ಬಾಡ೯ರ್ – ಗವಾಸ್ಕರ್ ಟ್ರೋಫಿ : ಸ್ಪಿನ್ನರ್ ಗಳ ಬಲೆಗೆ ಬಿದ್ದ ಆಸೀಸ್, ಭಾರತಕ್ಕೆ ಇನ್ನಿಂಗ್ಸ್ ಹಾಗೂ132 ರನ್ ಜಯ!

ನಾಗ್ಪುರ : ಟೆಸ್ಟ್ ಸರಣಿ ಆರಂಭಕ್ಕೂ ಮುನ್ನವೇ ಅತ್ಯಂತ ರೋಚಕತೆಯಿಂದ ಕೂಡಿದ್ದ ಭಾರತ ಹಾಗೂ ಆಸ್ಟ್ರೇಲಿಯಾ ತಂಡದ ಮಾಜಿ ಹಾಗೂ ಹಾಲಿ ಆಟಗಾರರ ಮಾತುಗಳ ನಡುವೆಯೇ ಭಾರತ ತಂಡ ಪ್ರವಾಸಿ ಆಸ್ಟ್ರೇಲಿಯ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಇನಿಂಗ್ಸ್ ಹಾಗೂ 132 ರನ್ ಜಯಗಳಿಸುವ ಮೂಲಕ ಸರಣಿಯನ್ನು 1-0 ಅಂತರದಲ್ಲಿ ಮುನ್ನಡೆ ಸಾಧಿಸಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಪ್ರಾರಂಭಿಸಿದ ಪ್ರವಾಸಿ ತಂಡ ಮೊದಲ ಇನಿಂಗ್ಸ್ ನಲ್ಲಿ ಬೇಗನೇ ವಿಕೆಟ್ ಕಳೆದುಕೊಂಡರು, ಆಸೀಸ್ ತಂಡದ ಮದ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಗಳಾದ ಲಭುಶನಗೆ (49), ಮಾಜಿ ನಾಯಕ ಸ್ಟೀವನ್ ಸ್ಮಿತ್ (37), ಹ್ಯಾಂಗ್ ಕೂಮ್ (31) ಆಲಕ್ಸ್ ಹ್ಯಾರಿ (36) ರನ್ ಗಳಿಸಿ ತಂಡದ ಮೊತ್ತ 177 ರನ್ ತಲುಪಲು ನೆರವಾದರು.

ಭಾರತದ ತಂಡದ ಬೌಲಿಂಗ್ ಪಡೆಯಲ್ಲಿ ಸಿರಾಜ್ ಹಾಗೂ ಮೊಹಮ್ಮದ್ ಶಮಿ ಮೊದಲಿಗೆ ವಿಕೆಟ್ ಕಬಳಿಸಿದರೆ ನಂತರ ಬಂದ ಸ್ಪಿನ್ ಜೋಡಿ ಆಲ್ ರೌಂಡರ್ ರವೀಂದ್ರ ಜಡೇಜಾ 5 ವಿಕೆಟ್ ಗೊಂಚಲು ಪಡೆದರೆ, ಆರ್. ಅಶ್ವಿನ್ 3 ವಿಕೆಟ್ ಪಡೆಯುವ ಮೂಲಕ ಭಾರತದ ಪರವಾಗಿ 450 ವಿಕೆಟ್ ಪಡೆದ ಸಾಧನೆ ಮಾಡಿದರು.

ಮೊದಲ ಇನ್ನಿಂಗ್ಸ್ ಆರಂಭಿಸಿದ ಭಾರತ ತಂಡ ಮೊದಲ ವಿಕೆಟ್ ನಷ್ಟಕ್ಕೆ 76 ರನ್ ಗಳಿಸಿ ಉತ್ತಮ ಅಡಿಪಾಯ ಹಾಕಿದರು, ಪದಾರ್ಪಣೆ ಪಂದ್ಯವಾಡಿದ ಆಸೀಸ್ ಸ್ಪಿನ್ನರ್ ಮಪಿ೯ ಕೆ. ಎಲ್. ರಾಹುಲ್ ವಿಕೆಟ್ ಕಬಳಿಸುವ ಮೂಲಕ ಬ್ರೇಕ್ ಥ್ರೋ ನೀಡಿದರು.

ಇನ್ನಿಂಗ್ಸ್ ಗೆ ವೇಗ ನೀಡಿದ ನಾಯಕ ರೋಹಿತ್ ಶರ್ಮಾ ಶತಕ (120) ರನ್ ಸಿಡಿಸಿ ತಂಡಕ್ಕೆ ನೆರವಾದರು, ಆರ್. ಅಶ್ವಿನ್ (23), ಆಲ್ ರೌಂಡರ್ ರವೀಂದ್ರ ಜಡೇಜಾ (70), ಅಕ್ಷರ್ ಪಟೇಲ್ (84), ಮೊಹಮ್ಮದ್ ಶಮಿ (37) ರನ್ ಸಿಡಿಸಿದ್ದರ ಫಲವಾಗಿ ತಂಡ 400 ರನ್ ಗಳಿಸಿತು. ಮೊದಲ ಪಂದ್ಯದಲ್ಲಿಯೇ 7 ವಿಕೆಟ್ ಪಡೆದ ಮಪಿ೯ ಗಮನ ಸೆಳೆದರು.

ಹಿನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ತಂಡದ ಬ್ಯಾಟಿಂಗ್ ಪಡೆಯನ್ನು ಪೆವಿಲಿಯನ್ ಗೆ ಪೆರೆಡ್ ನಡೆಸಿದ ಕೀರ್ತಿ ಸ್ಪಿನ್ನರ್ ಗಳಿಗೆ ಸಲ್ಲಬೇಕು, ಮಾಜಿ ನಾಯಕ ಸ್ಟೀವನ್ ಸ್ಮಿತ್ (25) ರನ್ ಹೊರತುಪಡಿಸಿ ಉಳಿದ ಯಾವುದೇ ಬ್ಯಾಟ್ಸ್‌ಮನ್ ಪ್ರತಿರೋಧ ತೋರಲಿಲ್ಲ, ಆರ್. ಅಶ್ವಿನ್ 5 ವಿಕೆಟ್ ಗೊಂಚಲು ಹಾಗೂ ಆಲ್ ರೌಂಡರ್ ರವೀಂದ್ರ ಜಡೇಜಾ 3 ವಿಕೆಟ್ ಕಬಳಿಸಿದರು.

ಸ್ಪಿನ್ ಬಲೆಯಲ್ಲಿ ಸಿಕ್ಕಿ ಆಸ್ಟ್ರೇಲಿಯಾ ತಂಡ 91 ರನ್ ಗೆ ಆಲೌಟ್ ಆಯಿತು. ಎರಡೂ ಇನ್ನಿಂಗ್ಸ್ ನಲ್ಲಿ ಉತ್ತಮ ಪ್ರದರ್ಶನ ನೀಡಿದ ಆಲ್ ರೌಂಡರ್ ರವೀಂದ್ರ ಜಡೇಜಾ 8 ವಿಕೆಟ್ ಹಾಗೂ 70 ರನ್ ಗಳಿಸಿದ್ದರಿಂದ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ಭಾರತದ ಮಧ್ಯಮ ವರ್ಗದವರ ಸಿಹಿ-ಕಹಿಗಳು, ನಿರಾಸೆ ಮತ್ತು ಜೀವನೋತ್ಸಾಹ…..

ಭಾರತದ ಬಹಳಷ್ಟು ಮಧ್ಯಮ ವರ್ಗದ ಜನರಲ್ಲಿ ಜೀವನೋತ್ಸಾಹ ಕಡಿಮೆಯಾಗುತ್ತಿದೇಯೇ ಎಂಬ ಅನುಮಾನ ಶುರುವಾಗಿದೆ. ನಿಜಕ್ಕೂ ಬೃಹತ್ ಸಂಖ್ಯೆಯ ಮಧ್ಯಮ ವರ್ಗದವರು…

2 hours ago

ದೊಡ್ಡಬಳ್ಳಾಪುರದಲ್ಲಿ ಕಳ್ಳರ ಹಾವಳಿ: ಸರ, ಬೈಕ್‌ನಿಂದ ಹಸುಗಳವರೆಗೆ ಕಳವು – ಜನರಲ್ಲಿ ಹೆಚ್ಚಿದ ಆತಂಕ

ದೊಡ್ಡಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳು ಆತಂಕಕಾರಿ ಪ್ರಮಾಣದಲ್ಲಿ ಹೆಚ್ಚಾಗುತ್ತಿದ್ದು, ಜನಸಾಮಾನ್ಯರ ನೆಮ್ಮದಿ ಕದಡಿದೆ. ಮಹಿಳೆಯರ ಚಿನ್ನಾಭರಣ,…

3 hours ago

ಸಿಎಂ, ಡಿಸಿಎಂ, ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ಸಿಗಲಿದೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆ

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೇರಿದಂತೆ ತಮ್ಮೊಂದಿಗೆ ಬುಧವಾರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 13 ಸಚಿವರಿಗೆ ಗುರುವಾರ ಖಾತೆ…

4 hours ago

ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…

14 hours ago

ಜೂ.05 ರಿಂದ ಮೂರು ದಿನಗಳ ಕಾಲ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟ ಮೇಳ

ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…

17 hours ago

ಟಿವಿಎಸ್ ಎಕ್ಸ್‌ಎಲ್-100 ಕಳವು: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ

ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್‌ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…

21 hours ago