ನಾಗ್ಪುರ : ಟೆಸ್ಟ್ ಸರಣಿ ಆರಂಭಕ್ಕೂ ಮುನ್ನವೇ ಅತ್ಯಂತ ರೋಚಕತೆಯಿಂದ ಕೂಡಿದ್ದ ಭಾರತ ಹಾಗೂ ಆಸ್ಟ್ರೇಲಿಯಾ ತಂಡದ ಮಾಜಿ ಹಾಗೂ ಹಾಲಿ ಆಟಗಾರರ ಮಾತುಗಳ ನಡುವೆಯೇ ಭಾರತ ತಂಡ ಪ್ರವಾಸಿ ಆಸ್ಟ್ರೇಲಿಯ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಇನಿಂಗ್ಸ್ ಹಾಗೂ 132 ರನ್ ಜಯಗಳಿಸುವ ಮೂಲಕ ಸರಣಿಯನ್ನು 1-0 ಅಂತರದಲ್ಲಿ ಮುನ್ನಡೆ ಸಾಧಿಸಿದೆ.
ಟಾಸ್ ಗೆದ್ದು ಬ್ಯಾಟಿಂಗ್ ಪ್ರಾರಂಭಿಸಿದ ಪ್ರವಾಸಿ ತಂಡ ಮೊದಲ ಇನಿಂಗ್ಸ್ ನಲ್ಲಿ ಬೇಗನೇ ವಿಕೆಟ್ ಕಳೆದುಕೊಂಡರು, ಆಸೀಸ್ ತಂಡದ ಮದ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಗಳಾದ ಲಭುಶನಗೆ (49), ಮಾಜಿ ನಾಯಕ ಸ್ಟೀವನ್ ಸ್ಮಿತ್ (37), ಹ್ಯಾಂಗ್ ಕೂಮ್ (31) ಆಲಕ್ಸ್ ಹ್ಯಾರಿ (36) ರನ್ ಗಳಿಸಿ ತಂಡದ ಮೊತ್ತ 177 ರನ್ ತಲುಪಲು ನೆರವಾದರು.
ಭಾರತದ ತಂಡದ ಬೌಲಿಂಗ್ ಪಡೆಯಲ್ಲಿ ಸಿರಾಜ್ ಹಾಗೂ ಮೊಹಮ್ಮದ್ ಶಮಿ ಮೊದಲಿಗೆ ವಿಕೆಟ್ ಕಬಳಿಸಿದರೆ ನಂತರ ಬಂದ ಸ್ಪಿನ್ ಜೋಡಿ ಆಲ್ ರೌಂಡರ್ ರವೀಂದ್ರ ಜಡೇಜಾ 5 ವಿಕೆಟ್ ಗೊಂಚಲು ಪಡೆದರೆ, ಆರ್. ಅಶ್ವಿನ್ 3 ವಿಕೆಟ್ ಪಡೆಯುವ ಮೂಲಕ ಭಾರತದ ಪರವಾಗಿ 450 ವಿಕೆಟ್ ಪಡೆದ ಸಾಧನೆ ಮಾಡಿದರು.
ಇನ್ನಿಂಗ್ಸ್ ಗೆ ವೇಗ ನೀಡಿದ ನಾಯಕ ರೋಹಿತ್ ಶರ್ಮಾ ಶತಕ (120) ರನ್ ಸಿಡಿಸಿ ತಂಡಕ್ಕೆ ನೆರವಾದರು, ಆರ್. ಅಶ್ವಿನ್ (23), ಆಲ್ ರೌಂಡರ್ ರವೀಂದ್ರ ಜಡೇಜಾ (70), ಅಕ್ಷರ್ ಪಟೇಲ್ (84), ಮೊಹಮ್ಮದ್ ಶಮಿ (37) ರನ್ ಸಿಡಿಸಿದ್ದರ ಫಲವಾಗಿ ತಂಡ 400 ರನ್ ಗಳಿಸಿತು. ಮೊದಲ ಪಂದ್ಯದಲ್ಲಿಯೇ 7 ವಿಕೆಟ್ ಪಡೆದ ಮಪಿ೯ ಗಮನ ಸೆಳೆದರು.
ಹಿನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ತಂಡದ ಬ್ಯಾಟಿಂಗ್ ಪಡೆಯನ್ನು ಪೆವಿಲಿಯನ್ ಗೆ ಪೆರೆಡ್ ನಡೆಸಿದ ಕೀರ್ತಿ ಸ್ಪಿನ್ನರ್ ಗಳಿಗೆ ಸಲ್ಲಬೇಕು, ಮಾಜಿ ನಾಯಕ ಸ್ಟೀವನ್ ಸ್ಮಿತ್ (25) ರನ್ ಹೊರತುಪಡಿಸಿ ಉಳಿದ ಯಾವುದೇ ಬ್ಯಾಟ್ಸ್ಮನ್ ಪ್ರತಿರೋಧ ತೋರಲಿಲ್ಲ, ಆರ್. ಅಶ್ವಿನ್ 5 ವಿಕೆಟ್ ಗೊಂಚಲು ಹಾಗೂ ಆಲ್ ರೌಂಡರ್ ರವೀಂದ್ರ ಜಡೇಜಾ 3 ವಿಕೆಟ್ ಕಬಳಿಸಿದರು.
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…
ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…
ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್ಪಿ, ಸಿಇಒ, ಡಿಎಫ್ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…