ಬಾಣಸವಾಡಿ ರೈಲ್ವೆ ಅಂಡರ್‌ಪಾಸ್ ಬಳಿ ಮತ್ತೊಂದು ಅಂಡರ್ ಪಾಸ್‌ಗೆ ಸ್ಥಳ ಪರಿಶೀಲಿಸಿದ ಸಚಿವ ಕೆ.ಜೆ.ಜಾರ್ಜ್

ಬಾಣಸವಾಡಿ ರೈಲ್ವೇ ನಿಲ್ದಾಣದ ಬಳಿಯ ಅಂಡರ್ ಪಾಸ್‌ನಲ್ಲಿ ಹೆಚ್ಚಿರುವ ಸಂಚಾರ ದಟ್ಟಣೆಗೆ ಪರಿಹಾರವಾಗಿ ಸಮೀಪದಲ್ಲೇ ನಿರ್ಮಿಸಲು ಉದ್ದೇಶಿಸಿರುವ ಮತ್ತೊಂದು ಅಂಡರ್ ಪಾಸ್‌ಗೆ ಸಂಬಂಧಿಸಿದಂತೆ ಇಂಧನ ಸಚಿವರೂ ಆಗಿರುವ ಸರ್ವಜ್ಞನಗರ ಕ್ಷೇತ್ರದ ಶಾಸಕ ಕೆ.ಜೆ.ಜಾರ್ಜ್ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ.

ಪ್ರಯಾಣಿಕರಿಗೆ ಹಾಗೂ ಸುಗಮ ಸಂಚಾರ ವ್ಯವಸ್ಥೆಗೆ ಅನುಕೂಲವಾಗುವಂತೆ, ಕೆ-ರೈಡ್ ರೈಲ್ವೆ ಕಲ್ಪಿಸಿದ ಬಾಣಸವಾಡಿ ರೈಲ್ವೆ ನಿಲ್ದಾಣದ ಸಮೀಪದ ಅಂಡರ್‌ಪಾಸ್ ಬಳಿ ಮತ್ತೊಂದು ಅಂಡರ್ ಪಾಸ್ ನಿರ್ಮಿಸುವ ಬಗ್ಗೆ ಅಧಿಕಾರಿಗಳೊಂದಿಗೆ ಶುಕ್ರವಾರ ಚರ್ಚಿಸಿ, ಸ್ಥಳ ಪರಿಶೀಲಿಸಿದರು. “ಈ ಪ್ರದೇಶದಲ್ಲಿ ಸುಗಮ ವಾಹನ ಸಂಚಾರಕ್ಕೆ ಬೇಕಾದ ವ್ಯವಸ್ಥೆಯಲ್ಲಿ ಯಾವುದೇ ತೊಡಕುಗಳು ಆಗಬಾರದು” ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಇದೇ ವೇಳೆ ಸಚಿವರು, ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಆಗುತ್ತಿರುವ ರಸ್ತೆ, ಪಾರ್ಕ್‌, ನೀರಿನ ಸಂಪರ್ಕ ಮತ್ತು ಒಳಚರಂಡಿ ವ್ಯವಸ್ಥೆ, ಅಂಡರ್‌ಪಾಸ್ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಖುದ್ದು ಪರಿಶೀಲಿಸಿದರಲ್ಲದೆ, ಎಲ್ಲಾ ಕೆಲಸಗಳನ್ನು ತ್ವರಿತ ಹಾಗೂ ಸಮರ್ಪಕವಾಗಿ ನಿರ್ವಹಿಸಬೇಕು. ಕಾಲಮಿತಿಯಲ್ಲಿ ಪೂರೈಸಬೇಕು ಎಂದು ಜತೆಯಲ್ಲಿದ್ದ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಬಾಣಸವಾಡಿ, ಕಮ್ಮನಹಳ್ಳಿ, ಕಲ್ಯಾಣನಗರ, ಕಾಚರಕನಹಳ್ಳಿ, ಲಿಂಗರಾಜಪುರಂ, ಎಂ.ಎಸ್‌. ನಗರಗಳಲ್ಲಿ ಕ್ಷೇತ್ರ ಪ್ರದಕ್ಷಿಣೆ ಮಾಡಿದ ಸಚಿವ ಕೆ.ಜೆ.ಜಾರ್ಜ್, ಸ್ಥಳೀಯರ ಸಮಸ್ಯೆಗಳನ್ನು ಆಲಿಸಿದರಲ್ಲದೆ, ಅಭಿವೃದ್ದಿ ಕಾಮಗಾರಿಗಳು ಮಂದಗತಿಯಲ್ಲಿ ನಡೆಯುತ್ತಿರುವ ಬಗ್ಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

*ಚರಂಡಿ ವ್ಯವಸ್ಥೆಯ ಕಾಮಗಾರಿ ಪರಿಶೀಲನೆ*

ಕಮ್ಮನಹಳ್ಳಿಯ ಜಯಲಕ್ಷ್ಮಿ ಶಾಲೆಯ ಸಮೀಪದ ಕಾಳಮ್ಮ ರಸ್ತೆ ಬಳಿ ಪ್ರಗತಿಯಲ್ಲಿರುವ ಜಲಮಂಡಳಿಯ ನೀರು ಮತ್ತು ಒಳಚರಂಡಿ ನಿರ್ಮಾಣ‌ ಕಾಮಗಾರಿಯನ್ನು ಪರಿಶೀಲಿಸಿದ ಸಚಿವರು, ಈ ಭಾಗದಲ್ಲಿ ಮನೆಮನೆಗೆ ನೀರಿನ ವ್ಯವಸ್ಥೆ ಹಾಗೂ ಉತ್ತಮ ಒಳಚರಂಡಿ ವ್ಯವಸ್ಥೆ ಕಲ್ಪಿಸುವ ಕುರಿತು ಜನರ ನಿರೀಕ್ಷೆಗಳಿಗೆ ಸ್ಪಂದಿಸಬೇಕು. ತ್ವರಿತಗತಿಯಲ್ಲಿ ಕಾಮಗಾರಿ ಪೂರೈಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಬಾಣಸವಾಡಿ ಓಎಂಬಿಆರ್ ಲೇಔಟ್‌, ಕಲ್ಯಾಣನಗರ, ಹೆಚ್‌ಆರ್‌ಬಿ‌ಆರ್ ಲೇಔಟ್‌ ಹಾಗೂ ಲಿಂಗರಾಜಪುರಂನ ಕೆ.ಎಸ್.ಎಫ್.ಸಿ. ಲೇಔಟ್‌ನ ಪೀನಿಯಲ್ ಚರ್ಚ್ ಭಾಗಗಳಲ್ಲಿ ನಿರ್ಮಿಸಲಾಗುತ್ತಿರುವ ಚರಂಡಿ ವ್ಯವಸ್ಥೆಯ ನಿರ್ಮಾಣ ಕಾಮಗಾರಿ, ಕಮ್ಮನಹಳ್ಳಿಯ ಎ.ಕೆ.ಕಾಲೋನಿಗೆ ಹೊಂದಿಕೊಂಡಿರುವ ಸೇನಾ ವಿಹಾರ ಆವರಣ, ಜಾನಕಿರಾಮ ಲೇಔಟ್‌ ಹಾಗೂ ಎಂ.ಎಸ್.ನಗರದ ಜೈಭಾರತ್ ನಗರದ ಒಳಚರಂಡಿ ವ್ಯವಸ್ಥೆ ಕಾಮಗಾರಿಗಳ ಪ್ರಗತಿಯನ್ನು ಸಚಿವರು ಪರಿಶೀಲಿಸಿದರು.

ಡಾ.ಎಸ್.ಕುಮಾರ್ ಲೇಔಟ್‌ನಲ್ಲಿ ಪ್ರಗತಿಯಲ್ಲಿರುವ ಯು.ಎಫ್.ಡಬ್ಲ್ಯೂ. ಯೋಜನೆಯ ಕಾಮಗಾರಿಯನ್ನು ಪರಿಶೀಲಿಸಿ, ನೀರು ಸೋರಿಕೆ ಮತ್ತು ನೀರಿನ ಬಿಲ್ಲಿಂಗ್ ವ್ಯವಸ್ಥೆಯನ್ನು ಇನ್ನಷ್ಟು ಸಮರ್ಪಕವಾಗಿ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

*ಡಾ.ರಾಜ್‌ಕುಮಾರ್‌ ಪಾರ್ಕ್‌ ಕಾಮಗಾರಿ ಶೀಘ್ರ ಪೂರ್ಣ*

ಕಮ್ಮನಹಳ್ಳಿಯ ಡಾ.ರಾಜ್‌ಕುಮಾರ್ ಪಾರ್ಕ್ ಹಾಗೂ ಅದರ ಸುತ್ತಮುತ್ತಲಿನ ರಸ್ತೆಗಳ ಉನ್ನತೀಕರಣ ಕಾಮಗಾರಿ ಪರಿಶೀಲಿಸಿದ ಸಚಿವರು, “ಈ ಭಾಗದ ನಾಗರಿಕರಿಗೆ ಉತ್ತಮ ಗುಣಮಟ್ಟದ ರಸ್ತೆಗಳು ಹಾಗೂ ಪಾರ್ಕ್‌ನಲ್ಲಿ ಸಮರ್ಪಕ ವ್ಯವಸ್ಥೆಗಳನ್ನು ಕಲ್ಪಿಸಲಾಗುತ್ತಿದೆ. ಪ್ರಗತಿಯಲ್ಲಿರುವ ಕಾಮಗಾರಿಗಳು ಶೀಘ್ರದಲ್ಲೇ ಪೂರ್ಣಗೊಂಡು, ನಾಗರಿಕರ ಸೇವೆಗೆ ಲಭ್ಯವಾಗಲಿವೆ. ಪಾರ್ಕ್‌ನಲ್ಲಿ ವಾಕಿಂಗ್ ಪಾಥ್, ಓಪನ್ ಜಿಮ್ ಮತ್ತು ಶೌಚಾಲಯ ವ್ಯವಸ್ಥೆ, ಮ್ಯಾಪಿಂಗ್ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ರೂಪಿಸಬೇಕು,” ಎಂದು ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ನಿರ್ದೇಶನ ನೀಡಿದರು.

ಈ ವೇಳೆ ಸ್ಥಳೀಯ ಕಾಂಗ್ರೆಸ್‌ ಮುಖಂಡರು ಮತ್ತು ಜಿಬಿಎ, ಬಿಡಬ್ಲ್ಯೂಎಸ್‌ಎಸ್‌ಬಿ, ಬೆಸ್ಕಾಂ, ಕೆಪಿಟಿಸಿಎಲ್ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ: ಯುವಕ ಸಾವು, ಮತ್ತೋರ್ವನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಲಿಕುಂಟೆ ಟೋಲ್ ಸಮೀಪದ ಚಿಕ್ಕಲಯ್ಯನಪಾಳ್ಯ ಬಳಿ ನಿಂತಿದ್ದ ಲಾರಿಗೆ ಬೈಕ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಓರ್ವ…

17 hours ago

ಪೊಲೀಸ್: ಕಾನೂನು ಸುವ್ಯವಸ್ಥೆಯನ್ನು ಸರಿಯಾದ ದಿಕ್ಕಿನಲ್ಲಿ ನಿಯಂತ್ರಿಸದಿದ್ದರೆ……

ದೇಶ ಮತ್ತು ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಸರಿಯಾದ ದಿಕ್ಕಿನಲ್ಲಿ ನಿಯಂತ್ರಿಸದಿದ್ದರೆ ಕೆಲವೇ ವರ್ಷಗಳಲ್ಲಿ ದೇಶದ ಆಂತರಿಕ ವ್ಯವಸ್ಥೆ ಕುಸಿಯುವುದು. ನಿಶ್ಚಿತ…

20 hours ago

ಕಸ್ತೂರಿ ರಂಗನ್ ವರದಿ; ‘ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ’- ಸಿಎಂ ಡಿ.ಕೆ ಶಿವಕುಮಾರ್ ಹೇಳಿಕೆ

ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲಿ ಇಂದು ನಡೆದ ಕಸ್ತೂರಿ ರಂಗನ್ ವರದಿ ಕುರಿತ ಸಾರ್ವಜನಿಕ ಸಭೆಯಲ್ಲಿ  ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು…

1 day ago

ಜಿಲ್ಲಾಸ್ಪತ್ರೆಯ ಅವ್ಯವಸ್ಥೆ ಸರಿಪಡಿಸಲು ರೈತ ಸಂಘ ಆಗ್ರಹ

ಕೋಲಾರ : ನಗರದ ಶ್ರೀ ನರಸಿಂಹರಾಜ ಜಿಲ್ಲಾ ಆಸ್ಪತ್ರೆಯಲ್ಲಿ ಬಡ ರೋಗಿಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವುದು, ಖಾಸಗಿ…

1 day ago

ಶಿಷ್ಟಾಚಾರ ವಿವಾದಕ್ಕೆ ಮತ್ತಷ್ಟು ಕಾವು: ಶಾಸಕರಿಗೆ ಕಾನೂನು, ಶಿಷ್ಟಾಚಾರದ ಅರಿವಿಲ್ಲ- ಶಾಸಕ ಧೀರಜ್ ಮುನಿರಾಜ್ ವಿರುದ್ಧ ಮಾಜಿ ಶಾಸಕ ವೆಂಕಟರಮಣಯ್ಯ ವಾಗ್ದಾಳಿ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಕ್ಷೇತ್ರದ ಹಾಲಿ ಶಾಸಕ ಧೀರಜ್ ಮುನಿರಾಜು ಹಾಗೂ ಮಾಜಿ ಶಾಸಕ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ (ಡಿಪಿಎ) ಅಧ್ಯಕ್ಷ…

1 day ago

ಕುಡಿಯುವ ನೀರು, ಮೇವಿಗೆ ಮುಂಜಾಗ್ರತೆ ವಹಿಸಿ: ನಿಗದಿತ ಅವಧಿಯೊಳಗೆ ಬಡವರಿಗೆ ಸೂರು, ಸೈಟ್ ವಿತರಿಸಲು ಸಿದ್ಧತೆ ಮಾಡಿಕೊಳ್ಳಿ- ಸಚಿವ ಕೆ.ಎಚ್ ಮುನಿಯಪ್ಪ

ಎಲ್ಲಾ ವರ್ಗದ ಬಡವರಿಗೆ ಸೂರು, ಸೈಟ್ ನೀಡುವುದು ನಮ್ಮ ಸರ್ಕಾರದ ಗುರಿಯಾಗಿದ್ದು ದೇವನಹಳ್ಳಿ ತಾಲ್ಲೂಕು ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳಿಗೆ ನಿವೇಶನ,…

1 day ago