ಬಾಡ೯ರ್ – ಗವಾಸ್ಕರ್ ಟ್ರೋಫಿ; ಮೂರನೇ ಪಂದ್ಯದಲ್ಲಿ ಮುಗ್ಗರಿಸಿದ ಭಾರತ

ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ ನಡೆಯುತ್ತಿರುವ ಬಾಡ೯ರ್ – ಗವಾಸ್ಕರ್ ಟ್ರೋಫಿಯ ಮೊದಲೆರಡು ಪಂದ್ಯಗಳಲ್ಲಿ ಜಯಗಳಿಸಿ ಆತ್ಮವಿಶ್ವಾಸದಲ್ಲಿದ್ದ ಭಾರತ ತಂಡಕ್ಕೆ ಪ್ರವಾಸಿ ಆಸ್ಟ್ರೇಲಿಯ ಮೂರನೇ ಪಂದ್ಯದಲ್ಲಿ ತಿರುಗೇಟು ನೀಡುವ ಮೂಲಕ ಒಂಬತ್ತು ವಿಕೆಟ್‌ಗಳ ಗೆಲುವು ಸಾಧಿಸಿದೆ, ಆ ಮೂಲಕ ಸರಣಿಯನ್ನು 2-1 ಅಂತರದಲ್ಲಿ ಜೀವಂತವಾಗಿರಿಸಿಕೊಂಡಿದೆ.

ಮೊದಲೆರಡು ಪಂದ್ಯಗಳಲ್ಲಿ ಟಾಸ್ ಸೋತಿದ್ದ ನಾಯಕ ರೋಹಿತ್ ಶರ್ಮಾ ಮದ್ಯಪ್ರದೇಶದ ಇಂದೋರ್ ನಲ್ಲಿ ನಡೆದ ಮೂರನೇ ಪಂದ್ಯದಲ್ಲಿ ಟಾಸ್ ಗೆದ್ದರೂ ಸಹ ಮ್ಯಾಚ್ ಗೆಲ್ಲುವಲ್ಲಿ ವಿಫಲರಾದರು.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಭಾರತ ತಂಡ ಮೊದಲ ಇನಿಂಗ್ಸ್ ನಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಕೇವಲ 109 ರನ್ ಗಳಿಸಿತು, ಆರಂಭಿಕ ಆಟಗಾರರು ಸೇರಿದಂತೆ ಯಾವೊಬ್ಬ ಆಟಗಾರರು ನಿಂತು ಆಟವಾಡದೇ ಆಸೀಸ್ ಬೌಲರ್‌ಗಳಿಗೆ ವಿಕೆಟ್ ಒಪ್ಪಿಸಿದರು.

ಭಾರತದ ಪರವಾಗಿ ವಿರಾಟ್ ಕೊಹ್ಲಿ ಅವರ 22 ರನ್ ಬ್ಯಾಟ್ಸ್‌ಮನ್ ಒಬ್ಬರ ಗರಿಷ್ಠ ಮೊತ್ತವಾಗಿತ್ತು, ಆಸ್ಟ್ರೇಲಿಯಾ ಸ್ಪಿನ್ನರ್ ಕುಹೆಮನ್ 5 ವಿಕೆಟ್ ಹಾಗೂ ನಾಥನ್ ಲಯಾನ್ 3 ವಿಕೆಟ್ ಪಡೆದರು, ಮೊದಲ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯ ತಂಡ ಆರಂಭಿಕ ಬ್ಯಾಟ್ಸ್‌ಮನ್ ಉಸ್ಮಾನ್ ಕ್ವಾಜಾ (60), ಬ್ಯಾಟ್ಸ್‌ಮನ್ ಲಬುಷನ್ಗೆ (31), ನಾಯಕ ಸ್ಟೀವನ್ ಸ್ಮಿತ್ (26) ಅವರ ಸಂಘಟಿತ ಹೋರಾಟದ ಫಲವಾಗಿ 197 ರನ್ ಪೇರಿಸುವ ಮೂಲಕ 87 ರನ್ ಗಳ ಮುನ್ನಡೆ ಸಾಧಿಸಿದರು.

ಭಾರತದ ಪರವಾಗಿ ಆಲ್ ರೌಂಡರ್ ರವೀಂದ್ರ ಜಡೇಜಾ 4 ವಿಕೆಟ್, ಆಪ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ 3 ವಿಕೆಟ್ ಹಾಗೂ ಉಮೇಶ್ ಯಾದವ್ 3 ವಿಕೆಟ್ ಕಬಳಿಸಿದರು, ಎರಡನೇ ಇನಿಂಗ್ಸ್ ಆರಂಭಿಸಿದ ಭಾರತ ಆತ್ಮವಿಶ್ವಾಸದಿಂದ ಹೆಜ್ಜೆ ಹಾಕಿದರೂ ಪ್ರಯೋಜನವಾಗಲಿಲ್ಲ.

ಅನುಭವಿ ಆಟಗಾರ ಚತೇಶ್ವರ ಪೂಜಾರ (61), ಮದ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಶ್ರೇಯಸ್ ಅಯ್ಯರ್ (26) ಸ್ವಲ್ಪ ಪ್ರತಿರೋಧ ತೋರಿದರೂ ಸಹ ಪ್ರವಾಸಿ ಬೌಲಿಂಗ್ ವಿಭಾಗದ ಉತ್ತಮ ಪ್ರದರ್ಶನದ ಎದುರು ಭಾರತೀಯ ಬ್ಯಾಟಿಂಗ್ ಪಡೆ ಉತ್ತರ ನೀಡುವಲ್ಲಿ ವಿಫಲರಾದರು.

ಎರಡನೇ ಇನ್ನಿಂಗ್ಸ್ ನಲ್ಲಿ ಸ್ಪಿನ್ನರ್ ನಾಥನ್ ಲಯಾನ್ 8 ವಿಕೆಟ್ ಪಡೆದು ಮಿಂಚಿದರು, 75 ರನ್‌ಗಳ ಗುರಿ ಬೆನ್ನಟ್ಟಿದ ಪ್ರವಾಸಿ ಆಸ್ಟ್ರೇಲಿಯ ತಂಡ ಒಂದು ವಿಕೆಟ್ ಕಳೆದುಕೊಂಡು ಗುರಿ ಮುಟ್ಟಿತು, ಸ್ಪಿನ್ನರ್ ನಾಥನ್ ಲಯಾನ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು, ಆ ಮೂಲಕ ಪ್ರವಾಸಿ ತಂಡ ಸರಣಿಯಲ್ಲಿ ಮೊದಲ ಗೆಲುವಿನ ನಗೆ ಬೀರಿತು.

Ramesh Babu

Journalist

Recent Posts

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

6 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

20 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

21 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

22 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

22 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

1 day ago