ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ ನಡೆಯುತ್ತಿರುವ ಬಾಡ೯ರ್ – ಗವಾಸ್ಕರ್ ಟ್ರೋಫಿಯ ಮೊದಲೆರಡು ಪಂದ್ಯಗಳಲ್ಲಿ ಜಯಗಳಿಸಿ ಆತ್ಮವಿಶ್ವಾಸದಲ್ಲಿದ್ದ ಭಾರತ ತಂಡಕ್ಕೆ ಪ್ರವಾಸಿ ಆಸ್ಟ್ರೇಲಿಯ ಮೂರನೇ ಪಂದ್ಯದಲ್ಲಿ ತಿರುಗೇಟು ನೀಡುವ ಮೂಲಕ ಒಂಬತ್ತು ವಿಕೆಟ್ಗಳ ಗೆಲುವು ಸಾಧಿಸಿದೆ, ಆ ಮೂಲಕ ಸರಣಿಯನ್ನು 2-1 ಅಂತರದಲ್ಲಿ ಜೀವಂತವಾಗಿರಿಸಿಕೊಂಡಿದೆ.
ಮೊದಲೆರಡು ಪಂದ್ಯಗಳಲ್ಲಿ ಟಾಸ್ ಸೋತಿದ್ದ ನಾಯಕ ರೋಹಿತ್ ಶರ್ಮಾ ಮದ್ಯಪ್ರದೇಶದ ಇಂದೋರ್ ನಲ್ಲಿ ನಡೆದ ಮೂರನೇ ಪಂದ್ಯದಲ್ಲಿ ಟಾಸ್ ಗೆದ್ದರೂ ಸಹ ಮ್ಯಾಚ್ ಗೆಲ್ಲುವಲ್ಲಿ ವಿಫಲರಾದರು.
ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಭಾರತ ತಂಡ ಮೊದಲ ಇನಿಂಗ್ಸ್ ನಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಕೇವಲ 109 ರನ್ ಗಳಿಸಿತು, ಆರಂಭಿಕ ಆಟಗಾರರು ಸೇರಿದಂತೆ ಯಾವೊಬ್ಬ ಆಟಗಾರರು ನಿಂತು ಆಟವಾಡದೇ ಆಸೀಸ್ ಬೌಲರ್ಗಳಿಗೆ ವಿಕೆಟ್ ಒಪ್ಪಿಸಿದರು.
ಭಾರತದ ಪರವಾಗಿ ಆಲ್ ರೌಂಡರ್ ರವೀಂದ್ರ ಜಡೇಜಾ 4 ವಿಕೆಟ್, ಆಪ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ 3 ವಿಕೆಟ್ ಹಾಗೂ ಉಮೇಶ್ ಯಾದವ್ 3 ವಿಕೆಟ್ ಕಬಳಿಸಿದರು, ಎರಡನೇ ಇನಿಂಗ್ಸ್ ಆರಂಭಿಸಿದ ಭಾರತ ಆತ್ಮವಿಶ್ವಾಸದಿಂದ ಹೆಜ್ಜೆ ಹಾಕಿದರೂ ಪ್ರಯೋಜನವಾಗಲಿಲ್ಲ.
ಎರಡನೇ ಇನ್ನಿಂಗ್ಸ್ ನಲ್ಲಿ ಸ್ಪಿನ್ನರ್ ನಾಥನ್ ಲಯಾನ್ 8 ವಿಕೆಟ್ ಪಡೆದು ಮಿಂಚಿದರು, 75 ರನ್ಗಳ ಗುರಿ ಬೆನ್ನಟ್ಟಿದ ಪ್ರವಾಸಿ ಆಸ್ಟ್ರೇಲಿಯ ತಂಡ ಒಂದು ವಿಕೆಟ್ ಕಳೆದುಕೊಂಡು ಗುರಿ ಮುಟ್ಟಿತು, ಸ್ಪಿನ್ನರ್ ನಾಥನ್ ಲಯಾನ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು, ಆ ಮೂಲಕ ಪ್ರವಾಸಿ ತಂಡ ಸರಣಿಯಲ್ಲಿ ಮೊದಲ ಗೆಲುವಿನ ನಗೆ ಬೀರಿತು.
ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…