ನಿಜವಾದ ಜ್ಞಾನಿಗಳು ಬಾಬಾ ಸಾಹೇಬರ ನಡೆ ಹಾಗೂ ಬುದ್ಧನ ದಾರಿಯಲ್ಲಿ ಅರಿತು ಹೊರಟರೆ ಇಡೀ ಜಗತ್ತೇ ಬುದ್ಧನ ಧಮ್ಮಕ್ಕೆ ಪರಿವರ್ತನೆ ಹೊಂದಿದರೂ ಆಶ್ಚರ್ಯ ವೇನಿಲ್ಲ ಎಂದು ಸಮಾಜ ಸೇವಕ ಜಿ. ರಾಜಗೋಪಾಲ್ ಅಭಿಪ್ರಾಯಪಟ್ಟರು.
ಡಾ. ಬಿ.ಆರ್ ಅಂಬೇಡ್ಕರ್ ಅಧ್ಯಯನ ಕೇಂದ್ರ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆಯೋಜಿಸಿದ್ದ 68ನೇ ಬಾಬಾ ಸಾಹೇಬರ ಪರಿನಿರ್ವಾಣ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಮಾತಾಡಿದ ಅವರು, ನಿಜವಾಗಿ ಬಾಬಾ ಸಾಹೇಬರ ದಾರಿಯಲ್ಲಿ ನಾವು ಹೊರಟರೆ ನಮ್ಮೆಲ್ಲರ ಬದುಕು ಶಾಂತಿ ಮತ್ತು ನೆಮ್ಮದಿಯಿಂದ ಕೂಡಿರುತ್ತದೆ. ಇಂದಿನ ಜಗತ್ತಿಗೆ ಬಾಬಾ ಸಾಹೇಬರ ಜ್ಞಾನ, ಬುದ್ಧನ ಮೈತ್ರಿ ಹಾಗೂ ಬಸವಣ್ಣನ ಕ್ರಾಂತಿ ಪ್ರಸ್ತುತವಾಗಿವೆ ಎಂದು ವಿದ್ಯಾರ್ಥಿಗಳಿಗೆ ಪರಿನಿರ್ವಾಣದ ಮಹತ್ವವನ್ನು ತಿಳಿಸಿದರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಪ್ರಾಂಶುಪಾಲರಾದ ಡಾ. ಸದಾಶಿವ ರಾಮಚಂದ್ರಗೌಡ, ಬಾಬಾ ಸಾಹೇಬರ ಜ್ಞಾನ ಮೇಧಾಶಕ್ತಿ ಎಲ್ಲವೂ ನಮ್ಮ ನಡೆ ನುಡಿ ಒಳಗೆ ಪ್ರಕಟವಾಗಬೇಕೆಂದು ಆಗ್ರಹಪಡಿಸಿದರು.
ಈ ಕಾರ್ಯಕ್ರಮದಲ್ಲಿ ಡಾ. ಬಿ. ಆರ್ ಗಂಗಾಧರಯ್ಯ, ಪ್ರೊ.ಡೊರೀನ್ ಸ್ನೇಹಲತಾ, ಪ್ರೊ. ಲಲಿತಮ್ಮ ಹಾಗೂ ಡಾ. ಸತೀಶ್ ಇಟಗಿ, ಪ್ರೊ. ನೀರಜಾ ದೇವಿ, ಡಾ. ಶೋಭಾ ಮಲ್ಹಾರಿ, ವಿನೋದ್ ಸೇರಿದಂತೆ ಮುಂತಾದವರು ಭಾಗವಹಿಸಿದ್ದರು.
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…