ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ ನಡೆಯುತ್ತಿರುವ ಬಾಡ೯ರ್ – ಗವಾಸ್ಕರ್ ಟ್ರೋಫಿಯ ಮೊದಲೆರಡು ಪಂದ್ಯಗಳಲ್ಲಿ ಜಯಗಳಿಸಿ ಆತ್ಮವಿಶ್ವಾಸದಲ್ಲಿದ್ದ ಭಾರತ ತಂಡಕ್ಕೆ ಪ್ರವಾಸಿ ಆಸ್ಟ್ರೇಲಿಯ ಮೂರನೇ ಪಂದ್ಯದಲ್ಲಿ ತಿರುಗೇಟು ನೀಡುವ ಮೂಲಕ ಒಂಬತ್ತು ವಿಕೆಟ್ಗಳ ಗೆಲುವು ಸಾಧಿಸಿದೆ, ಆ ಮೂಲಕ ಸರಣಿಯನ್ನು 2-1 ಅಂತರದಲ್ಲಿ ಜೀವಂತವಾಗಿರಿಸಿಕೊಂಡಿದೆ.
ಮೊದಲೆರಡು ಪಂದ್ಯಗಳಲ್ಲಿ ಟಾಸ್ ಸೋತಿದ್ದ ನಾಯಕ ರೋಹಿತ್ ಶರ್ಮಾ ಮದ್ಯಪ್ರದೇಶದ ಇಂದೋರ್ ನಲ್ಲಿ ನಡೆದ ಮೂರನೇ ಪಂದ್ಯದಲ್ಲಿ ಟಾಸ್ ಗೆದ್ದರೂ ಸಹ ಮ್ಯಾಚ್ ಗೆಲ್ಲುವಲ್ಲಿ ವಿಫಲರಾದರು.
ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಭಾರತ ತಂಡ ಮೊದಲ ಇನಿಂಗ್ಸ್ ನಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಕೇವಲ 109 ರನ್ ಗಳಿಸಿತು, ಆರಂಭಿಕ ಆಟಗಾರರು ಸೇರಿದಂತೆ ಯಾವೊಬ್ಬ ಆಟಗಾರರು ನಿಂತು ಆಟವಾಡದೇ ಆಸೀಸ್ ಬೌಲರ್ಗಳಿಗೆ ವಿಕೆಟ್ ಒಪ್ಪಿಸಿದರು.
ಭಾರತದ ಪರವಾಗಿ ಆಲ್ ರೌಂಡರ್ ರವೀಂದ್ರ ಜಡೇಜಾ 4 ವಿಕೆಟ್, ಆಪ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ 3 ವಿಕೆಟ್ ಹಾಗೂ ಉಮೇಶ್ ಯಾದವ್ 3 ವಿಕೆಟ್ ಕಬಳಿಸಿದರು, ಎರಡನೇ ಇನಿಂಗ್ಸ್ ಆರಂಭಿಸಿದ ಭಾರತ ಆತ್ಮವಿಶ್ವಾಸದಿಂದ ಹೆಜ್ಜೆ ಹಾಕಿದರೂ ಪ್ರಯೋಜನವಾಗಲಿಲ್ಲ.
ಎರಡನೇ ಇನ್ನಿಂಗ್ಸ್ ನಲ್ಲಿ ಸ್ಪಿನ್ನರ್ ನಾಥನ್ ಲಯಾನ್ 8 ವಿಕೆಟ್ ಪಡೆದು ಮಿಂಚಿದರು, 75 ರನ್ಗಳ ಗುರಿ ಬೆನ್ನಟ್ಟಿದ ಪ್ರವಾಸಿ ಆಸ್ಟ್ರೇಲಿಯ ತಂಡ ಒಂದು ವಿಕೆಟ್ ಕಳೆದುಕೊಂಡು ಗುರಿ ಮುಟ್ಟಿತು, ಸ್ಪಿನ್ನರ್ ನಾಥನ್ ಲಯಾನ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು, ಆ ಮೂಲಕ ಪ್ರವಾಸಿ ತಂಡ ಸರಣಿಯಲ್ಲಿ ಮೊದಲ ಗೆಲುವಿನ ನಗೆ ಬೀರಿತು.
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…