ಬಾಬಾ ಸಾಹೇಬರ ದಾರಿಯಲ್ಲಿ ನಾವು ಹೊರಟರೆ ನಮ್ಮ ಬದುಕು ಶಾಂತಿ ಮತ್ತು ನೆಮ್ಮದಿಯಿಂದ ಕೂಡಿರುತ್ತದೆ- ಸಮಾಜ ಸೇವಕ ಜಿ. ರಾಜಗೋಪಾಲ್

ನಿಜವಾದ ಜ್ಞಾನಿಗಳು ಬಾಬಾ ಸಾಹೇಬರ ನಡೆ ಹಾಗೂ ಬುದ್ಧನ ದಾರಿಯಲ್ಲಿ ಅರಿತು ಹೊರಟರೆ ಇಡೀ ಜಗತ್ತೇ ಬುದ್ಧನ ಧಮ್ಮಕ್ಕೆ ಪರಿವರ್ತನೆ ಹೊಂದಿದರೂ ಆಶ್ಚರ್ಯ ವೇನಿಲ್ಲ ಎಂದು ಸಮಾಜ ಸೇವಕ ಜಿ. ರಾಜಗೋಪಾಲ್ ಅಭಿಪ್ರಾಯಪಟ್ಟರು.

ಡಾ. ಬಿ.ಆರ್ ಅಂಬೇಡ್ಕರ್ ಅಧ್ಯಯನ ಕೇಂದ್ರ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆಯೋಜಿಸಿದ್ದ 68ನೇ ಬಾಬಾ ಸಾಹೇಬರ ಪರಿನಿರ್ವಾಣ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಮಾತಾಡಿದ ಅವರು, ನಿಜವಾಗಿ ಬಾಬಾ ಸಾಹೇಬರ ದಾರಿಯಲ್ಲಿ ನಾವು ಹೊರಟರೆ ನಮ್ಮೆಲ್ಲರ ಬದುಕು ಶಾಂತಿ ಮತ್ತು ನೆಮ್ಮದಿಯಿಂದ ಕೂಡಿರುತ್ತದೆ. ಇಂದಿನ ಜಗತ್ತಿಗೆ ಬಾಬಾ ಸಾಹೇಬರ ಜ್ಞಾನ, ಬುದ್ಧನ ಮೈತ್ರಿ ಹಾಗೂ ಬಸವಣ್ಣನ ಕ್ರಾಂತಿ ಪ್ರಸ್ತುತವಾಗಿವೆ ಎಂದು ವಿದ್ಯಾರ್ಥಿಗಳಿಗೆ ಪರಿನಿರ್ವಾಣದ ಮಹತ್ವವನ್ನು ತಿಳಿಸಿದರು.

ಈ ಕಾರ್ಯಕ್ರಮದ ಪ್ರಸ್ತಾವನೆಯನ್ನು ಮಂಡಿಸಿದ ಡಾ.ಪ್ರಕಾಶ್ ಮಂಟೇದ ಬುದ್ಧನ ಪರಿನಿಬ್ಬಾಣವು ಬಹುಶಹ ಇಂದಿನ ಅನುಭೋಗ ಜಗತ್ತಿನ ರೋಗಗ್ರಸ್ಥ ಜನಕ್ಕೆ ಮದ್ದಾಗಬಲ್ಲದು ಹಾಗೂ ಬಾಬಾ ಸಾಹೇಬರು ಬುದ್ಧನನ್ನು ಕುರಿತು ಚಿಂತಿಸಿದ ಬಗೆ ಸರ್ವರ ಸುಖ ಶಾಂತಿಯ ನೆಮ್ಮದಿ ತತ್ವವನ್ನು ಹೇಳುತ್ತದೆ‌. ಅವರು ಹೇಳಿದಂತೆ, ನಾವು ತ್ಯಾಗ, ತಾಳ್ಮೆ ಮತ್ತೂ ನಿಶ್ವಾರ್ಥತೆಯಿಂದ ನಮ್ಮ ಬಲವನ್ನೆಲ್ಲ ಒಗ್ಗೂಡಿಸಿ ಕಾರ್ಯನಿರ್ವಹಿಸಬೇಕಿದೆ. ಈ ದಿಶೆಯಲ್ಲಿ ಮುಂದೆ ಅಂಬೇಡ್ಕರ್ ಅಧ್ಯಯನ ಕೇಂದ್ರವು ಬಾಬಾ ಸಾಹೇಬರ ಸಮಾಜೋರ್ಥಿಕ ಆಧ್ಯಾತ್ಮಿಕ ವಿಚಾರಗಳನ್ನು ಯುವ ಜನತೆಯ ಜೊತೆ ಹಂಚುವ ಪ್ರಯತ್ನವನ್ನು ಮಾಡುತ್ತದೆ ಎಂದರು..

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಪ್ರಾಂಶುಪಾಲರಾದ ಡಾ. ಸದಾಶಿವ ರಾಮಚಂದ್ರಗೌಡ, ಬಾಬಾ ಸಾಹೇಬರ ಜ್ಞಾನ ಮೇಧಾಶಕ್ತಿ ಎಲ್ಲವೂ ನಮ್ಮ ನಡೆ ನುಡಿ ಒಳಗೆ ಪ್ರಕಟವಾಗಬೇಕೆಂದು ಆಗ್ರಹಪಡಿಸಿದರು.

ಈ ಕಾರ್ಯಕ್ರಮದಲ್ಲಿ ಡಾ. ಬಿ. ಆರ್ ಗಂಗಾಧರಯ್ಯ, ಪ್ರೊ.ಡೊರೀನ್ ಸ್ನೇಹಲತಾ, ಪ್ರೊ. ಲಲಿತಮ್ಮ ಹಾಗೂ ಡಾ. ಸತೀಶ್ ಇಟಗಿ, ಪ್ರೊ. ನೀರಜಾ ದೇವಿ, ಡಾ. ಶೋಭಾ ಮಲ್ಹಾರಿ, ವಿನೋದ್ ಸೇರಿದಂತೆ ಮುಂತಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ: ಬೈಕ್ ಸವಾರರಿಗೆ ಹೆಲ್ಮೆಟ್ ಧರಿಸುವ ಬಗ್ಗೆ ಜಾಗೃತಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…

7 hours ago

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿಬಿದ್ದ ಗೂಡ್ಸ್ ಆಟೋ: ಚಾಲಕನಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…

10 hours ago

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ…..,

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ‌ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…

11 hours ago

ಒಂದು ವರ್ಷದೊಳಗೆ ಎತ್ತಿನಹೊಳೆ ನೀರು- ಸಚಿವ ಕೆ.ಎಚ್ ಮುನಿಯಪ್ಪ

ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…

1 day ago

ಡಿ.15ರಂದು ಕಾಣೆಯಾಗಿದ್ದ 15 ವರ್ಷದ ಬಾಲಕ ಇಂದು ಶವವಾಗಿ ಪತ್ತೆ

ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…

1 day ago

ಬಸ್ಸಿನಲ್ಲಿ 55 ಲಕ್ಷ ಹಣ ಮತ್ತು ಬಿಲ್ಡಿಂಗ್ ಗೆ ಸಂಬಂಧಿಸಿದ ದಾಖಲಾತಿಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರ ಬಂಧನ

ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…

1 day ago