ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ ನಡೆಯುತ್ತಿರುವ ಬಾಡ೯ರ್ – ಗವಾಸ್ಕರ್ ಟ್ರೋಫಿಯ ಮೊದಲೆರಡು ಪಂದ್ಯಗಳಲ್ಲಿ ಜಯಗಳಿಸಿ ಆತ್ಮವಿಶ್ವಾಸದಲ್ಲಿದ್ದ ಭಾರತ ತಂಡಕ್ಕೆ ಪ್ರವಾಸಿ ಆಸ್ಟ್ರೇಲಿಯ ಮೂರನೇ ಪಂದ್ಯದಲ್ಲಿ ತಿರುಗೇಟು ನೀಡುವ ಮೂಲಕ ಒಂಬತ್ತು ವಿಕೆಟ್ಗಳ ಗೆಲುವು ಸಾಧಿಸಿದೆ, ಆ ಮೂಲಕ ಸರಣಿಯನ್ನು 2-1 ಅಂತರದಲ್ಲಿ ಜೀವಂತವಾಗಿರಿಸಿಕೊಂಡಿದೆ.
ಮೊದಲೆರಡು ಪಂದ್ಯಗಳಲ್ಲಿ ಟಾಸ್ ಸೋತಿದ್ದ ನಾಯಕ ರೋಹಿತ್ ಶರ್ಮಾ ಮದ್ಯಪ್ರದೇಶದ ಇಂದೋರ್ ನಲ್ಲಿ ನಡೆದ ಮೂರನೇ ಪಂದ್ಯದಲ್ಲಿ ಟಾಸ್ ಗೆದ್ದರೂ ಸಹ ಮ್ಯಾಚ್ ಗೆಲ್ಲುವಲ್ಲಿ ವಿಫಲರಾದರು.
ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಭಾರತ ತಂಡ ಮೊದಲ ಇನಿಂಗ್ಸ್ ನಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಕೇವಲ 109 ರನ್ ಗಳಿಸಿತು, ಆರಂಭಿಕ ಆಟಗಾರರು ಸೇರಿದಂತೆ ಯಾವೊಬ್ಬ ಆಟಗಾರರು ನಿಂತು ಆಟವಾಡದೇ ಆಸೀಸ್ ಬೌಲರ್ಗಳಿಗೆ ವಿಕೆಟ್ ಒಪ್ಪಿಸಿದರು.
ಭಾರತದ ಪರವಾಗಿ ಆಲ್ ರೌಂಡರ್ ರವೀಂದ್ರ ಜಡೇಜಾ 4 ವಿಕೆಟ್, ಆಪ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ 3 ವಿಕೆಟ್ ಹಾಗೂ ಉಮೇಶ್ ಯಾದವ್ 3 ವಿಕೆಟ್ ಕಬಳಿಸಿದರು, ಎರಡನೇ ಇನಿಂಗ್ಸ್ ಆರಂಭಿಸಿದ ಭಾರತ ಆತ್ಮವಿಶ್ವಾಸದಿಂದ ಹೆಜ್ಜೆ ಹಾಕಿದರೂ ಪ್ರಯೋಜನವಾಗಲಿಲ್ಲ.
ಎರಡನೇ ಇನ್ನಿಂಗ್ಸ್ ನಲ್ಲಿ ಸ್ಪಿನ್ನರ್ ನಾಥನ್ ಲಯಾನ್ 8 ವಿಕೆಟ್ ಪಡೆದು ಮಿಂಚಿದರು, 75 ರನ್ಗಳ ಗುರಿ ಬೆನ್ನಟ್ಟಿದ ಪ್ರವಾಸಿ ಆಸ್ಟ್ರೇಲಿಯ ತಂಡ ಒಂದು ವಿಕೆಟ್ ಕಳೆದುಕೊಂಡು ಗುರಿ ಮುಟ್ಟಿತು, ಸ್ಪಿನ್ನರ್ ನಾಥನ್ ಲಯಾನ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು, ಆ ಮೂಲಕ ಪ್ರವಾಸಿ ತಂಡ ಸರಣಿಯಲ್ಲಿ ಮೊದಲ ಗೆಲುವಿನ ನಗೆ ಬೀರಿತು.
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…