಟ್ ಕಳೆದುಕೊಂಡು ಗುರಿ ಮುಟ್ಟಿತು, ಸ್ಪಿನ್ನರ್ ನಾಥನ್ ಲಯಾನ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು, ಆ ಮೂಲಕ ಪ್ರವಾಸಿ ತಂಡ ಸರಣಿಯಲ್ಲಿ ಮೊದಲ ಗೆಲುವಿನ ನಗೆ ಬೀರಿತು.

Ramesh Babu

Journalist

Recent Posts

ಅಪಘಾತದಲ್ಲಿ ಪ್ರಜ್ಞೆ ತಪ್ಪಿಬಿದ್ದ ವ್ಯಕ್ತಿ: ಆಸ್ಪತ್ರೆಗೆ ದಾಖಲಿಸುವುದಾಗಿ ನಂಬಿಸಿ ಫೋನ್ ಪೇ ಮೂಲಕ 80 ಸಾವಿರ ವಸೂಲಿ: ಆಸ್ಪತ್ರೆಗೆ ದಾಖಲಿಸದೇ ಪರಾರಿಯಾಗಿದ್ದ ಐನಾತಿಗಳ ಬಂಧನ

ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…

6 hours ago

ಚಿನ್ನಾಭರಣ ಮಳಿಗೆಯಲ್ಲಿ ದರೋಡೆ….3 ಕೋಟಿ ಮೌಲ್ಯದ 140 ಕೆಜಿ ಬೆಳ್ಳಿ ಅಭರಣಗಳ ಕಳವು

ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…

10 hours ago

ಕಾಲೇಜಿನಿಂದ ಸಹೋದರನನ್ನು ಮನೆಗೆ ಕರೆದುಕೊಂಡು ಬರುವಾಗ ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ನಲ್ಲಿದ್ದ ಅಣ್ಣ ಸಾವು, ತಮ್ಮನಿಗೆ ಗಾಯ

ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…

12 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ರೌಂಡ್ಸ್​

ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…

14 hours ago

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

1 day ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

1 day ago