ನಿಜವಾದ ಜ್ಞಾನಿಗಳು ಬಾಬಾ ಸಾಹೇಬರ ನಡೆ ಹಾಗೂ ಬುದ್ಧನ ದಾರಿಯಲ್ಲಿ ಅರಿತು ಹೊರಟರೆ ಇಡೀ ಜಗತ್ತೇ ಬುದ್ಧನ ಧಮ್ಮಕ್ಕೆ ಪರಿವರ್ತನೆ ಹೊಂದಿದರೂ ಆಶ್ಚರ್ಯ ವೇನಿಲ್ಲ ಎಂದು ಸಮಾಜ ಸೇವಕ ಜಿ. ರಾಜಗೋಪಾಲ್ ಅಭಿಪ್ರಾಯಪಟ್ಟರು.
ಡಾ. ಬಿ.ಆರ್ ಅಂಬೇಡ್ಕರ್ ಅಧ್ಯಯನ ಕೇಂದ್ರ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆಯೋಜಿಸಿದ್ದ 68ನೇ ಬಾಬಾ ಸಾಹೇಬರ ಪರಿನಿರ್ವಾಣ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಮಾತಾಡಿದ ಅವರು, ನಿಜವಾಗಿ ಬಾಬಾ ಸಾಹೇಬರ ದಾರಿಯಲ್ಲಿ ನಾವು ಹೊರಟರೆ ನಮ್ಮೆಲ್ಲರ ಬದುಕು ಶಾಂತಿ ಮತ್ತು ನೆಮ್ಮದಿಯಿಂದ ಕೂಡಿರುತ್ತದೆ. ಇಂದಿನ ಜಗತ್ತಿಗೆ ಬಾಬಾ ಸಾಹೇಬರ ಜ್ಞಾನ, ಬುದ್ಧನ ಮೈತ್ರಿ ಹಾಗೂ ಬಸವಣ್ಣನ ಕ್ರಾಂತಿ ಪ್ರಸ್ತುತವಾಗಿವೆ ಎಂದು ವಿದ್ಯಾರ್ಥಿಗಳಿಗೆ ಪರಿನಿರ್ವಾಣದ ಮಹತ್ವವನ್ನು ತಿಳಿಸಿದರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಪ್ರಾಂಶುಪಾಲರಾದ ಡಾ. ಸದಾಶಿವ ರಾಮಚಂದ್ರಗೌಡ, ಬಾಬಾ ಸಾಹೇಬರ ಜ್ಞಾನ ಮೇಧಾಶಕ್ತಿ ಎಲ್ಲವೂ ನಮ್ಮ ನಡೆ ನುಡಿ ಒಳಗೆ ಪ್ರಕಟವಾಗಬೇಕೆಂದು ಆಗ್ರಹಪಡಿಸಿದರು.
ಈ ಕಾರ್ಯಕ್ರಮದಲ್ಲಿ ಡಾ. ಬಿ. ಆರ್ ಗಂಗಾಧರಯ್ಯ, ಪ್ರೊ.ಡೊರೀನ್ ಸ್ನೇಹಲತಾ, ಪ್ರೊ. ಲಲಿತಮ್ಮ ಹಾಗೂ ಡಾ. ಸತೀಶ್ ಇಟಗಿ, ಪ್ರೊ. ನೀರಜಾ ದೇವಿ, ಡಾ. ಶೋಭಾ ಮಲ್ಹಾರಿ, ವಿನೋದ್ ಸೇರಿದಂತೆ ಮುಂತಾದವರು ಭಾಗವಹಿಸಿದ್ದರು.
ಕಾಲೇಜು ಶಿಕ್ಷಣ ಇಲಾಖೆ, ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ…
ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಮಂದಿ ಸಾವು ಪ್ರಕರಣ: ಇಂಜಿನಿಯರ್ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್…
ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…
ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ…