ನಾಗ್ಪುರ : ಟೆಸ್ಟ್ ಸರಣಿ ಆರಂಭಕ್ಕೂ ಮುನ್ನವೇ ಅತ್ಯಂತ ರೋಚಕತೆಯಿಂದ ಕೂಡಿದ್ದ ಭಾರತ ಹಾಗೂ ಆಸ್ಟ್ರೇಲಿಯಾ ತಂಡದ ಮಾಜಿ ಹಾಗೂ ಹಾಲಿ ಆಟಗಾರರ ಮಾತುಗಳ ನಡುವೆಯೇ ಭಾರತ ತಂಡ ಪ್ರವಾಸಿ ಆಸ್ಟ್ರೇಲಿಯ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಇನಿಂಗ್ಸ್ ಹಾಗೂ 132 ರನ್ ಜಯಗಳಿಸುವ ಮೂಲಕ ಸರಣಿಯನ್ನು 1-0 ಅಂತರದಲ್ಲಿ ಮುನ್ನಡೆ ಸಾಧಿಸಿದೆ.
ಟಾಸ್ ಗೆದ್ದು ಬ್ಯಾಟಿಂಗ್ ಪ್ರಾರಂಭಿಸಿದ ಪ್ರವಾಸಿ ತಂಡ ಮೊದಲ ಇನಿಂಗ್ಸ್ ನಲ್ಲಿ ಬೇಗನೇ ವಿಕೆಟ್ ಕಳೆದುಕೊಂಡರು, ಆಸೀಸ್ ತಂಡದ ಮದ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಗಳಾದ ಲಭುಶನಗೆ (49), ಮಾಜಿ ನಾಯಕ ಸ್ಟೀವನ್ ಸ್ಮಿತ್ (37), ಹ್ಯಾಂಗ್ ಕೂಮ್ (31) ಆಲಕ್ಸ್ ಹ್ಯಾರಿ (36) ರನ್ ಗಳಿಸಿ ತಂಡದ ಮೊತ್ತ 177 ರನ್ ತಲುಪಲು ನೆರವಾದರು.
ಭಾರತದ ತಂಡದ ಬೌಲಿಂಗ್ ಪಡೆಯಲ್ಲಿ ಸಿರಾಜ್ ಹಾಗೂ ಮೊಹಮ್ಮದ್ ಶಮಿ ಮೊದಲಿಗೆ ವಿಕೆಟ್ ಕಬಳಿಸಿದರೆ ನಂತರ ಬಂದ ಸ್ಪಿನ್ ಜೋಡಿ ಆಲ್ ರೌಂಡರ್ ರವೀಂದ್ರ ಜಡೇಜಾ 5 ವಿಕೆಟ್ ಗೊಂಚಲು ಪಡೆದರೆ, ಆರ್. ಅಶ್ವಿನ್ 3 ವಿಕೆಟ್ ಪಡೆಯುವ ಮೂಲಕ ಭಾರತದ ಪರವಾಗಿ 450 ವಿಕೆಟ್ ಪಡೆದ ಸಾಧನೆ ಮಾಡಿದರು.
ಇನ್ನಿಂಗ್ಸ್ ಗೆ ವೇಗ ನೀಡಿದ ನಾಯಕ ರೋಹಿತ್ ಶರ್ಮಾ ಶತಕ (120) ರನ್ ಸಿಡಿಸಿ ತಂಡಕ್ಕೆ ನೆರವಾದರು, ಆರ್. ಅಶ್ವಿನ್ (23), ಆಲ್ ರೌಂಡರ್ ರವೀಂದ್ರ ಜಡೇಜಾ (70), ಅಕ್ಷರ್ ಪಟೇಲ್ (84), ಮೊಹಮ್ಮದ್ ಶಮಿ (37) ರನ್ ಸಿಡಿಸಿದ್ದರ ಫಲವಾಗಿ ತಂಡ 400 ರನ್ ಗಳಿಸಿತು. ಮೊದಲ ಪಂದ್ಯದಲ್ಲಿಯೇ 7 ವಿಕೆಟ್ ಪಡೆದ ಮಪಿ೯ ಗಮನ ಸೆಳೆದರು.
ಹಿನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ತಂಡದ ಬ್ಯಾಟಿಂಗ್ ಪಡೆಯನ್ನು ಪೆವಿಲಿಯನ್ ಗೆ ಪೆರೆಡ್ ನಡೆಸಿದ ಕೀರ್ತಿ ಸ್ಪಿನ್ನರ್ ಗಳಿಗೆ ಸಲ್ಲಬೇಕು, ಮಾಜಿ ನಾಯಕ ಸ್ಟೀವನ್ ಸ್ಮಿತ್ (25) ರನ್ ಹೊರತುಪಡಿಸಿ ಉಳಿದ ಯಾವುದೇ ಬ್ಯಾಟ್ಸ್ಮನ್ ಪ್ರತಿರೋಧ ತೋರಲಿಲ್ಲ, ಆರ್. ಅಶ್ವಿನ್ 5 ವಿಕೆಟ್ ಗೊಂಚಲು ಹಾಗೂ ಆಲ್ ರೌಂಡರ್ ರವೀಂದ್ರ ಜಡೇಜಾ 3 ವಿಕೆಟ್ ಕಬಳಿಸಿದರು.
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…