ಬಾಬಾ ಸಾಹೇಬರ ದಾರಿಯಲ್ಲಿ ನಾವು ಹೊರಟರೆ ನಮ್ಮ ಬದುಕು ಶಾಂತಿ ಮತ್ತು ನೆಮ್ಮದಿಯಿಂದ ಕೂಡಿರುತ್ತದೆ- ಸಮಾಜ ಸೇವಕ ಜಿ. ರಾಜಗೋಪಾಲ್

ನಿಜವಾದ ಜ್ಞಾನಿಗಳು ಬಾಬಾ ಸಾಹೇಬರ ನಡೆ ಹಾಗೂ ಬುದ್ಧನ ದಾರಿಯಲ್ಲಿ ಅರಿತು ಹೊರಟರೆ ಇಡೀ ಜಗತ್ತೇ ಬುದ್ಧನ ಧಮ್ಮಕ್ಕೆ ಪರಿವರ್ತನೆ ಹೊಂದಿದರೂ ಆಶ್ಚರ್ಯ ವೇನಿಲ್ಲ ಎಂದು ಸಮಾಜ ಸೇವಕ ಜಿ. ರಾಜಗೋಪಾಲ್ ಅಭಿಪ್ರಾಯಪಟ್ಟರು.

ಡಾ. ಬಿ.ಆರ್ ಅಂಬೇಡ್ಕರ್ ಅಧ್ಯಯನ ಕೇಂದ್ರ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆಯೋಜಿಸಿದ್ದ 68ನೇ ಬಾಬಾ ಸಾಹೇಬರ ಪರಿನಿರ್ವಾಣ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಮಾತಾಡಿದ ಅವರು, ನಿಜವಾಗಿ ಬಾಬಾ ಸಾಹೇಬರ ದಾರಿಯಲ್ಲಿ ನಾವು ಹೊರಟರೆ ನಮ್ಮೆಲ್ಲರ ಬದುಕು ಶಾಂತಿ ಮತ್ತು ನೆಮ್ಮದಿಯಿಂದ ಕೂಡಿರುತ್ತದೆ. ಇಂದಿನ ಜಗತ್ತಿಗೆ ಬಾಬಾ ಸಾಹೇಬರ ಜ್ಞಾನ, ಬುದ್ಧನ ಮೈತ್ರಿ ಹಾಗೂ ಬಸವಣ್ಣನ ಕ್ರಾಂತಿ ಪ್ರಸ್ತುತವಾಗಿವೆ ಎಂದು ವಿದ್ಯಾರ್ಥಿಗಳಿಗೆ ಪರಿನಿರ್ವಾಣದ ಮಹತ್ವವನ್ನು ತಿಳಿಸಿದರು.

ಈ ಕಾರ್ಯಕ್ರಮದ ಪ್ರಸ್ತಾವನೆಯನ್ನು ಮಂಡಿಸಿದ ಡಾ.ಪ್ರಕಾಶ್ ಮಂಟೇದ ಬುದ್ಧನ ಪರಿನಿಬ್ಬಾಣವು ಬಹುಶಹ ಇಂದಿನ ಅನುಭೋಗ ಜಗತ್ತಿನ ರೋಗಗ್ರಸ್ಥ ಜನಕ್ಕೆ ಮದ್ದಾಗಬಲ್ಲದು ಹಾಗೂ ಬಾಬಾ ಸಾಹೇಬರು ಬುದ್ಧನನ್ನು ಕುರಿತು ಚಿಂತಿಸಿದ ಬಗೆ ಸರ್ವರ ಸುಖ ಶಾಂತಿಯ ನೆಮ್ಮದಿ ತತ್ವವನ್ನು ಹೇಳುತ್ತದೆ‌. ಅವರು ಹೇಳಿದಂತೆ, ನಾವು ತ್ಯಾಗ, ತಾಳ್ಮೆ ಮತ್ತೂ ನಿಶ್ವಾರ್ಥತೆಯಿಂದ ನಮ್ಮ ಬಲವನ್ನೆಲ್ಲ ಒಗ್ಗೂಡಿಸಿ ಕಾರ್ಯನಿರ್ವಹಿಸಬೇಕಿದೆ. ಈ ದಿಶೆಯಲ್ಲಿ ಮುಂದೆ ಅಂಬೇಡ್ಕರ್ ಅಧ್ಯಯನ ಕೇಂದ್ರವು ಬಾಬಾ ಸಾಹೇಬರ ಸಮಾಜೋರ್ಥಿಕ ಆಧ್ಯಾತ್ಮಿಕ ವಿಚಾರಗಳನ್ನು ಯುವ ಜನತೆಯ ಜೊತೆ ಹಂಚುವ ಪ್ರಯತ್ನವನ್ನು ಮಾಡುತ್ತದೆ ಎಂದರು..

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಪ್ರಾಂಶುಪಾಲರಾದ ಡಾ. ಸದಾಶಿವ ರಾಮಚಂದ್ರಗೌಡ, ಬಾಬಾ ಸಾಹೇಬರ ಜ್ಞಾನ ಮೇಧಾಶಕ್ತಿ ಎಲ್ಲವೂ ನಮ್ಮ ನಡೆ ನುಡಿ ಒಳಗೆ ಪ್ರಕಟವಾಗಬೇಕೆಂದು ಆಗ್ರಹಪಡಿಸಿದರು.

ಈ ಕಾರ್ಯಕ್ರಮದಲ್ಲಿ ಡಾ. ಬಿ. ಆರ್ ಗಂಗಾಧರಯ್ಯ, ಪ್ರೊ.ಡೊರೀನ್ ಸ್ನೇಹಲತಾ, ಪ್ರೊ. ಲಲಿತಮ್ಮ ಹಾಗೂ ಡಾ. ಸತೀಶ್ ಇಟಗಿ, ಪ್ರೊ. ನೀರಜಾ ದೇವಿ, ಡಾ. ಶೋಭಾ ಮಲ್ಹಾರಿ, ವಿನೋದ್ ಸೇರಿದಂತೆ ಮುಂತಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

4 hours ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

1 day ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

2 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

2 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

3 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

3 days ago