ಬಾಬಾ ಸಾಹೇಬರ ದಾರಿಯಲ್ಲಿ ನಾವು ಹೊರಟರೆ ನಮ್ಮ ಬದುಕು ಶಾಂತಿ ಮತ್ತು ನೆಮ್ಮದಿಯಿಂದ ಕೂಡಿರುತ್ತದೆ- ಸಮಾಜ ಸೇವಕ ಜಿ. ರಾಜಗೋಪಾಲ್

ನಿಜವಾದ ಜ್ಞಾನಿಗಳು ಬಾಬಾ ಸಾಹೇಬರ ನಡೆ ಹಾಗೂ ಬುದ್ಧನ ದಾರಿಯಲ್ಲಿ ಅರಿತು ಹೊರಟರೆ ಇಡೀ ಜಗತ್ತೇ ಬುದ್ಧನ ಧಮ್ಮಕ್ಕೆ ಪರಿವರ್ತನೆ ಹೊಂದಿದರೂ ಆಶ್ಚರ್ಯ ವೇನಿಲ್ಲ ಎಂದು ಸಮಾಜ ಸೇವಕ ಜಿ. ರಾಜಗೋಪಾಲ್ ಅಭಿಪ್ರಾಯಪಟ್ಟರು.

ಡಾ. ಬಿ.ಆರ್ ಅಂಬೇಡ್ಕರ್ ಅಧ್ಯಯನ ಕೇಂದ್ರ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆಯೋಜಿಸಿದ್ದ 68ನೇ ಬಾಬಾ ಸಾಹೇಬರ ಪರಿನಿರ್ವಾಣ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಮಾತಾಡಿದ ಅವರು, ನಿಜವಾಗಿ ಬಾಬಾ ಸಾಹೇಬರ ದಾರಿಯಲ್ಲಿ ನಾವು ಹೊರಟರೆ ನಮ್ಮೆಲ್ಲರ ಬದುಕು ಶಾಂತಿ ಮತ್ತು ನೆಮ್ಮದಿಯಿಂದ ಕೂಡಿರುತ್ತದೆ. ಇಂದಿನ ಜಗತ್ತಿಗೆ ಬಾಬಾ ಸಾಹೇಬರ ಜ್ಞಾನ, ಬುದ್ಧನ ಮೈತ್ರಿ ಹಾಗೂ ಬಸವಣ್ಣನ ಕ್ರಾಂತಿ ಪ್ರಸ್ತುತವಾಗಿವೆ ಎಂದು ವಿದ್ಯಾರ್ಥಿಗಳಿಗೆ ಪರಿನಿರ್ವಾಣದ ಮಹತ್ವವನ್ನು ತಿಳಿಸಿದರು.

ಈ ಕಾರ್ಯಕ್ರಮದ ಪ್ರಸ್ತಾವನೆಯನ್ನು ಮಂಡಿಸಿದ ಡಾ.ಪ್ರಕಾಶ್ ಮಂಟೇದ ಬುದ್ಧನ ಪರಿನಿಬ್ಬಾಣವು ಬಹುಶಹ ಇಂದಿನ ಅನುಭೋಗ ಜಗತ್ತಿನ ರೋಗಗ್ರಸ್ಥ ಜನಕ್ಕೆ ಮದ್ದಾಗಬಲ್ಲದು ಹಾಗೂ ಬಾಬಾ ಸಾಹೇಬರು ಬುದ್ಧನನ್ನು ಕುರಿತು ಚಿಂತಿಸಿದ ಬಗೆ ಸರ್ವರ ಸುಖ ಶಾಂತಿಯ ನೆಮ್ಮದಿ ತತ್ವವನ್ನು ಹೇಳುತ್ತದೆ‌. ಅವರು ಹೇಳಿದಂತೆ, ನಾವು ತ್ಯಾಗ, ತಾಳ್ಮೆ ಮತ್ತೂ ನಿಶ್ವಾರ್ಥತೆಯಿಂದ ನಮ್ಮ ಬಲವನ್ನೆಲ್ಲ ಒಗ್ಗೂಡಿಸಿ ಕಾರ್ಯನಿರ್ವಹಿಸಬೇಕಿದೆ. ಈ ದಿಶೆಯಲ್ಲಿ ಮುಂದೆ ಅಂಬೇಡ್ಕರ್ ಅಧ್ಯಯನ ಕೇಂದ್ರವು ಬಾಬಾ ಸಾಹೇಬರ ಸಮಾಜೋರ್ಥಿಕ ಆಧ್ಯಾತ್ಮಿಕ ವಿಚಾರಗಳನ್ನು ಯುವ ಜನತೆಯ ಜೊತೆ ಹಂಚುವ ಪ್ರಯತ್ನವನ್ನು ಮಾಡುತ್ತದೆ ಎಂದರು..

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಪ್ರಾಂಶುಪಾಲರಾದ ಡಾ. ಸದಾಶಿವ ರಾಮಚಂದ್ರಗೌಡ, ಬಾಬಾ ಸಾಹೇಬರ ಜ್ಞಾನ ಮೇಧಾಶಕ್ತಿ ಎಲ್ಲವೂ ನಮ್ಮ ನಡೆ ನುಡಿ ಒಳಗೆ ಪ್ರಕಟವಾಗಬೇಕೆಂದು ಆಗ್ರಹಪಡಿಸಿದರು.

ಈ ಕಾರ್ಯಕ್ರಮದಲ್ಲಿ ಡಾ. ಬಿ. ಆರ್ ಗಂಗಾಧರಯ್ಯ, ಪ್ರೊ.ಡೊರೀನ್ ಸ್ನೇಹಲತಾ, ಪ್ರೊ. ಲಲಿತಮ್ಮ ಹಾಗೂ ಡಾ. ಸತೀಶ್ ಇಟಗಿ, ಪ್ರೊ. ನೀರಜಾ ದೇವಿ, ಡಾ. ಶೋಭಾ ಮಲ್ಹಾರಿ, ವಿನೋದ್ ಸೇರಿದಂತೆ ಮುಂತಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

ಯುಗಾದಿ…..

ವಿಶ್ವ ಮಹಾಯುದ್ಧದ ಕಾರ್ಮೋಡಗಳ ನಡುವೆ, ಅತ್ಯಂತ ಅಗತ್ಯದ ಗ್ಯಾಸ್ ಸಿಲಿಂಡರ್ಗಳ ಅಭಾವದ ನಡುವೆ, ಪ್ರಕ್ಷ್ಯುಬ್ಧ ಮನಸ್ಥಿತಿಯ ನಡುವೆ, ಸಂಭ್ರಮದ ಹೊಸ…

2 hours ago

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

12 hours ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

12 hours ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

14 hours ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

15 hours ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

17 hours ago