ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ ನಡೆಯುತ್ತಿರುವ ಬಾಡ೯ರ್ – ಗವಾಸ್ಕರ್ ಟ್ರೋಫಿಯ ಮೊದಲೆರಡು ಪಂದ್ಯಗಳಲ್ಲಿ ಜಯಗಳಿಸಿ ಆತ್ಮವಿಶ್ವಾಸದಲ್ಲಿದ್ದ ಭಾರತ ತಂಡಕ್ಕೆ ಪ್ರವಾಸಿ ಆಸ್ಟ್ರೇಲಿಯ ಮೂರನೇ ಪಂದ್ಯದಲ್ಲಿ ತಿರುಗೇಟು ನೀಡುವ ಮೂಲಕ ಒಂಬತ್ತು ವಿಕೆಟ್ಗಳ ಗೆಲುವು ಸಾಧಿಸಿದೆ, ಆ ಮೂಲಕ ಸರಣಿಯನ್ನು 2-1 ಅಂತರದಲ್ಲಿ ಜೀವಂತವಾಗಿರಿಸಿಕೊಂಡಿದೆ.
ಮೊದಲೆರಡು ಪಂದ್ಯಗಳಲ್ಲಿ ಟಾಸ್ ಸೋತಿದ್ದ ನಾಯಕ ರೋಹಿತ್ ಶರ್ಮಾ ಮದ್ಯಪ್ರದೇಶದ ಇಂದೋರ್ ನಲ್ಲಿ ನಡೆದ ಮೂರನೇ ಪಂದ್ಯದಲ್ಲಿ ಟಾಸ್ ಗೆದ್ದರೂ ಸಹ ಮ್ಯಾಚ್ ಗೆಲ್ಲುವಲ್ಲಿ ವಿಫಲರಾದರು.
ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಭಾರತ ತಂಡ ಮೊದಲ ಇನಿಂಗ್ಸ್ ನಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಕೇವಲ 109 ರನ್ ಗಳಿಸಿತು, ಆರಂಭಿಕ ಆಟಗಾರರು ಸೇರಿದಂತೆ ಯಾವೊಬ್ಬ ಆಟಗಾರರು ನಿಂತು ಆಟವಾಡದೇ ಆಸೀಸ್ ಬೌಲರ್ಗಳಿಗೆ ವಿಕೆಟ್ ಒಪ್ಪಿಸಿದರು.
ಭಾರತದ ಪರವಾಗಿ ಆಲ್ ರೌಂಡರ್ ರವೀಂದ್ರ ಜಡೇಜಾ 4 ವಿಕೆಟ್, ಆಪ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ 3 ವಿಕೆಟ್ ಹಾಗೂ ಉಮೇಶ್ ಯಾದವ್ 3 ವಿಕೆಟ್ ಕಬಳಿಸಿದರು, ಎರಡನೇ ಇನಿಂಗ್ಸ್ ಆರಂಭಿಸಿದ ಭಾರತ ಆತ್ಮವಿಶ್ವಾಸದಿಂದ ಹೆಜ್ಜೆ ಹಾಕಿದರೂ ಪ್ರಯೋಜನವಾಗಲಿಲ್ಲ.
ಎರಡನೇ ಇನ್ನಿಂಗ್ಸ್ ನಲ್ಲಿ ಸ್ಪಿನ್ನರ್ ನಾಥನ್ ಲಯಾನ್ 8 ವಿಕೆಟ್ ಪಡೆದು ಮಿಂಚಿದರು, 75 ರನ್ಗಳ ಗುರಿ ಬೆನ್ನಟ್ಟಿದ ಪ್ರವಾಸಿ ಆಸ್ಟ್ರೇಲಿಯ ತಂಡ ಒಂದು ವಿಕೆಟ್ ಕಳೆದುಕೊಂಡು ಗುರಿ ಮುಟ್ಟಿತು, ಸ್ಪಿನ್ನರ್ ನಾಥನ್ ಲಯಾನ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು, ಆ ಮೂಲಕ ಪ್ರವಾಸಿ ತಂಡ ಸರಣಿಯಲ್ಲಿ ಮೊದಲ ಗೆಲುವಿನ ನಗೆ ಬೀರಿತು.
ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…
ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…
ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…