ನಿಜವಾದ ಜ್ಞಾನಿಗಳು ಬಾಬಾ ಸಾಹೇಬರ ನಡೆ ಹಾಗೂ ಬುದ್ಧನ ದಾರಿಯಲ್ಲಿ ಅರಿತು ಹೊರಟರೆ ಇಡೀ ಜಗತ್ತೇ ಬುದ್ಧನ ಧಮ್ಮಕ್ಕೆ ಪರಿವರ್ತನೆ ಹೊಂದಿದರೂ ಆಶ್ಚರ್ಯ ವೇನಿಲ್ಲ ಎಂದು ಸಮಾಜ ಸೇವಕ ಜಿ. ರಾಜಗೋಪಾಲ್ ಅಭಿಪ್ರಾಯಪಟ್ಟರು.
ಡಾ. ಬಿ.ಆರ್ ಅಂಬೇಡ್ಕರ್ ಅಧ್ಯಯನ ಕೇಂದ್ರ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆಯೋಜಿಸಿದ್ದ 68ನೇ ಬಾಬಾ ಸಾಹೇಬರ ಪರಿನಿರ್ವಾಣ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಮಾತಾಡಿದ ಅವರು, ನಿಜವಾಗಿ ಬಾಬಾ ಸಾಹೇಬರ ದಾರಿಯಲ್ಲಿ ನಾವು ಹೊರಟರೆ ನಮ್ಮೆಲ್ಲರ ಬದುಕು ಶಾಂತಿ ಮತ್ತು ನೆಮ್ಮದಿಯಿಂದ ಕೂಡಿರುತ್ತದೆ. ಇಂದಿನ ಜಗತ್ತಿಗೆ ಬಾಬಾ ಸಾಹೇಬರ ಜ್ಞಾನ, ಬುದ್ಧನ ಮೈತ್ರಿ ಹಾಗೂ ಬಸವಣ್ಣನ ಕ್ರಾಂತಿ ಪ್ರಸ್ತುತವಾಗಿವೆ ಎಂದು ವಿದ್ಯಾರ್ಥಿಗಳಿಗೆ ಪರಿನಿರ್ವಾಣದ ಮಹತ್ವವನ್ನು ತಿಳಿಸಿದರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಪ್ರಾಂಶುಪಾಲರಾದ ಡಾ. ಸದಾಶಿವ ರಾಮಚಂದ್ರಗೌಡ, ಬಾಬಾ ಸಾಹೇಬರ ಜ್ಞಾನ ಮೇಧಾಶಕ್ತಿ ಎಲ್ಲವೂ ನಮ್ಮ ನಡೆ ನುಡಿ ಒಳಗೆ ಪ್ರಕಟವಾಗಬೇಕೆಂದು ಆಗ್ರಹಪಡಿಸಿದರು.
ಈ ಕಾರ್ಯಕ್ರಮದಲ್ಲಿ ಡಾ. ಬಿ. ಆರ್ ಗಂಗಾಧರಯ್ಯ, ಪ್ರೊ.ಡೊರೀನ್ ಸ್ನೇಹಲತಾ, ಪ್ರೊ. ಲಲಿತಮ್ಮ ಹಾಗೂ ಡಾ. ಸತೀಶ್ ಇಟಗಿ, ಪ್ರೊ. ನೀರಜಾ ದೇವಿ, ಡಾ. ಶೋಭಾ ಮಲ್ಹಾರಿ, ವಿನೋದ್ ಸೇರಿದಂತೆ ಮುಂತಾದವರು ಭಾಗವಹಿಸಿದ್ದರು.
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…
ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…
ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್ಪಿ, ಸಿಇಒ, ಡಿಎಫ್ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶನಿವಾರ ವಿವಿಧ ದುರ್ಘಟನೆಗಳಲ್ಲಿ ಏಳು ಮಂದಿ ಮೃತಪಟ್ಟಿರುವ ಘಟನೆಗಳು ವರದಿಯಾಗಿವೆ. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಭಾಗಗಳಲ್ಲಿ…
ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…