ನಾಗ್ಪುರ : ಟೆಸ್ಟ್ ಸರಣಿ ಆರಂಭಕ್ಕೂ ಮುನ್ನವೇ ಅತ್ಯಂತ ರೋಚಕತೆಯಿಂದ ಕೂಡಿದ್ದ ಭಾರತ ಹಾಗೂ ಆಸ್ಟ್ರೇಲಿಯಾ ತಂಡದ ಮಾಜಿ ಹಾಗೂ ಹಾಲಿ ಆಟಗಾರರ ಮಾತುಗಳ ನಡುವೆಯೇ ಭಾರತ ತಂಡ ಪ್ರವಾಸಿ ಆಸ್ಟ್ರೇಲಿಯ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಇನಿಂಗ್ಸ್ ಹಾಗೂ 132 ರನ್ ಜಯಗಳಿಸುವ ಮೂಲಕ ಸರಣಿಯನ್ನು 1-0 ಅಂತರದಲ್ಲಿ ಮುನ್ನಡೆ ಸಾಧಿಸಿದೆ.
ಟಾಸ್ ಗೆದ್ದು ಬ್ಯಾಟಿಂಗ್ ಪ್ರಾರಂಭಿಸಿದ ಪ್ರವಾಸಿ ತಂಡ ಮೊದಲ ಇನಿಂಗ್ಸ್ ನಲ್ಲಿ ಬೇಗನೇ ವಿಕೆಟ್ ಕಳೆದುಕೊಂಡರು, ಆಸೀಸ್ ತಂಡದ ಮದ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಗಳಾದ ಲಭುಶನಗೆ (49), ಮಾಜಿ ನಾಯಕ ಸ್ಟೀವನ್ ಸ್ಮಿತ್ (37), ಹ್ಯಾಂಗ್ ಕೂಮ್ (31) ಆಲಕ್ಸ್ ಹ್ಯಾರಿ (36) ರನ್ ಗಳಿಸಿ ತಂಡದ ಮೊತ್ತ 177 ರನ್ ತಲುಪಲು ನೆರವಾದರು.
ಭಾರತದ ತಂಡದ ಬೌಲಿಂಗ್ ಪಡೆಯಲ್ಲಿ ಸಿರಾಜ್ ಹಾಗೂ ಮೊಹಮ್ಮದ್ ಶಮಿ ಮೊದಲಿಗೆ ವಿಕೆಟ್ ಕಬಳಿಸಿದರೆ ನಂತರ ಬಂದ ಸ್ಪಿನ್ ಜೋಡಿ ಆಲ್ ರೌಂಡರ್ ರವೀಂದ್ರ ಜಡೇಜಾ 5 ವಿಕೆಟ್ ಗೊಂಚಲು ಪಡೆದರೆ, ಆರ್. ಅಶ್ವಿನ್ 3 ವಿಕೆಟ್ ಪಡೆಯುವ ಮೂಲಕ ಭಾರತದ ಪರವಾಗಿ 450 ವಿಕೆಟ್ ಪಡೆದ ಸಾಧನೆ ಮಾಡಿದರು.
ಇನ್ನಿಂಗ್ಸ್ ಗೆ ವೇಗ ನೀಡಿದ ನಾಯಕ ರೋಹಿತ್ ಶರ್ಮಾ ಶತಕ (120) ರನ್ ಸಿಡಿಸಿ ತಂಡಕ್ಕೆ ನೆರವಾದರು, ಆರ್. ಅಶ್ವಿನ್ (23), ಆಲ್ ರೌಂಡರ್ ರವೀಂದ್ರ ಜಡೇಜಾ (70), ಅಕ್ಷರ್ ಪಟೇಲ್ (84), ಮೊಹಮ್ಮದ್ ಶಮಿ (37) ರನ್ ಸಿಡಿಸಿದ್ದರ ಫಲವಾಗಿ ತಂಡ 400 ರನ್ ಗಳಿಸಿತು. ಮೊದಲ ಪಂದ್ಯದಲ್ಲಿಯೇ 7 ವಿಕೆಟ್ ಪಡೆದ ಮಪಿ೯ ಗಮನ ಸೆಳೆದರು.
ಹಿನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ತಂಡದ ಬ್ಯಾಟಿಂಗ್ ಪಡೆಯನ್ನು ಪೆವಿಲಿಯನ್ ಗೆ ಪೆರೆಡ್ ನಡೆಸಿದ ಕೀರ್ತಿ ಸ್ಪಿನ್ನರ್ ಗಳಿಗೆ ಸಲ್ಲಬೇಕು, ಮಾಜಿ ನಾಯಕ ಸ್ಟೀವನ್ ಸ್ಮಿತ್ (25) ರನ್ ಹೊರತುಪಡಿಸಿ ಉಳಿದ ಯಾವುದೇ ಬ್ಯಾಟ್ಸ್ಮನ್ ಪ್ರತಿರೋಧ ತೋರಲಿಲ್ಲ, ಆರ್. ಅಶ್ವಿನ್ 5 ವಿಕೆಟ್ ಗೊಂಚಲು ಹಾಗೂ ಆಲ್ ರೌಂಡರ್ ರವೀಂದ್ರ ಜಡೇಜಾ 3 ವಿಕೆಟ್ ಕಬಳಿಸಿದರು.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…