ಬಾಡ೯ರ್ – ಗವಾಸ್ಕರ್ ಟ್ರೋಫಿ; ಮೂರನೇ ಪಂದ್ಯದಲ್ಲಿ ಮುಗ್ಗರಿಸಿದ ಭಾರತ

ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ ನಡೆಯುತ್ತಿರುವ ಬಾಡ೯ರ್ – ಗವಾಸ್ಕರ್ ಟ್ರೋಫಿಯ ಮೊದಲೆರಡು ಪಂದ್ಯಗಳಲ್ಲಿ ಜಯಗಳಿಸಿ ಆತ್ಮವಿಶ್ವಾಸದಲ್ಲಿದ್ದ ಭಾರತ ತಂಡಕ್ಕೆ ಪ್ರವಾಸಿ ಆಸ್ಟ್ರೇಲಿಯ ಮೂರನೇ ಪಂದ್ಯದಲ್ಲಿ ತಿರುಗೇಟು ನೀಡುವ ಮೂಲಕ ಒಂಬತ್ತು ವಿಕೆಟ್‌ಗಳ ಗೆಲುವು ಸಾಧಿಸಿದೆ, ಆ ಮೂಲಕ ಸರಣಿಯನ್ನು 2-1 ಅಂತರದಲ್ಲಿ ಜೀವಂತವಾಗಿರಿಸಿಕೊಂಡಿದೆ.

ಮೊದಲೆರಡು ಪಂದ್ಯಗಳಲ್ಲಿ ಟಾಸ್ ಸೋತಿದ್ದ ನಾಯಕ ರೋಹಿತ್ ಶರ್ಮಾ ಮದ್ಯಪ್ರದೇಶದ ಇಂದೋರ್ ನಲ್ಲಿ ನಡೆದ ಮೂರನೇ ಪಂದ್ಯದಲ್ಲಿ ಟಾಸ್ ಗೆದ್ದರೂ ಸಹ ಮ್ಯಾಚ್ ಗೆಲ್ಲುವಲ್ಲಿ ವಿಫಲರಾದರು.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಭಾರತ ತಂಡ ಮೊದಲ ಇನಿಂಗ್ಸ್ ನಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಕೇವಲ 109 ರನ್ ಗಳಿಸಿತು, ಆರಂಭಿಕ ಆಟಗಾರರು ಸೇರಿದಂತೆ ಯಾವೊಬ್ಬ ಆಟಗಾರರು ನಿಂತು ಆಟವಾಡದೇ ಆಸೀಸ್ ಬೌಲರ್‌ಗಳಿಗೆ ವಿಕೆಟ್ ಒಪ್ಪಿಸಿದರು.

ಭಾರತದ ಪರವಾಗಿ ವಿರಾಟ್ ಕೊಹ್ಲಿ ಅವರ 22 ರನ್ ಬ್ಯಾಟ್ಸ್‌ಮನ್ ಒಬ್ಬರ ಗರಿಷ್ಠ ಮೊತ್ತವಾಗಿತ್ತು, ಆಸ್ಟ್ರೇಲಿಯಾ ಸ್ಪಿನ್ನರ್ ಕುಹೆಮನ್ 5 ವಿಕೆಟ್ ಹಾಗೂ ನಾಥನ್ ಲಯಾನ್ 3 ವಿಕೆಟ್ ಪಡೆದರು, ಮೊದಲ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯ ತಂಡ ಆರಂಭಿಕ ಬ್ಯಾಟ್ಸ್‌ಮನ್ ಉಸ್ಮಾನ್ ಕ್ವಾಜಾ (60), ಬ್ಯಾಟ್ಸ್‌ಮನ್ ಲಬುಷನ್ಗೆ (31), ನಾಯಕ ಸ್ಟೀವನ್ ಸ್ಮಿತ್ (26) ಅವರ ಸಂಘಟಿತ ಹೋರಾಟದ ಫಲವಾಗಿ 197 ರನ್ ಪೇರಿಸುವ ಮೂಲಕ 87 ರನ್ ಗಳ ಮುನ್ನಡೆ ಸಾಧಿಸಿದರು.

ಭಾರತದ ಪರವಾಗಿ ಆಲ್ ರೌಂಡರ್ ರವೀಂದ್ರ ಜಡೇಜಾ 4 ವಿಕೆಟ್, ಆಪ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ 3 ವಿಕೆಟ್ ಹಾಗೂ ಉಮೇಶ್ ಯಾದವ್ 3 ವಿಕೆಟ್ ಕಬಳಿಸಿದರು, ಎರಡನೇ ಇನಿಂಗ್ಸ್ ಆರಂಭಿಸಿದ ಭಾರತ ಆತ್ಮವಿಶ್ವಾಸದಿಂದ ಹೆಜ್ಜೆ ಹಾಕಿದರೂ ಪ್ರಯೋಜನವಾಗಲಿಲ್ಲ.

ಅನುಭವಿ ಆಟಗಾರ ಚತೇಶ್ವರ ಪೂಜಾರ (61), ಮದ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಶ್ರೇಯಸ್ ಅಯ್ಯರ್ (26) ಸ್ವಲ್ಪ ಪ್ರತಿರೋಧ ತೋರಿದರೂ ಸಹ ಪ್ರವಾಸಿ ಬೌಲಿಂಗ್ ವಿಭಾಗದ ಉತ್ತಮ ಪ್ರದರ್ಶನದ ಎದುರು ಭಾರತೀಯ ಬ್ಯಾಟಿಂಗ್ ಪಡೆ ಉತ್ತರ ನೀಡುವಲ್ಲಿ ವಿಫಲರಾದರು.

ಎರಡನೇ ಇನ್ನಿಂಗ್ಸ್ ನಲ್ಲಿ ಸ್ಪಿನ್ನರ್ ನಾಥನ್ ಲಯಾನ್ 8 ವಿಕೆಟ್ ಪಡೆದು ಮಿಂಚಿದರು, 75 ರನ್‌ಗಳ ಗುರಿ ಬೆನ್ನಟ್ಟಿದ ಪ್ರವಾಸಿ ಆಸ್ಟ್ರೇಲಿಯ ತಂಡ ಒಂದು ವಿಕೆಟ್ ಕಳೆದುಕೊಂಡು ಗುರಿ ಮುಟ್ಟಿತು, ಸ್ಪಿನ್ನರ್ ನಾಥನ್ ಲಯಾನ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು, ಆ ಮೂಲಕ ಪ್ರವಾಸಿ ತಂಡ ಸರಣಿಯಲ್ಲಿ ಮೊದಲ ಗೆಲುವಿನ ನಗೆ ಬೀರಿತು.

Ramesh Babu

Journalist

Recent Posts

ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿ ಹಂಚಿಕೆ

ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…

3 minutes ago

ಬೈಕ್ ಕಳ್ಳತನ ಪ್ರಕರಣ ಭೇದಿಸಿದ ವಿಜಯಪುರ ಪೊಲೀಸರು; ಲಕ್ಷಾಂತರ ಮೌಲ್ಯದ 42 ದ್ವಿಚಕ್ರ ವಾಹನ ವಶ

ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…

4 hours ago

ಪರೀಕ್ಷಾ ಅಕ್ರಮಗಳು……

ನೀಟ್ ಪ್ರವೇಶ ಪರೀಕ್ಷೆ.... ಆಡಳಿತಗಾರ ರಾಜಕಾರಣಿಗಳ ಸಂಪೂರ್ಣ ವೈಫಲ್ಯ, ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ, ಪೋಷಕರ ಅತಿಯಾದ ದುರಾಸೆ, ವಿದ್ಯಾರ್ಥಿಗಳ ನಿರ್ಲಜ್ಜತೆ…

6 hours ago

ಮುತ್ತತ್ತಿಯಲ್ಲಿ ದುರಂತ: ಕಾವೇರಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಐವರು ಸಾವು

ರಾಮನಗರ: ಮುತ್ತತ್ತಿಯ ಕಾವೇರಿ ನದಿಯಲ್ಲಿ ಫೋಟೋ ತೆಗೆಯಲು ನೀರಿಗೆ ಇಳಿದ ವೇಳೆ ಸಂಭವಿಸಿದ ದುರಂತದಲ್ಲಿ ಒಂದೇ ಕುಟುಂಬದ ಐವರು ನೀರಿನಲ್ಲಿ…

7 hours ago

ಹುಸ್ಕೂರಲ್ಲಿ ಶ್ರೀ ಸಪ್ಪಲಮ್ಮದೇವಿ–ದುರ್ಗಮ್ಮದೇವಿ ಜಾತ್ರಾ ಮಹೋತ್ಸವ ಸಂಭ್ರಮ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…

22 hours ago

ಗೊಬ್ಬರದ ಚೀಲಗಳಡಿ ₹1.65 ಕೋಟಿ ಮೌಲ್ಯದ ಗೋವಾ ಮದ್ಯ ಸಾಗಾಟ: ವಿಜಯಪುರ ಪೊಲೀಸರಿಂದ ಅಂತರರಾಜ್ಯ ಜಾಲ ಪತ್ತೆ

ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…

24 hours ago