ನಾಗ್ಪುರ : ಟೆಸ್ಟ್ ಸರಣಿ ಆರಂಭಕ್ಕೂ ಮುನ್ನವೇ ಅತ್ಯಂತ ರೋಚಕತೆಯಿಂದ ಕೂಡಿದ್ದ ಭಾರತ ಹಾಗೂ ಆಸ್ಟ್ರೇಲಿಯಾ ತಂಡದ ಮಾಜಿ ಹಾಗೂ ಹಾಲಿ ಆಟಗಾರರ ಮಾತುಗಳ ನಡುವೆಯೇ ಭಾರತ ತಂಡ ಪ್ರವಾಸಿ ಆಸ್ಟ್ರೇಲಿಯ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಇನಿಂಗ್ಸ್ ಹಾಗೂ 132 ರನ್ ಜಯಗಳಿಸುವ ಮೂಲಕ ಸರಣಿಯನ್ನು 1-0 ಅಂತರದಲ್ಲಿ ಮುನ್ನಡೆ ಸಾಧಿಸಿದೆ.
ಟಾಸ್ ಗೆದ್ದು ಬ್ಯಾಟಿಂಗ್ ಪ್ರಾರಂಭಿಸಿದ ಪ್ರವಾಸಿ ತಂಡ ಮೊದಲ ಇನಿಂಗ್ಸ್ ನಲ್ಲಿ ಬೇಗನೇ ವಿಕೆಟ್ ಕಳೆದುಕೊಂಡರು, ಆಸೀಸ್ ತಂಡದ ಮದ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಗಳಾದ ಲಭುಶನಗೆ (49), ಮಾಜಿ ನಾಯಕ ಸ್ಟೀವನ್ ಸ್ಮಿತ್ (37), ಹ್ಯಾಂಗ್ ಕೂಮ್ (31) ಆಲಕ್ಸ್ ಹ್ಯಾರಿ (36) ರನ್ ಗಳಿಸಿ ತಂಡದ ಮೊತ್ತ 177 ರನ್ ತಲುಪಲು ನೆರವಾದರು.
ಭಾರತದ ತಂಡದ ಬೌಲಿಂಗ್ ಪಡೆಯಲ್ಲಿ ಸಿರಾಜ್ ಹಾಗೂ ಮೊಹಮ್ಮದ್ ಶಮಿ ಮೊದಲಿಗೆ ವಿಕೆಟ್ ಕಬಳಿಸಿದರೆ ನಂತರ ಬಂದ ಸ್ಪಿನ್ ಜೋಡಿ ಆಲ್ ರೌಂಡರ್ ರವೀಂದ್ರ ಜಡೇಜಾ 5 ವಿಕೆಟ್ ಗೊಂಚಲು ಪಡೆದರೆ, ಆರ್. ಅಶ್ವಿನ್ 3 ವಿಕೆಟ್ ಪಡೆಯುವ ಮೂಲಕ ಭಾರತದ ಪರವಾಗಿ 450 ವಿಕೆಟ್ ಪಡೆದ ಸಾಧನೆ ಮಾಡಿದರು.
ಇನ್ನಿಂಗ್ಸ್ ಗೆ ವೇಗ ನೀಡಿದ ನಾಯಕ ರೋಹಿತ್ ಶರ್ಮಾ ಶತಕ (120) ರನ್ ಸಿಡಿಸಿ ತಂಡಕ್ಕೆ ನೆರವಾದರು, ಆರ್. ಅಶ್ವಿನ್ (23), ಆಲ್ ರೌಂಡರ್ ರವೀಂದ್ರ ಜಡೇಜಾ (70), ಅಕ್ಷರ್ ಪಟೇಲ್ (84), ಮೊಹಮ್ಮದ್ ಶಮಿ (37) ರನ್ ಸಿಡಿಸಿದ್ದರ ಫಲವಾಗಿ ತಂಡ 400 ರನ್ ಗಳಿಸಿತು. ಮೊದಲ ಪಂದ್ಯದಲ್ಲಿಯೇ 7 ವಿಕೆಟ್ ಪಡೆದ ಮಪಿ೯ ಗಮನ ಸೆಳೆದರು.
ಹಿನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ತಂಡದ ಬ್ಯಾಟಿಂಗ್ ಪಡೆಯನ್ನು ಪೆವಿಲಿಯನ್ ಗೆ ಪೆರೆಡ್ ನಡೆಸಿದ ಕೀರ್ತಿ ಸ್ಪಿನ್ನರ್ ಗಳಿಗೆ ಸಲ್ಲಬೇಕು, ಮಾಜಿ ನಾಯಕ ಸ್ಟೀವನ್ ಸ್ಮಿತ್ (25) ರನ್ ಹೊರತುಪಡಿಸಿ ಉಳಿದ ಯಾವುದೇ ಬ್ಯಾಟ್ಸ್ಮನ್ ಪ್ರತಿರೋಧ ತೋರಲಿಲ್ಲ, ಆರ್. ಅಶ್ವಿನ್ 5 ವಿಕೆಟ್ ಗೊಂಚಲು ಹಾಗೂ ಆಲ್ ರೌಂಡರ್ ರವೀಂದ್ರ ಜಡೇಜಾ 3 ವಿಕೆಟ್ ಕಬಳಿಸಿದರು.
ಕಳೆದ 10 ವರ್ಷಗಳಿಂದ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಕನ್ನಮಂಗಲ ಗ್ರಾಮದ ಸರ್ವೇ ನಂಬರ್ 50ರ ಗೋಮಾಳದಲ್ಲಿ 53-57 ಅರ್ಜಿ…
ರಸ್ತೆ ನಿಯಮಗಳನ್ನು ಪಾಲಿಸದೆ ವಾಹನಸವಾರರಿಗೆ ಸಮಸ್ಯೆ ಮಾಡುತ್ತಿರುವ ಟೋಲ್ ಸಿಬ್ಬಂದಿ ವಿರುದ್ದ ರಾಜ್ಯ ರೈತ ಸಂಘ ಮತ್ತು ವಿವಿಧ ಕನ್ನಡಪರ…
ವಿಜಯಪುರ(ದೇವನಹಳ್ಳಿ): ಇಂದಿನ ಮಕ್ಕಳಿಗೆ ಶಿಕ್ಷಣದಷ್ಟೇ, ಆಚಾರ-ವಿಚಾರ ಒಳಗೊಂಡ ಸಂಸ್ಕಾರವನ್ನು ನೀಡುವುದು ಅವಶ್ಯವಾಗಿದ್ದು, ಧಾರ್ಮಿಕ ಕಾರ್ಯಕ್ರಮಗಳಿಗೆ ಪೋಷಕರು ತಮ್ಮ ಮಕ್ಕಳನ್ನು ಕರೆತರುವ…
ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು…
ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್ಪೋರ್ಟ್ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…
ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…