ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ ನಡೆಯುತ್ತಿರುವ ಬಾಡ೯ರ್ – ಗವಾಸ್ಕರ್ ಟ್ರೋಫಿಯ ಮೊದಲೆರಡು ಪಂದ್ಯಗಳಲ್ಲಿ ಜಯಗಳಿಸಿ ಆತ್ಮವಿಶ್ವಾಸದಲ್ಲಿದ್ದ ಭಾರತ ತಂಡಕ್ಕೆ ಪ್ರವಾಸಿ ಆಸ್ಟ್ರೇಲಿಯ ಮೂರನೇ ಪಂದ್ಯದಲ್ಲಿ ತಿರುಗೇಟು ನೀಡುವ ಮೂಲಕ ಒಂಬತ್ತು ವಿಕೆಟ್ಗಳ ಗೆಲುವು ಸಾಧಿಸಿದೆ, ಆ ಮೂಲಕ ಸರಣಿಯನ್ನು 2-1 ಅಂತರದಲ್ಲಿ ಜೀವಂತವಾಗಿರಿಸಿಕೊಂಡಿದೆ.
ಮೊದಲೆರಡು ಪಂದ್ಯಗಳಲ್ಲಿ ಟಾಸ್ ಸೋತಿದ್ದ ನಾಯಕ ರೋಹಿತ್ ಶರ್ಮಾ ಮದ್ಯಪ್ರದೇಶದ ಇಂದೋರ್ ನಲ್ಲಿ ನಡೆದ ಮೂರನೇ ಪಂದ್ಯದಲ್ಲಿ ಟಾಸ್ ಗೆದ್ದರೂ ಸಹ ಮ್ಯಾಚ್ ಗೆಲ್ಲುವಲ್ಲಿ ವಿಫಲರಾದರು.
ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಭಾರತ ತಂಡ ಮೊದಲ ಇನಿಂಗ್ಸ್ ನಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಕೇವಲ 109 ರನ್ ಗಳಿಸಿತು, ಆರಂಭಿಕ ಆಟಗಾರರು ಸೇರಿದಂತೆ ಯಾವೊಬ್ಬ ಆಟಗಾರರು ನಿಂತು ಆಟವಾಡದೇ ಆಸೀಸ್ ಬೌಲರ್ಗಳಿಗೆ ವಿಕೆಟ್ ಒಪ್ಪಿಸಿದರು.
ಭಾರತದ ಪರವಾಗಿ ಆಲ್ ರೌಂಡರ್ ರವೀಂದ್ರ ಜಡೇಜಾ 4 ವಿಕೆಟ್, ಆಪ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ 3 ವಿಕೆಟ್ ಹಾಗೂ ಉಮೇಶ್ ಯಾದವ್ 3 ವಿಕೆಟ್ ಕಬಳಿಸಿದರು, ಎರಡನೇ ಇನಿಂಗ್ಸ್ ಆರಂಭಿಸಿದ ಭಾರತ ಆತ್ಮವಿಶ್ವಾಸದಿಂದ ಹೆಜ್ಜೆ ಹಾಕಿದರೂ ಪ್ರಯೋಜನವಾಗಲಿಲ್ಲ.
ಎರಡನೇ ಇನ್ನಿಂಗ್ಸ್ ನಲ್ಲಿ ಸ್ಪಿನ್ನರ್ ನಾಥನ್ ಲಯಾನ್ 8 ವಿಕೆಟ್ ಪಡೆದು ಮಿಂಚಿದರು, 75 ರನ್ಗಳ ಗುರಿ ಬೆನ್ನಟ್ಟಿದ ಪ್ರವಾಸಿ ಆಸ್ಟ್ರೇಲಿಯ ತಂಡ ಒಂದು ವಿಕೆಟ್ ಕಳೆದುಕೊಂಡು ಗುರಿ ಮುಟ್ಟಿತು, ಸ್ಪಿನ್ನರ್ ನಾಥನ್ ಲಯಾನ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು, ಆ ಮೂಲಕ ಪ್ರವಾಸಿ ತಂಡ ಸರಣಿಯಲ್ಲಿ ಮೊದಲ ಗೆಲುವಿನ ನಗೆ ಬೀರಿತು.
ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…
ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…
ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…
ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಅದ್ಭುತವಾದ…
ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಎಲ್ಲಾ ಬಜೆಟ್ ಗಳ ಪೈಕಿ 2026-27ರ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಈ ಬಜೆಟ್ ನಲ್ಲಿ ಹೊಸ…
ಬಳ್ಳಾರಿ ನಗರದ "ಗುರುಕುಲ ವಸತಿ ಶಾಲೆ"ಯಲ್ಲಿ ಶನಿವಾರ ರಾತ್ರಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್, ಚಾಕುವಿನಿಂದ…